ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ; ತಾಕತ್ತು ತೋರಿಸುವುದು ಯಾವಾಗ?
Team Udayavani, Sep 12, 2022, 8:45 PM IST
ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕಚ್ಚೆ ಹರುಕ ಎಂದು ಟೀಕಿಸಿರುವ ಬಿಜೆಪಿ ಮುಖಂಡ ಸಿ.ಟಿ.ರವಿ ಅವರಿಗೆ ಕಾಂಗ್ರೆಸ್ ಟ್ವೀಟ್ನಲ್ಲಿ ತಿರುಗೇಟು ನೀಡಿದೆ.
ಸಿ.ಟಿ.ರವಿ ಅವರೇ, ಹರಿದಿರುವ ನಿಮ್ಮವರ ಕಚ್ಚೆಗಳನ್ನು ಬಿಗಿಯಾಗಿ ಕಟ್ಟಿ, ನಂತರ ಮಾತನಾಡಲು ಬನ್ನಿ ಎಂದು ವಾಗ್ಧಾಳಿ ನಡೆಸಿದೆ.
ಸಿಡಿಗೆ ತಡೆಯಾಜ್ಞೆ ತಂದವರು, ಅತ್ಯಾಚಾರ ಆರೋಪದಲ್ಲಿ ರಾಜೀನಾಮೆ ಕೊಟ್ಟವರು, ಸಾಮಾಜಿಕ ಜಾಲತಾಣ ಗಳಲ್ಲಿ ಸಾಲು, ಸಾಲು ವಿಡಿಯೋಗಳು ಹೊರಬಂದಿದ್ದು ಯಾವ ಪಕ್ಷದವರಿಂದ ಎಂದು ಪ್ರಶ್ನೆ ಮಾಡಿ ಕಚ್ಚೆಹರುಕರು ಯಾರು ಎಂಬುವುದು ಇಡೀ ದೇಶಕ್ಕೆ ತಿಳಿದಿದೆ ಎಂದು ಕಾಂಗ್ರೆಸ್ ಕುಟುಕಿದೆ.
ತಾಕತ್ತು ತೋರಿಸುವುದು ಯಾವಾಗ?: ಪಿಎಸ್ಐ ಹಗರಣ ಸಂಬಂಧ ಟ್ವೀಟ್ನಲ್ಲಿ ವಾಗ್ಬಾಣ ಪ್ರಯೋಗಿಸಿರುವ ಕಾಂಗ್ರೆಸ್, ಮುಖ್ಯಮಂತ್ರಿ ಬೊಮ್ಮಾಯಿ ಅವರೇ ನಿಮ್ಮ ತಾಕತ್ತು, ಧಮ್ ತೋರಿಸುವುದು ಯಾವಾಗ ಎಂದು ಪ್ರಶ್ನೆ ಮಾಡಿದೆ.
ಪಿಎಸ್ಐ ಹಗರಣದಲ್ಲಿ ಸರ್ಕಾರಕ್ಕೆ ಬ್ರೋಕರ್ ಆಗಿದ್ದ ಬಸವರಾಜ ದಡೇಸೂರ ಅವರು 15 ಲಕ್ಷ ರೂ.ಪಡೆದ ಸಂಗತಿಯ ಆಡಿಯೋ ನನ್ನದೇ ಎಂದು ಒಪ್ಪಿ ನಂತರ ಆರೋಪಿಸಿದವರನ್ನು ಬೆದರಿಸಿ ಉಲ್ಟಾ ಹೊಡೆದಿದ್ದರು. ಈ ವಿಡಿಯೋದಲ್ಲಿ ಶಾಸಕರ ಬಂಡವಾಳ ಬಯಲಾಗಿದೆ. ಬಸವರಾಜ ಬೊಮ್ಮಾಯಿ ಅವರೇ, ಈ ಸಂಬಂಧ ವಿಚಾರಣೆ ನಡೆಸುವ ತಾಕತ್ತು ತೋರಿಸಿ ಎಂದು ಸವಾಲು ಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್