ಕಾಂಗ್ರೆಸ್‌ ಆರೋಪ ನಿರಾಧಾರ, ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಅಶ್ವತ್ಥನಾರಾಯಣ


Team Udayavani, Nov 17, 2022, 4:17 PM IST

ashwah

ಬೆಂಗಳೂರು: ಭ್ರಷ್ಟಾಚಾರ ಮತ್ತು ಅಕ್ರಮಗಳಲ್ಲೇ ಮುಳುಗಿರುವ ಕಾಂಗ್ರೆಸ್ ನಾಯಕರಿಗೆ ಮಾಡಲು ಏನೂ ಕೆಲಸವಿಲ್ಲ. ಹೀಗಾಗಿ ಅವರೆಲ್ಲ ಹೊಂಬಾಳೆ ಎನ್ನುವ ಯಾವುದೋ ಒಂದು ಸಂಸ್ಥೆಯ ಹೆಸರನ್ನು ಹಿಡಿದುಕೊಂಡು ನನ್ನ ಮೇಲೆ ನಿರಾಧಾರ ಆರೋಪ ಮಾಡುತ್ತಿದ್ದಾರೆ. ಇಂದು ಎಂದಿನಂತೆ ಗಾಳಿಯಲ್ಲಿ ಗುಂಡು ಹೊಡೆಯುವ ಚಾಳಿಯಾಗಿದೆ. ಪದೇಪದೇ ನನ್ನ ಹೆಸರಿಗೆ ಮಸಿ ಬಳಿಯಲು ಹೊಂಚು ಹಾಕುತ್ತಿರುವ ಇವರೆಲ್ಲರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಹೊಂಬಾಳೆ (ಈಗ, ಚಿಲುಮೆ ಟ್ರಸ್ಟ್‌) ಎನ್ನುವ ಬೇರೆ ಯಾವುದೊ ಸಂಸ್ಥೆಯು ಬಿಬಿಎಂಪಿ ಮತದಾರರ ಪಟ್ಟಿಯನ್ನು ಅಕ್ರಮವಾಗಿ ಪರಿಷ್ಕರಿಸಿದ್ದು, ಇದರ ಹಿಂದೆ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಅಶ್ವತ್ಥನಾರಾಯಣ ಅವರ ಕೈವಾಡವಿದೆ ಎಂದು ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಅವರು ಗುರುವಾರ ಹೀಗೆ ಉತ್ತರಿಸಿದ್ದಾರೆ.

“ನಮ್ಮ ಸಹೋದರನದು ಕೂಡ ಹೊಂಬಾಳೆ ಎನ್ನುವ ಸಂಸ್ಥೆ ಇದ್ದು, ಸಿನಿಮಾ ನಿರ್ಮಾಣದಲ್ಲಿ ತೊಡಗಿದೆ. ಈ ಸಂಸ್ಥೆಯು ನಾಡು ಮತ್ತು ದೇಶವೇ ಮೆಚ್ಚುವಂಥ ಸಿನಿಮಾಗಳನ್ನು ಮಾಡಿ, ಗೌರವ ತಂದಿದೆ. ಈಗ ಅವರು ಹೇಳುತ್ತಿರುವ ಹೊಂಬಾಳೆ ಸಂಸ್ಥೆಗೂ ನಮ್ಮ ಸೋದರನ ಸಂಸ್ಥೆಗೂ ಯಾವುದೇ ಸಂಬಂಧವಿಲ್ಲ. ಆ ಹೆಸರನ್ನು ಇಟ್ಟುಕೊಳ್ಳಬೇಡ ಎಂದು ಹೇಳಲು, ಮಲ್ಲೇಶ್ವರಂನಲ್ಲಿ ಕಚೇರಿ ಇರಬಾರದು ಎನ್ನಲು ನಾನ್ಯಾರು? ನಾನು ತತ್ತ್ವ-ಸಿದ್ಧಾಂತಗಳಿಗಾಗಿ ರಾಜಕೀಯಕ್ಕೆ ಬಂದಿದ್ದೇನೆಯೇ ವಿನಾ ಕಾಂಗ್ರೆಸ್ಸಿನವರಂತೆ ಕುಟುಂಬ ರಾಜಕಾರಣಕ್ಕಲ್ಲ” ಎಂದು ಅವರು ನುಡಿದಿದ್ದಾರೆ.

“ಕಾಂಗ್ರೆಸ್ಸಿನಲ್ಲಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಸುರ್ಜೆವಾಲಾ ಸೇರಿದಂತೆ ಯಾರ ಬಳಿಯೂ ಗಂಭೀರ ವಿಚಾರಗಳಿಲ್ಲ. ಮತದಾರರ ಪಟ್ಟಿ ಪರಿಷ್ಕರಣೆ ಚುನಾವಣಾ ಆಯೋಗದ ಕೆಲಸ. ಅದರಲ್ಲಿ ಮುಖ್ಯಮಂತ್ರಿಗಳಿಗಾಗಲಿ, ನನಗಾಗಲಿ ಏನೂ ಇಲ್ಲ. ಯಾರಾದರೂ ತಪ್ಪು ಮಾಡಿದ್ದರೆ ಕಾಂಗ್ರೆಸ್ಸಿನವರು ಆಯೋಗಕ್ಕೆ ದೂರು ಕೊಡಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಅದು ಬಿಟ್ಟು ನನ್ನ ವಿರುದ್ಧ ಆರೋಪ ಮಾಡುವ ಚಿಲ್ಲರೆಬುದ್ಧಿ ತೋರಿಸಬಾರದು. ಹಿಂದೆ ಪಿಎಸ್‌ಐ ಹಗರಣದಲ್ಲೂ ಇವರೆಲ್ಲ ನನ್ನ ಹೆಸರನ್ನು ವಿನಾ ಕಾರಣ ಎಳೆದು ತಂದಿದ್ದರು. ಆದರೆ ಆಧಾರ ತೋರಿಸಿ ಎಂದಾಗ ಪಲಾಯನ ಮಾಡಿದರು” ಎಂದು ಅವರು ಹರಿಹಾಯ್ದರು.

“ಕಾಂಗ್ರೆಸ್ಸಿನವರು ಈಗ ಆರೋಪ ಮಾಡುತ್ತಿರುವ ಸಂಸ್ಥೆಯ ಪ್ರಮುಖ ವ್ಯಕ್ತಿ ನನ್ನೊಂದಿಗೆ ಫೋಟೋ ತೆಗೆಸಿಕೊಂಡಿರಬಹುದು. ಸಾರ್ವಜನಿಕ ಜೀವನದಲ್ಲಿರುವಾಗ ಹೀಗೆ ಸಾವಿರಾರು ಜನ ಏನೇನೋ ಕೆಲಸದ ಕಾರಣಕ್ಕೆ ಬರುತ್ತಾರೆ. ಹಾಗೆ ನೋಡಿದರೆ, ಕಾಂಗ್ರೆಸ್‌ ನಾಯಕರು ಕಳ್ಳಕಾಕರು ಮತ್ತು ಕೊಲೆಗಾರರ ಜೊತೆಯೆಲ್ಲ ಫೋಟೋ ತೆಗೆಸಿಕೊಂಡಿದ್ದಾರೆ. ರಾಜಕಾರಣಕ್ಕೆ ಬಂದ ಮೇಲೆ ಅದನ್ನೆಲ್ಲ ತಡೆಯಲು ಆಗುವುದಿಲ್ಲ” ಎಂದು ಅವರು ಮಾರುತ್ತರ ನೀಡಿದರು.

ಇದನ್ನೂ ಓದಿ:ಹಣಕಾಸು ವರ್ಗಾವಣೆ ಪ್ರಕರಣ: ಎರಡನೇ ಬಾರಿಯೂ ಆಪ್ ಮುಖಂಡ ಜೈನ್ ಬೇಲ್ ಅರ್ಜಿ ವಜಾ

ಬಿಜೆಪಿ ಸರಕಾರವು ಕೆಂಪೇಗೌಡರ ಪ್ರತಿಮೆ ಸ್ಥಾಪನೆ, ಹೂಡಿಕೆದಾರರ ಸಮಾವೇಶ, ಬೆಂಗಳೂರು ತಂತ್ರಜ್ಞಾನ ಶೃಂಗಸಭೆ ಮುಂತಾದ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಿದೆ. ಈ ಯಶಸ್ಸನ್ನು ಸಹಿಸಿ ಕೊಳ್ಳಲಾಗದೆ ಕಾಂಗ್ರೆಸ್ ನಾಯಕರು ಹೀಗೆ ಹತಾಶೆಯ ಪರಮಾವಧಿ ತಲುಪಿದ್ದಾರೆ ಎಂದು ಅವರು ಟೀಕಿಸಿದರು.

“ಮತದಾರರ ಪಟ್ಟಿ ಪರಿಷ್ಕರಣೆಯು ಚುನಾವಣಾ ಆಯೋಗದ ಮಾರ್ಗದರ್ಶನದಲ್ಲಿ ನಡೆಯುವ ಪ್ರಕ್ರಿಯೆ. ಇದು ಅಧಿಕಾರಿಗಳು ಮತ್ತಿತರರು ಮಾಡುವ ಕೆಲಸವಾಗಿದೆ. ಬಿಬಿಎಂಪಿ ಚುನಾವಣೆಗೂ ನನಗೂ ಏನಾದರೂ ಸಂಬಂಧವಿದೆಯೇ? ಇದನ್ನೆಲ್ಲ ನೋಡಿದರೆ ಕಾಂಗ್ರೆಸ್ಸಿಗರು ಯಾವ ಮಟ್ಟಕ್ಕೆ ಇಳಿದಿದ್ದಾರೆ ಎನ್ನುವುದು ಗೊತ್ತಾಗುತ್ತದೆ” ಎಂದು ಸಚಿವರು ಲೇವಡಿ ಮಾಡಿದರು

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.