ಸಿದ್ದು ಆರೋಗ್ಯ ವಿಚಾರಿಸಿದ ಕಾಂಗ್ರೆಸ್, ಬಿಜೆಪಿ ನಾಯಕರು
Team Udayavani, Dec 18, 2019, 3:05 AM IST
ಬೆಂಗಳೂರು: ಹೃದಯ ಸಂಬಂಧಿ ಕಾಯಿಲೆಯಿಂದ ಚಿಕಿತ್ಸೆ ಪಡೆದು ಮನೆ ಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹಾಗೂ ಬಿಜೆಪಿಯ ಹಿರಿಯ ನಾಯಕರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಕಾಂಗ್ರೆಸ್ನ ಹಿರಿಯ ನಾಯಕ ಕೆ.ಎಚ್.ಮುನಿಯಪ್ಪ, ಸಂಸದ ಹಾಗೂ ಬಿಜೆಪಿ ಹಿರಿಯ ನಾಯಕ ಶ್ರೀನಿವಾಸ ಪ್ರಸಾದ್, ಅರವಿಂದ ಲಿಂಬಾವಳಿ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಸಿಎಂ ಇಬ್ರಾಹಿಂ, ಸಂಸದ ಪಿ.ಸಿ.ಗದ್ದಿಗೌಡರ, ನಿಡುಮಾಮಿಡಿ ಪೀಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಸಿದ್ದರಾಮಯ್ಯ ಭೇಟಿ ನಂತರ ಶ್ರೀನಿವಾಸ್ ಪ್ರಸಾದ್ ಮಾತನಾಡಿ, ಸಂಸತ್ ಅಧಿವೇಶನ ಇದ್ದ ಕಾರಣ ಆರೋಗ್ಯ ವಿಚಾರಿಸಲು ಕೂಡಲೇ ಬರಲು ಆಗಿರಲಿಲ್ಲ. ನಾವಿಬ್ಬರೂ ಒಂದೇ ಜಿಲ್ಲೆಯ ವರು. ಬಹಳ ದಿನಗಳ ನಂತರ ಭೇಟಿ ಮಾಡಿದ್ದೇನೆ. ಆದಷ್ಟು ಬೇಗ ಗುಣ ಮುಖರಾಗಲಿ ಎಂದು ಹಾರೈಸಿರುವುದಾಗಿ ಹೇಳಿದರು.
ಇದೇ ವೇಳೆ, ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಮುಂದಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಇಂದಿರಾ ಗಾಂಧಿ ಹೆಸರಿದ್ದರೇನು ತಪ್ಪು ? ಇಂದಿರಾ ಗಾಂಧಿಯೂ ರಾಷ್ಟ್ರ ಮಟ್ಟದ ನಾಯಕಿ ಎಂದು ಹೇಳಿದರು.
ನಾಲ್ಕು ದಿನ ವಿಶ್ರಾಂತಿ: ಸಿದ್ದರಾಮಯ್ಯ ಅವರು, ನಾಲ್ಕು ದಿನಗಳ ಕಾಲ ವಿಶ್ರಾಂತಿಗಾಗಿ ಬೆಂಗಳೂರಿನಿಂದ ಹೊರಗೆ ತೆರಳಲಿದ್ದಾರೆ. ಹೀಗಾಗಿ, ಸಾರ್ವಜನಿಕರ ಭೇಟಿಗೆ ಅವಕಾಶ ಇರುವುದಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ