ಕೈ-ದಳಕ್ಕೆ ದೂರವಾಗದ ಆಪರೇಷನ್ ಆತಂಕ
Team Udayavani, Feb 3, 2019, 1:47 AM IST
ಬೆಂಗಳೂರು: ಬಜೆಟ್ ಅಧಿವೇಶನ ಹತ್ತಿರವಾಗುತ್ತಿದ್ದಂತೆ ಸಮ್ಮಿಶ್ರ ಸರ್ಕಾರದ ದೋಸ್ತಿ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ಗೆ ಮತ್ತೆ ಆಪರೇಷನ್ ಕಮಲ ಕಾರ್ಯಾಚರಣೆಯ ಆತಂಕ ಎದುರಾಗಿದೆ. ರಮೇಶ್ ಜಾರಕಿಹೊಳಿ, ನಾಗೇಂದ್ರ ಸೇರಿ ಆರು ಶಾಸಕರು ಮುಂಬೈನಲ್ಲಿದ್ದಾರೆ. ಅತೃಪ್ತ ಶಾಸಕರ ಜತೆಗೆ ಕಂಪ್ಲಿ ಗಣೇಶ್ ಸಹ ಸೇರಿಕೊಂಡಿದ್ದು, ಇನ್ನೂ ಹತ್ತು ಶಾಸಕರನ್ನು ಕಾಂಗ್ರೆಸ್ ಮತ್ತು ಜೆಡಿಎಸ್ನಿಂದ ಸೆಳೆಯುವ ಪ್ರಯತ್ನ ನಡೆಯುತ್ತಿದೆ.
ಬಿಜೆಪಿ ಮೇಲ್ನೋಟಕ್ಕೆ ‘ಆಪರೇಷನ್ ಕಮಲ’ಕ್ಕೆ ನಾವು ಕೈ ಹಾಕಿಲ್ಲ ಎಂದು ಹೇಳುತ್ತಿದೆಯಾದರೂ 16 ಶಾಸಕರು ರಾಜೀನಾಮೆ ನೀಡಿದರೆ ಕೈ ಕಟ್ಟಿ ಕೂರುವುದಿಲ್ಲ ಎಂದು ಹೇಳುತ್ತಿದೆ. ಹೀಗಾಗಿ, ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಬಿಜೆಪಿ ತೆಕ್ಕೆಗೆ ಯಾವ ಶಾಸಕರೂ ಹೋಗದಂತೆ ತಡೆಯುವ ಕಾರ್ಯತಂತ್ರ ರೂಪಿಸುತ್ತಿವೆ. ಫೆ.6ರಂದು ಜಂಟಿ ಅಧಿವೇಶನ ನಡೆಯಲಿದ್ದು, ಅದೇ ದಿನ ಅಥವಾ ಮರುದಿನ ಕಾಂಗ್ರೆಸ್,ಜೆಡಿಎಸ್ ಜಂಟಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಅಲ್ಲಿ ಶಾಸಕರ ಸಮಸ್ಯೆಗಳ ಕುರಿತು ಸಿಎಂಗೆ ಹೇಳಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಫೆ.8ರಂದು ಬಜೆಟ್ ಮಂಡನೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು