ರಾಜ್ಯಕ್ಕಿಂದು ಭಾರತ್‌ ಜೋಡೋ ಎಂಟ್ರಿ


Team Udayavani, Sep 30, 2022, 6:40 AM IST

ರಾಜ್ಯಕ್ಕಿಂದು ಭಾರತ್‌ ಜೋಡೋ ಎಂಟ್ರಿ

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಕಾವು ನಿಧಾನವಾಗಿ ಆರಂಭವಾಗಿರುವಂತೆಯೇ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರಂಭಿಸಿರುವ ಭಾರತ್‌ ಜೋಡೋ ಯಾತ್ರೆ  ಶುಕ್ರವಾರ (ಸೆ.30) ರಾಜ್ಯ ಪ್ರವೇಶಿಸಲಿದೆ.

ಕೇರಳದ ಮೂಲಕ ಚಾಮರಾಜನಗರದ ಗುಂಡ್ಲುಪೇಟೆ ಮೂಲಕ ರಾಜ್ಯವನ್ನು ಪ್ರವೇಶಿಸಲಿರುವ ಭಾರತ್‌ ಜೋಡೋ ಯಾತ್ರೆಯಲ್ಲಿ   ಶುಕ್ರವಾರದಿಂದ ರಾಜ್ಯದ ನಾಯಕರು ಹೆಜ್ಜೆ ಹಾಕಲಿದ್ದಾರೆ. ಯಾತ್ರೆ ನಡೆಯಲಿರುವ ಇಪ್ಪತ್ತೂಂದು ದಿನಗಳ ಕಾಲ ಐನೂರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರ ದಂಡು ಚಾಮರಾಜನಗರದಲ್ಲಿ ಬೀಡುಬಿಟ್ಟಿದ್ದು,  ಭರ್ಜರಿ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ಹಿನ್ನೆ°ಲೆಯಲ್ಲಿ ಭಾರತ್‌ ಜೋಡೋ ಯಾತ್ರೆ ರಾಜಕೀಯವಾಗಿಯೂ ಕಾಂಗ್ರೆಸ್‌ ಪಾಲಿಗೆ ಮಹತ್ವವಾಗಿದೆ. ಈ ನಡುವೆ, ಕೆಲವು ರಾಹುಲ್‌ ಗಾಂಧಿ ಸ್ವಾಗತಕ್ಕಾಗಿ ಅಳವಡಿಸಿರುವ ಫ್ಲೆಕ್ಸ್‌ಗಳನ್ನು ಕೆಲವು ಕಿಡಿಗೇಡಿಗಳು ವಿರೂಪಗೊಳಿಸಿರುವ ಬಗ್ಗೆ ದೂರು ದಾಖಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಕಾಂಗ್ರೆಸ್‌ ನಾಯಕರು ರಾಹುಲ್‌ಗಾಂಧಿ ಜೊತೆ ಹೆಜ್ಜೆ ಹಾಕಲಿದ್ದಾರೆ. ಯಾತ್ರೆಯ ಕುರಿತು ಸಾರ್ವಜನಿಕರಲ್ಲಿ ಅರಿಕೆ ಮಾಡಿಕೊಂಡಿರುವ ಶಿವಕುಮಾರ್‌, “ಇದು ಪಿಕ್ನಿಕ್‌ ಅಲ್ಲ ಎಂಬ ಅರಿವಿರಲಿ. ನಾವೆಲ್ಲರೂ ದಿನಕ್ಕೆ 20 ಕಿಮೀ ನಡೆಯೋಣ’ ಎಂದು ಮನವಿ ಮಾಡಿದ್ದಾರೆ. ಜತೆಗೆ, ಬೇರೆ ಪಕ್ಷದಲ್ಲಿರುವ ಸ್ನೇಹಿತರೂ ಬನ್ನಿ. ಬದಲಾವಣೆಯ ಆರಂಭ ಇಲ್ಲಿಂದಲೇ’ ಎಂದು ಹೇಳಿದ್ದಾರೆ.

ಶಿವಕುಮಾರ್‌ ಜತೆ ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್‌ ಸುರ್ಜೆವಾಲಾ ಅವರೂ ಚಾಮರಾಜನಗರಕ್ಕೆ ತೆರಳಿದ್ದಾರೆ. ರಾಜ್ಯದಲ್ಲಿ ಪಾದಯಾತ್ರೆಯ ಉಸ್ತುವಾರಿ ಪರಿಷತ್‌ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌ ವಹಿಸಿಕೊಂಡಿದ್ದಾರೆ.

ಈ ಪಾದಯಾತ್ರೆಯ ಮೂಲಕವೇ ರಾಜ್ಯ ವಿಧಾನಸಭಾ ಚುನಾವಣೆಗೆ ಚಾಲನೆ ನೀಡಬೇಕೆಂಬ ಉದ್ದೇಶದಿಂದ ಪಕ್ಷದ ಕಾರ್ಯಕರ್ತರು ಮತ್ತುಯುವಕರ ತಂಡ ರಚಿಸಿ ಭಾರತ್‌ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಸಿದ್ಧಗೊಳಿಸಲಾಗಿದೆ.

ರಾಹುಲ್‌ಗಾಂಧಿ ಅವರು ವಿವಿಧ ಸಮುದಾಯ, ಸಂಘಟನೆಗಳು, ಚಿಂತಕರ ಜೊತೆ ಸಂವಾದ ನಡೆಸಲಿದ್ದಾರೆ. ಕೆಪಿಸಿಸಿ ಹಮ್ಮಿಕೊಂಡಿರುವ ಬೃಹತ್‌ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಸೆ.30 ಮತ್ತು ಅ.1 ರಂದು ಚಾಮರಾಜನಗರ ಜಿಲ್ಲೆಯಲ್ಲಿ ಸಂಚರಿಸಲಿರುವ ಯಾತ್ರೆ, ಅಕ್ಟೋಬರ್‌  2 ರಂದು ಗಾಂಧಿಜಯಂತಿಯಂದು  ಬದನವಾಳು ಖಾದಿ ಗ್ರಾಮೋದ್ಯೋಗ ಕೇಂದ್ರದತ್ತ ಸಾಗಲಿದೆ. ರಾತ್ರಿ ಮೈಸೂರು ನಗರ ಪ್ರವೇಶಿಸಲಿದೆ. ಅಕ್ಟೋಬರ್‌ ಮೂರರಂದು ಮೈಸೂರು ನಗರದಿಂದ ಹೊರಡಲಿರುವ ಪಾದಯಾತ್ರೆ ಶ್ರೀರಂಗಪಟ್ಟಣ ತಲುಪಲಿದೆ. ಅಕ್ಟೋಬರ್‌ ನಾಲ್ಕು ಮತ್ತು ಐದ ರಂದು ಪಾದಯಾತ್ರೆಗೆ ವಿರಾಮ ನೀಡಲಾಗಿದ್ದು, ಅಕ್ಟೋಬರ್‌ ಆರರಂದು ಮಹದೇಶ್ವರ ದೇವಸ್ಥಾನದಿಂದ ಪಾದಯಾತ್ರೆ ಹೊರಡಲಿದ್ದು, ಮಂಡ್ಯ ಪ್ರವೇಶಿಸಲಿದೆ.ಮಂಡ್ಯದ ನಂತರ ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಸಂಚರಿಸಲಿದ್ದು ಅಕ್ಟೋಬರ್‌ ಇಪ್ತತ್ತರಂದು ಆಂಧ್ರಪ್ರವೇಶವನ್ನು ಪ್ರವೇಶಿಸಲಿದೆ. ಭಾರತ್‌ ಜೋಡೋ ಯಾತ್ರೆಗೆ ಆಯಾ ಜಿಲ್ಲೆಯಲ್ಲಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಸಾಥ್‌ ನೀಡಲಿದ್ದು ಯಾತ್ರೆಯ ಯಶಸ್ಸಿಗೆ ಸಕಲ ಸಿದ್ದತೆಗಳನ್ನುಮಾಡಲಾಗಿದೆ ಎಂದು ಕೆಪಿಸಿಸಿ ತಿಳಿಸಿದೆ.

ಇಂದು ಮತ್ತು ನಾಳೆ  :

ಭಾರತ್‌ ಜೋಡೋ ಯಾತ್ರೆ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯನ್ನು ಪ್ರವೇಶಿಸಲಿದ್ದು ಬೆಂಡಗಳ್ಳಿ ಮತ್ತು ಬೇಗೂರುಗಳಲ್ಲಿ ಸಾಗಲಿದೆ. ಶನಿವಾರ  ಬೇಗೂರಿನಿಂದ ಆರಂಭವಾಗಿರುವ ಪಾದಯಾತ್ರೆ ಕಳÇಗೇಟ್‌ ಮೂಲಕ ಪಾಂಡವಪುರ ಗ್ರಾಮದವರೆಗೆ ನಡೆಯಲಿದೆ.

ರಾಹುಲ್‌ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆ ದೇಶದ  ಇತಿಹಾಸದಲ್ಲಿ ಹೊಸ ಅಧ್ಯಾಯ ಸೃಷ್ಟಿಸಿದೆ. ರಾಜ್ಯದಲ್ಲಿ ಯಾತ್ರೆ ಯಶಸ್ವಿಗೊಳಿಸಲು ನಮ್ಮ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಿದ್ದಾರೆ. ನಮ್ಮ ಕಾರ್ಯಕರ್ತರ ಉತ್ಸಾಹ ನೋಡಿದರೆ ಈ ಯಾತ್ರೆ ಮುಂದಿನ ರಾಜ್ಯ ಹಾಗೂ ರಾಷ್ಟ್ರ ಚುನಾವಣೆ ಮೇಲೆ ಪ್ರಭಾವ ಬೀರಲಿದೆ.– ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.