ಕಾಂಗ್ರೆಸ್ ನಿಂದ ಮುಂದುವರಿದ ಬಹಿಷ್ಕಾರ: ಸಿಎಂ ಬಂದು ಕಾದರು ಸಭೆಗೆ ಬಾರದ ಸಿದ್ದರಾಮಯ್ಯ!
Team Udayavani, Mar 9, 2021, 11:08 AM IST
ಬೆಂಗಳೂರು: ವಿಧಾನಸೌಧದಲ್ಲಿ ಇಂದು ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಹಾಜರಾಗದೆ ಬಹಿಷ್ಕರಿಸಿತು. ಸೋಮವಾರ ಬಜೆಟ್ ಮಂಡನೆ ವೇಳೆ ಸದನದಿಂದ ಸಭಾತ್ಯಾಗ ಮಾಡಿದ್ದ ಕಾಂಗ್ರೆಸ್ ಇಂದು ಕೂಡಾ ಬಿಎಸಿ ಸಭೆಗೂ ಹಾಜರಾಗದೆ ಅಸಮಾಧಾನ ತೋರಿತು.
ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಹೀಗಾಗಿ ಇಂದು ಸಭೆ ಹಾಜರಾಗಬೇಕಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಗೈರಾದರು.
ಇದನ್ನೂ ಓದಿ:ಸಿಡಿ ಬಗ್ಗೆ 4 ತಿಂಗಳ ಮೊದಲೇ ಗೊತ್ತಿತ್ತು, ನಾನು ನಿರಪರಾಧಿ: ಕಣ್ಣೀರಿಟ್ಟ ರಮೇಶ್ ಜಾರಕಿಹೊಳಿ
ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಇಂದಿನ ಬಿಎಸಿ ಸಭೆ ಮಹತ್ವ ಪಡೆದಿತ್ತು. ಆದರೆ ಸಿಎಂ ಯಡಿಯೂರಪ್ಪ ಸಭೆಗೆ ಬಂದರೂ ಸಿದ್ದರಾಮಯ್ಯ ಬಂದಿರಲಿಲ್ಲ. ಸಿಎಂ ಬಿಎಸ್ ವೈ ಸಭೆಗೆ ಬಂದು ಹತ್ತು ನಿಮಿಷ ಕಾದು ಕುಳಿತರು.
ಈ ಬಗ್ಗೆ ಮಾತನಾಡಿದ ಸಚಿವ ಬಸವರಾಜ್ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಿರಿಯರಿದ್ದಾರೆ, ಅನುಭವಿಗಳಿದ್ದಾರೆ. ರಾಜಕೀಯ ಕಾರಣಕ್ಕೋಸ್ಕರ ಸಭೆ ಬಹಿಷ್ಕಾರ ಮಾಡುವುದು ಸರಿಯಲ್ಲ. ಏನೇ ಇದ್ದರೂ ವಿಧಾನಸಭೆಯೊಳಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳೋಣ ಎಂದರು.
ಇದನ್ನೂ ಓದಿ: ಬ್ರಿಟನ್ ರಾಜಮನೆತನದ ಅಸಲಿ ಮುಖ ಬಿಚ್ಚಿಟ್ಟ ಪ್ರಿನ್ಸ್ ಹ್ಯಾರಿ ಮತ್ತು ಮೆಘನ್ ಮಾರ್ಕೆಲ್
ಬಜೆಟ್ ಬಗ್ಗೆ ಚರ್ಚೆ ಮಾಡದೇ ಬಹಿಷ್ಕಾರ ಮಾಡಿದರೆ ಏನು ಪ್ರಯೋಜನ? ಸಭೆಯಲ್ಲಿ ಬಂದು ಜನರ ವಿಚಾರಗಳನ್ನು ಚರ್ಚೆ ಮಾಡೋಣ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಇತಿಹಾಸದಲ್ಲಿ ಯಾವತ್ತೂ ಕೂಡ ಈ ರೀತಿಯಾಗಿಲ್ಲ. ಮಾಧ್ಯಮಗಳ ಮೂಲಕವೇ ಸಭೆಗೆ ಹಾಜರಾಗುವಂತೆ ಸಿದ್ದರಾಮಯ್ಯ ಬಳಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…