ಇಂದಿನಿಂದ ಕಾಂಗ್ರೆಸ್‌ ಪ್ರಚಾರ ಆರಂಭ: ಕುರುಡುಮಲೆ ದೇವಸ್ಥಾನದಲ್ಲಿ “ಪ್ರಜಾಧ್ವನಿ-2′ ಚಾಲನೆ


Team Udayavani, Apr 6, 2024, 6:45 AM IST

ಇಂದಿನಿಂದ ಕಾಂಗ್ರೆಸ್‌ ಪ್ರಚಾರ ಆರಂಭ: ಕುರುಡುಮಲೆ ದೇವಸ್ಥಾನದಲ್ಲಿ “ಪ್ರಜಾಧ್ವನಿ-2′ ಚಾಲನೆ

ಬೆಂಗಳೂರು/ಕೋಲಾರ: ಲೋಕಸಭಾ ಚುನಾವಣೆಯ ಮೊದಲನೇ ಹಂತದ ಅಖಾಡ ಬಿಸಿಯೇರಿದ್ದು, ಇಂದಿನಿಂದ(ಎ.6) ಕಾಂಗ್ರೆಸ್‌ ಪಕ್ಷ ತನ್ನ ಪ್ರಚಾರ ಕಾರ್ಯಕ್ಕೆ ವಿಧ್ಯುಕ್ತ ಆರಂಭ ನೀಡುತ್ತಿದೆ. ಕೋಲಾರದ ಮುಳಬಾಗಿಲಿನಲ್ಲಿರುವ ಪುರಾಣ ಪ್ರಸಿದ್ಧ ಕುರುಡುಮಲೆ ವಿನಾಯಕ ದೇಗುಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಪೂಜೆ ಸಲ್ಲಿಸುವ ಮೂಲಕ “ಪ್ರಜಾಧ್ವನಿ-2’ಕ್ಕೆ ಚಾಲನೆ ನೀಡಲಿದ್ದಾರೆ.

ಶನಿವಾರ ಬೆಳಗ್ಗೆ 10.30ಕ್ಕೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿರುವ ಕುರುಡುಮಲೆ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ಚುನಾವಣ ಪ್ರಚಾರಕ್ಕೆ ಕೆಪಿಸಿಸಿ ಅಧಿಕೃತ ಚಾಲನೆ ನೀಡಲಿದೆ. ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಿದ ಬಳಿಕ ಮುಳಬಾಗಿಲು ನಗರದ ಬಾಬಾ ಹೈದರ್‌ವಲ್ಲಿ ದರ್ಗಾಕ್ಕೆ ಸಿಎಂ, ಡಿಸಿಎಂ ಸಹಿತ ಕಾಂಗ್ರೆಸ್‌ ಮುಖಂಡರು ಭೇಟಿ ನೀಡಲಿದ್ದು, ನಂತರ ಡಾ| ಅಂಬೇಡ್ಕರ್‌ ವೃತ್ತದಲ್ಲಿ ಡಾ| ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.

ಪ್ರಜಾಧ್ವನಿ ಯಾತ್ರೆ ಅಂಬೇಡ್ಕರ್‌ ವೃತ್ತದಿಂದ ಹೊರಟು ಸೌಂದರ್ಯ ವೃತ್ತದವರೆಗೆ ಮೆರವಣಿಗೆ ಯಲ್ಲಿ ಸಾಗಿ ಅಲ್ಲಿ ಬಹಿರಂಗ ಪ್ರಚಾರ ನಡೆಯಲಿದೆ. ಕಾರ್ಯಕ್ರಮಕ್ಕೆ 10-15 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಸಿ.ನೀಲಕಂಠೇಗೌಡ ತಿಳಿಸಿದ್ದಾರೆ.

ಈ ಮೊದಲು ಮಾ.29ರಂದು ಕುರುಡುಮಲೆ ಹಾಗೂ ಮಾ.30ರಂದು ಹಾಸನದ ಹೊಳೆನರಸೀಪುರದಿಂದ “ಪ್ರಜಾಧ್ವನಿ-2’ಕ್ಕೆ ಚಾಲನೆ ನೀಡಲು ಕಾಂಗ್ರೆಸ್‌ ಉದ್ದೇಶಿಸಿತ್ತು. ಈ ಸಂಬಂಧ ಎಲ್ಲ ಸಿದ್ಧತೆಗಳೂ ಪೂರ್ಣಗೊಂಡಿದ್ದವು. ಆದರೆ ಕೋಲಾರದಲ್ಲಿ ಪಕ್ಷದ ನಾಯಕರ ಭಿನ್ನಮತ ಸ್ಫೋಟಗೊಂಡು, ಅದು ರಾಜೀನಾಮೆ ಪ್ರಹಸನಕ್ಕೂ ತಲುಪಿತ್ತು. ಈ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯಕ್ರಮ ಮುಂದೂಡಿಕೆಯಾಗಿತ್ತು.

ಕಳೆದ ಬಾರಿಯೂ ಇಲ್ಲಿಂದಲೇ ಪ್ರಚಾರಕ್ಕೆ ಚಾಲನೆ
ಸಾಮಾನ್ಯವಾಗಿ ಕಾಂಗ್ರೆಸ್‌ ಹಿಂದಿನಿಂದಲೂ ಕೋಲಾರದ ಕುರುಡುಮಲೆ ದೇವಸ್ಥಾನಕ್ಕೆ ಪೂಜೆ ಸಲ್ಲಿಸುವುದರೊಂದಿಗೇ ಚುನಾವಣ ಪ್ರಚಾರ ಕಾರ್ಯವನ್ನು ಆರಂಭಿಸುತ್ತದೆ. ಕಳೆದ ವಿಧಾನಸಭಾ ಚುನಾವಣೆ ವೇಳೆಯೂ ಇಲ್ಲಿಂದಲೇ ಪ್ರಚಾರಕ್ಕೆ ಚಾಲನೆ ನೀಡಲಾಗಿತ್ತು. ಉಳಿದ ರಾಜಕೀಯ ಪಕ್ಷಗಳು ಕೂಡ ಈ ಹಿಂದೆ ಕುರುಡುಮಲೆಗೆ ಪೂಜೆ ಸಲ್ಲಿಸಿಪ್ರಚಾರ ಆರಂಭಿಸಿದ್ದನ್ನು ಇಲ್ಲಿ ಸ್ಮರಿಸ ಬಹುದು.

ಯಾವುದೇ ಚುನಾವಣೆಗಳು ಬಂದರೂ ರಾಜಕಾರಣಿಗಳು ಕೂಡುಮಲೆ ವಿನಾಯಕನ ದೇಗುಲಕ್ಕೆ ಭೇಟಿ ನೀಡಿ ಪ್ರಥಮ ಪೂಜೆ ಸಲ್ಲಿಸುವುದು ವಾಡಿಕೆ. ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕ ಎಸ್‌.ಎಂ.ಕೃಷ್ಣ ಇಲ್ಲಿ ಪೂಜೆ ಸಲ್ಲಿಸುವ ಮೂಲಕ ಪಾಂಚಜನ್ಯ ಯಾತ್ರೆ ಕೈಗೊಂಡು ಚುನಾವಣೆ ಕಹಳೆ ಮೊಳಗಿಸಿ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ಗದ್ದುಗೆ ಏರಿದ್ದರು.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.