Congress: ಕುಮಾರಸ್ವಾಮಿ, ದೇವರಾಜೇಗೌಡ ವಿರುದ್ಧ ಎಸ್ಐಟಿಗೆ ಕಾಂಗ್ರೆಸ್ ದೂರು
Team Udayavani, May 10, 2024, 7:05 AM IST
ಬೆಂಗಳೂರು: ಹಾಸನದ ಅಶ್ಲೀಲ ವೀಡಿಯೋ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕ ದೇವರಾಜೇಗೌಡ ವಿರುದ್ಧ ಎಸ್ಐಟಿಗೆ ಕಾಂಗ್ರೆಸ್ ದೂರು ಸಲ್ಲಿಸಿದೆ.
ಕಾಂಗ್ರೆಸ್ನ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಪ್ರಕಾಶ್ ನೇತೃತ್ವದ ತಂಡ ಗುರುವಾರ ಸಿಐಡಿ ಕಚೇರಿಯಲ್ಲಿರುವ ಎಸ್ಐಟಿ ಕಚೇರಿಗೆ ತೆರಳಿ ದೂರು ನೀಡಿದೆ. ಈ ಪ್ರಕರಣದಲ್ಲಿ ವೀಡಿಯೋ ಚಿತ್ರೀಕರಣ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿರುವ ವೀಡಿಯೋ ಚಿತ್ರಗಳು ಬಿಜೆಪಿ ನಾಯಕ ದೇವರಾಜೇಗೌಡ ಎಂಬವರಲ್ಲಿದೆ ಎಂದು ಅವರೇ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಹಾಗೂ ಸಂತ್ರಸ್ತರಿಗೆ ವಾಮಮಾರ್ಗದಲ್ಲಿ ಬೆದರಿಕೆ ಒಡ್ಡುವ ಹಾಗೂ ತನಿಖೆಯ ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿರುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್
Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ
HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು
Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ