ಕಾಂಗ್ರೆಸ್ ಸಾರಿಗೆ ನೌಕರರ ಪರವಾಗಿದೆ; ಡಿ.ಕೆ ಶಿವಕುಮಾರ್ ಭರವಸೆ
Team Udayavani, Dec 12, 2020, 6:43 PM IST
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಹಾಗೂ ನಗರ ರಸ್ತೆ ಸಾರಿಗೆ ಸಂಸ್ಥೆ ನೌಕರರ ಪರವಾಗಿ ಕಾಂಗ್ರೆಸ್ ನಿಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ತಮ್ಮನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂಬುದು ಸೇರಿದಂತೆ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ರಾಜ್ಯ ರಸ್ತೆ ಸಾರಿಗೆ ಹಾಗೂ ನಗರ ಸಾರಿಗೆ ಸಂಸ್ಥೆಗಳ ನೌಕರರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿನ ಬನಶಂಕರಿ ಬಸ್ ನಿಲ್ದಾಣದಲ್ಲಿ ಶನಿವಾರ ಮಧ್ಯಾಹ್ನ ಭೇಟಿ ಮಾಡಿ ಅವರ ಅಹವಾಲು ಆಲಿಸಿದರು.
ಈ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಪಕ್ಷ ನಿಮ್ಮ(ಸಾರಿಗೆ ಸಂಸ್ಥೆ ನೌಕರರು) ಪರವಾಗಿದೆ ಎಂದು ಹೇಳಲು ಸಾಂಕೇತಿಕವಾಗಿ ಇಲ್ಲಿಗೆ ಬಂದಿದ್ದೇನೆ. ನೀವು ಹಗಲು-ರಾತ್ರಿ ಜನರ ಸೇವೆಗೆ ಶ್ರಮಿಸುತ್ತಿದ್ದೀರಿ. ನಿಮ್ಮ ಒತ್ತಡ ಏನು ಎಂಬುದರ ಬಗ್ಗೆ ಅರಿವಿದೆ. ಕೋವಿಡ್ ಸಮಯದಲ್ಲಿ ತಾವು ಪಟ್ಟ ಶ್ರಮ, ಮಾಡಿದ ತ್ಯಾಗವನ್ನು ಯಾರೂ ಮರೆಯಲು ಸಾಧ್ಯವಿಲ್ಲ.
ಅನೇಕರು ವೇತನೆ ಸಿಗದೆ ಎಷ್ಟು ತೊಂದರೆ ಅನುಭವಿಸಿದ್ದೀರಿ ಅಂತಲೂ ಗೊತ್ತಿದೆ. ನಾನು, ನಮ್ಮ ವಿರೋಧ ಪಕ್ಷದ ನಾಯಕರು ಈ ವಿಚಾರದಲ್ಲಿ ಹೋರಾಟ ಮಾಡಿದ್ದೇವೆ. ರಾಜ್ಯ ಸರ್ಕಾರ 5 ಸಾವಿರ ರೂಪಾಯಿ ನೆರವು ಕೊಡುತ್ತೇವೆ ಎಂದು ಹೇಳಿತು. ಜತೆಗೆ 1600 ಕೋಟಿ ರೂಪಾಯಿ ಕೋವಿಡ್ ಪ್ಯಾಕೇಜ್ ಘೋಷಿಸಿತು. ಕೇಂದ್ರದವರು 20 ಲಕ್ಷ ಕೋಟಿ ರೂಪಾಯಿ ನೆರವು ಎಂದರು. ಆದರೆ 5 ಸಾವಿರ ರುಪಾಯಿ ನೆರವು ಕೊಡಲು ಈ ಸರ್ಕಾರಕ್ಕೆ ನೀಡಲು ಸಾಧ್ಯವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಅಧಿಕಾರಿಗಳ ಒತ್ತಡಕ್ಕೆ ಮಣಿದು ಕೆಲಸಕ್ಕೆ ಹಾಜರಾದ ಬಸ್ ಚಾಲಕ ಹೃದಯಾಘಾತದಿಂದ ಸಾವು
ಇಂದು ನಿಮ್ಮ ನೋವನ್ನು ವ್ಯಕ್ತಪಡಿಸುತ್ತಿರುವಿರಿ. ಆದರೆ ನಿಮ್ಮ ನೋವಿಗೆ ಮಂತ್ರಿಗಳು ಸ್ಪಂದಿಸಿಲ್ಲ. ಮುಖ್ಯಮಂತ್ರಿಗಳು ಕೇಳುತ್ತಿಲ್ಲ. ಸರ್ಕಾರದ ಪರವಾಗಿ ಶಾಸಕರೂ ಬಂದಿಲ್ಲ. ಅವರು ಎಲ್ಲಿದ್ದಾರೆ ಎಂದು ಹುಡುಕುವ ಪರಿಸ್ಥಿತಿ ಬಂದಿದೆ. ನಾನು ಇಂಧನ ಮಂತ್ರಿಯಾಗಿದ್ದಾಗ ಕೆಇಬಿಯವರಿಗೆ ವೇತನ ಭತ್ಯೆ ಹೆಚ್ಚಿಸಲಾಗಿತ್ತು. ಕೆಇಬಿ ಬೋರ್ಡ್ ನಲ್ಲಿ ಲೈನ್ ಮೆನ್ ಹಾಗೂ ಇಂಜಿನಿಯರ್ ಗಳ ಪರವಾಗಿ ಇಬ್ಬರು ಪ್ರತಿನಿಧಿಗಳು ಇರುತ್ತಾರೆ. ಸಭೆಯಲ್ಲಿ ಅವರ ಪರವಾಗಿ ಧ್ವನಿ ಎತ್ತುತ್ತಿದ್ದರು.
ಸರ್ಕಾರದ ಎಲ್ಲ ಶಾಸಕರುಗಳಿಗೆ, ಮಂತ್ರಿಗಳಿಗೆ ನಿಮ್ಮ ಪರವಾಗಿ ಮನವಿ ಮಾಡುತ್ತೇನೆ. 1.25 ಲಕ್ಷ ಸಾರಿಗೆ ನೌಕರರು ಇದ್ದಾರೆ. 40 ಕೋಟಿ ಜನರಿಗೆ ಸೇವೆ ನೀಡುತ್ತಿದ್ದಾರೆ. ಅವರಿಗೆ ನೀವು ರಕ್ಷಣೆ ನೀಡಬೇಕು. ನಿಮ್ಮ ಹೋರಾಟ, ನಿಮ್ಮ ನೋವಿನಲ್ಲಿ ಕಾಂಗ್ರೆಸ್ ಜತೆಗಿದೆ ಎಂದು ಹೇಳುತ್ತೇನೆ. ನಿಮ್ಮ ಪ್ರತಿನಿಧಿಗಳು ನಮ್ಮ ಕಚೇರಿಗೆ ಬರಲಿ. ನಿಮ್ಮ ಹೋರಾಟಕ್ಕೆ ಹೇಗೆ ಕೈಜೋಡಿಸಬೇಕು ಎಂಬುದನ್ನು ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಸಾರಿಗೆ ಸಂಸ್ಥೆಗಳ ಆಡಳಿತ ಮಂಡಳಿಯಲ್ಲಿ ನಿಮ್ಮ ಪ್ರತಿನಿಧಿಗಳಾಗಿ ಇಬ್ಬರನ್ನು ನೇಮಕ ಮಾಡುತ್ತೇವೆ. ನಿಮ್ಮ ಧ್ವನಿಯಾಗಿ ಆಡಳಿತ ಮಂಡಳಿಯಲ್ಲಿ ಯಾರಾದರೂ ಇರಬೇಕು. ನಿಮ್ಮ ನೋವು ಏನು ಎಂಬುದು ಅವರಿಗೂ ಅರಿವಾಗಬೇಕು. ಇದಕ್ಕೆ ಪರಿಹಾರ ಕಂಡು ಹಿಡಿಯಬೇಕು. ಸಾರಿಗೆ ಮಂತ್ರಿಗಳು ಎಲ್ಲಿದ್ದಾರೆಂದು ತಿಳಿಯುತ್ತಿಲ್ಲ ಎಂದು ಮಾಧ್ಯಮಗಳು ಪ್ರಸಾರ ಮಾಡುತ್ತಿವೆ. ಬೇರೆ ಮಂತ್ರಿಗಳು ಕೂಡ ನಿಮ್ಮ ಮನವಿ ಆಲಿಸಲು ಬರಬಹುದಿತ್ತು. ಆದರೆ ಅವರೂ ಬಂದಿಲ್ಲ. ಹಾಗಾಗಿ ಕೂಡಲೇ ಈ ಇಲಾಖೆಗೆ ಸಂಬಂಧಿಸಿದ ಈ ಪ್ರತಿಭಟನಾನಿರತ ನೌಕರರ ಒಕ್ಕೂಟದ ಪ್ರತಿನಿಧಿಗಳ ಜತೆ ಮಾತನಾಡಿ ಈ ಸಮಸ್ಯೆ ಬಗೆಹರಿಸಿ, ನ್ಯಾಯ ಕೊಡಿ ಎಂದು ನಾನು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ ಎಂದರು.
ಇದನ್ನೂ ಓದಿ: ದಲಿತರು, ಹಿಂದುಳಿದ ವರ್ಗದವರು ಗೋಮಾಂಸ ಸೇವಿಸುವುದಿಲ್ಲ: ಸಿದ್ದು ಹೇಳಿಕೆಗೆ ಸುಧಾಕರ್ ಆಕ್ರೋಶ
ನೌಕರರ ಜತೆ ಸರ್ಕಾರ ಕೂತು ಚರ್ಚಿಸಬೇಕು:
ಸರ್ಕಾರ, ಮೊದಲು ನೌಕರರ ಅಳಲು ಏನೆಂದು ಕರೆದು ಚರ್ಚಿಸಬೇಕಿತ್ತು. ಯಾರು ಕೂಡ ಸುಮ್ಮನೆ ಬೇಡಿಕೆ ಇಡುವುದಿಲ್ಲ. ಮುಖ್ಯಮಂತ್ರಿಗಳು ಕೂಡಲೇ ಪ್ರತಿಭಟನಾನಿರತ ನೌಕರರ ಜತೆ ಚರ್ಚೆ ನಡೆಸಬೇಕು. ಆಡಳಿತ ನಿಮ್ಮ ಕೈಯಲ್ಲಿದೆ. ನೀವು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕು.
ಈ ಹಿಂದೆ ಪ್ರತಿಭಟನೆಗಳು ನಡೆಯುತ್ತಿದ್ದಾಗ ನೀವೇನು ಮಾಡುತ್ತಿದ್ದಿರಿ? ಸಂಸ್ಥೆಯ ವಿವಿಧ ವಲಯವಾರು ಮಂಡಳಿಗಳಲ್ಲಿ ಕಡ್ಡಾಯವಾಗಿ ಸಾರಿಗೆ ನೌಕರರ ಪ್ರತಿನಿಧಿಗಳನ್ನು ನೇಮಕ ಮಾಡಬೇಕು. ಆಗ ಅವರ ಸಮಸ್ಯೆ ಏನು? ಇವರ ಸಮಸ್ಯೆ ಏನು? ಎಂಬುದು ಅರಿವಾಗುತ್ತದೆ. ಕೋವಿಡ್ ಸಮಯದಲ್ಲಿ ನೀವು ಕೊಟ್ಟ ಮಾತಿನಂತೆ ನಡೆದುಕೊಳ್ಳಿ. ಅದೇ ರೀತಿ ಚಾಲಕರು, ವೃತ್ತಿಆಧಾರಿತ ವರ್ಗದವರಿಗೂ ಸರ್ಕಾರ ನೀಡಬೇಕಾದ ಪರಿಹಾರ ಬಾಕಿ ಇದೆ. ಅದನ್ನು ಆದಷ್ಟು ಬೇಗ ನೀಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕಿ ಸೌಮ್ಯರೆಡ್ಡಿ, ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾದ ಪುಟ್ಟಸ್ವಾಮಿ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್, ದೊಡ್ಡ ಆಲಹಳ್ಳಿ ಕಾಂಗ್ರೆಸ್ ಮುಖಂಡ ಬಾಬು ಮತ್ತಿತರಿದ್ದರು.
ಇದನ್ನೂ ಓದಿ: ಕೊಡಪಾನದ ಒಳಗೆ ಮೂಗು ತೂರಿಸಲು ಹೋಗಿ ತಲೆ ಸಿಲುಕಿಕೊಂಡು ಒದ್ದಾಡಿದ ಬೀದಿ ನಾಯಿ | Udayavni
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ