ಕೈಗೆ ಬಂದ ತುತ್ತು ಬಾಯಿಗಿಲ್ಲ ! ನೇಮಕಾತಿ ಅಕ್ರಮ: ವರದಿ ಕೇಳಿದ ಕಾಂಗ್ರೆಸ್‌ ಹೈಕಮಾಂಡ್‌


Team Udayavani, May 3, 2022, 7:10 AM IST

ಕೈಗೆ ಬಂದ ತುತ್ತು ಬಾಯಿಗಿಲ್ಲ ! ನೇಮಕಾತಿ ಅಕ್ರಮ: ವರದಿ ಕೇಳಿದ ಕಾಂಗ್ರೆಸ್‌ ಹೈಕಮಾಂಡ್‌

ಬೆಂಗಳೂರು: ಪಿಎಸ್‌ಐ, ಪ್ರಾಧ್ಯಾಪಕರ ನೇಮಕಾತಿ ಅಕ್ರಮ, 40 ಪರ್ಸೆಂಟ್‌ ಕಮಿಷನ್‌ ಹಗರಣ ಬಗ್ಗೆ ಸಮಗ್ರ ವರದಿ ನೀಡಲು ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಹೈಕಮಾಂಡ್‌ ಸೂಚನೆ ನೀಡಿದೆ.

ಮೂರೂ ವಿಷಯಗಳಲ್ಲಿ ರಾಷ್ಟ್ರಮಟ್ಟದ ಹೋರಾಟಕ್ಕೆ ಮುಂದಾಗಿರುವ ಕಾಂಗ್ರೆಸ್‌ ಹೈಕಮಾಂಡ್‌ಗೆ ಈಗ “ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ’ ಎಂಬಂತಾಗಿದೆ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಕಾಂಗ್ರೆಸ್‌ ನಾಯಕರೂ ಭಾಗಿಯಾಗಿರುವ ಆರೋಪ ಕೇಳಿಬಂದಿರುವ ಕಾರಣ, ಹೈಕಮಾಂಡ್‌ ಈ ಕುರಿತು ವಾಸ್ತವಾಂಶದ ವರದಿ ಕೇಳಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಪಿಎಸ್‌ಐ ಮತ್ತು ಪ್ರಾಧ್ಯಾಪಕರ ನೇಮ ಕಾತಿ ಅಕ್ರಮ, ಬೇರೆ ಇಲಾಖೆಗಳಲ್ಲೂ ಶೇ. 40 ಕಮಿಷನ್‌ ಆರೋಪದ ಕುರಿತು ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುಜೇì ವಾಲ ಹೈಕಮಾಂಡ್‌ಗೆ ಪ್ರಾಥಮಿಕ ವರದಿ ನೀಡಿದ್ದರು. ಇದರ ಆಧಾರದಲ್ಲಿ ಗುಜರಾತ್‌, ಕರ್ನಾಟಕ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಷ್ಟ್ರಮಟ್ಟದ ಹೋರಾಟ ರೂಪಿಸಲು ದಿಲ್ಲಿಯ ನಾಯಕರು ತೀರ್ಮಾನಿಸಿದ್ದರು.

ಆದರೆ ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸ್ಥಳೀಯ ಕಾಂಗ್ರೆಸ್‌ ನಾಯಕರು ಕೂಡ ಭಾಗಿಯಾಗಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಮುಂದೆ ಇರಿಸು ಮುರಿಸು ಉಂಟಾಗಬಾರದು ಎಂದು ಮೂರೂ ವಿಚಾರಗಳಲ್ಲಿ ಮಾಹಿತಿ ನೀಡುವಂತೆ ನಿರ್ದೇಶನ ನೀಡಲಾಗಿದೆ.

ಪಿಎಸ್‌ಐ ಅಕ್ರಮದ ಬಗ್ಗೆ ಮೊದಲು ಮಾತನಾಡಿದ್ದು ಪ್ರಿಯಾಂಕ್‌ ಖರ್ಗೆ. ಅನಂತರ ಕೆಲವು ಕಾಂಗ್ರೆಸ್‌ ಮುಖಂಡರ ಬಂಧನ ಮತ್ತು ವಿಚಾರಣೆ ನಡೆಸಲಾಗಿದೆ. ಬಿಜೆಪಿ ನಾಯಕರು ಕಾಂಗ್ರೆಸ್‌ನತ್ತ ಕೈತೋರಿ ಸುತ್ತಿದ್ದಾರೆ. ಇದರಲ್ಲಿ ಸತ್ಯಾಂಶ ಎಷ್ಟು, ವಾಸ್ತವ ಏನು ಎಂಬುದು ಹೈಕಮಾಂಡ್‌ ಬಯಸಿರುವ ಮಾಹಿತಿ. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಂದ ಈ ಕುರಿತು ಮಾಹಿತಿ ಪಡೆದು ಅನಂತರ ಮುಂದಿನ ತೀರ್ಮಾನ ಕೈಗೊಳ್ಳಲು ಹೈಕಮಾಂಡ್‌ ನಿರ್ಧರಿಸಿದೆ ಎನ್ನಲಾಗಿದೆ.

ಹೈಕಮಾಂಡ್‌ ಅಸಮಾಧಾನ
ಈ ಮಧ್ಯೆ ಪಿಎಸ್‌ಐ ಮತ್ತು ಪ್ರಾಧ್ಯಾಪಕರ ನೇಮಕಾತಿ ಅಕ್ರಮ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್‌ ನಾಯಕರು ಪರಿಣಾಮಕಾರಿ ಹೋರಾಟ ಮಾಡುತ್ತಿಲ್ಲ. ಹೋರಾಟದಲ್ಲೂ “ಆಯ್ಕೆ’ ಮಾಡಿಕೊಳ್ಳಲಾಗುತ್ತಿದೆ ಎಂಬ ದೂರು ಹೈಕಮಾಂಡ್‌ ತಲುಪಿದೆ. ಈಶ್ವರಪ್ಪ ವಿಚಾರದಲ್ಲಿ ನಡೆದ ಹೋರಾಟ ಇತರ ಸಚಿವರ ವಿರುದ್ಧ ಆರೋಪ ಕೇಳಿ ಬಂದಾಗ ನಡೆಯಲಿಲ್ಲ. ದಾಖಲೆಗಳಿದ್ದರೂ ಮೌನ ವಹಿಸಲಾಗಿದೆ ಎಂದು ಕೆಲವು ನಾಯಕರು ದೂರು ನೀಡಿದ್ದಾರೆ. ಈ ವಿಚಾರದಲ್ಲಿ ಹೈಕಮಾಂಡ್‌ ಅಸಮಾಧಾನಗೊಂಡಿದೆ ಎಂದು ತಿಳಿದು ಬಂದಿದೆ.

ಆಡಳಿತಾರೂಢ ಬಿಜೆಪಿ ವಿರುದ್ಧ ಹೋರಾಟ ರೂಪಿಸುವಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಒಮ್ಮತದ ತೀರ್ಮಾನ ಕೈಗೊಳ್ಳುತ್ತಿಲ್ಲ. ಪ್ರತ್ಯೇಕ ಹೋರಾಟ ಮಾಡಲಾಗುತ್ತಿದೆ. ಒಂದೇ ವಿಚಾರ ವಾಗಿ ಭಿನ್ನ ಹೇಳಿಕೆ ನೀಡಲಾಗುತ್ತಿದೆ. ಇದ ರಿಂದ ಪಕ್ಷದ ನಿಲುವಿನ ಬಗ್ಗೆ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಗೊಂದಲ ಮೂಡುವಂತಾಗಿದೆ ಎಂದು ಹೆಸರು ಹೇಳಲು ಇಚ್ಛಿಸದ ನಾಯಕರೊಬ್ಬರು ಹೇಳಿದ್ದಾರೆ.

ದಿಲ್ಲಿಯಲ್ಲೇ ಹೋರಾಟದ ರೂಪುರೇಷೆ
ರಾಜ್ಯದ ವಿದ್ಯಮಾನಗಳ ಬಗ್ಗೆ ವರದಿ ಪಡೆದ ಅನಂತರ ದಿಲ್ಲಿಯಲ್ಲಿ ಪ್ರಮುಖರ ಸಭೆ ನಡೆಸಲು ಹೈಕಮಾಂಡ್‌ ತೀರ್ಮಾನಿಸಿದೆ. ಆ ಸಭೆಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಮಲ್ಲಿಕಾರ್ಜುನ ಖರ್ಗೆ, ಬಿ.ಕೆ. ಹರಿಪ್ರಸಾದ್‌, ಎಂ.ಬಿ. ಪಾಟೀಲ್‌ ಮತ್ತು ಕೆಪಿಸಿಸಿ ಕಾರ್ಯಾ ಧ್ಯಕ್ಷ ರಿಗೆ ಮಾತ್ರ ಆಹ್ವಾನ ಇರಲಿದೆ. ಆ ಸಭೆ ಯಲ್ಲಿ ಮುಂದಿನ ಹೋರಾಟದ ರೂಪುರೇಷೆ ನಿರ್ಧಾರ ವಾಗಲಿದೆ ಎಂದು ಮೂಲಗಳು ತಿಳಿಸಿವೆ.

- ಎಸ್‌. ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.