ಘಟಾನುಘಟಿಗಳನ್ನೇ ಸಚಿವ ಸ್ಥಾನದಿಂದ ದೂರ ಇಟ್ಟ ಕಾಂಗ್ರೆಸ್, ಜೆಡಿಎಸ್?
Team Udayavani, Jun 6, 2018, 11:20 AM IST
ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಮೊದಲ ಕಂತಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿದ್ದರೆ, ಜೆಡಿಎಸ್ ನಲ್ಲಿ ಸಚಿವರ ಪಟ್ಟಿ ಅಂತಿಮಗೊಳಿಸಲು ಕಸರತ್ತು ಮುಂದುವರಿದಿದೆ.
ಬಹುತೇಕವಾಗಿ ಎರಡೂ ಪಕ್ಷಗಳಲ್ಲಿ ಹಲವು ಹಿರಿಯರನ್ನು ಈ ಬಾರಿ ದೂರ ಇಡಲಾಗಿದ್ದು, ಹೊಸಬರಿಗೆ ಅವಕಾಶ ಕಲ್ಪಿಸಲಾಗಿದೆ. ಕಾಂಗ್ರೆಸ್ ಪಟ್ಟಿ ಅಂತಿಮಗೊಳಿಸಲು ರಾಹುಲ್ ಗಾಂಧಿ ಜಿ.ಪರಮೇಶ್ವರ್ ಅವರ ನೆರವು ಪಡೆದಿದ್ದಾರೆನ್ನಲಾಗಿದೆ.
ಕಾಂಗ್ರೆಸ್ ನ ಘಟಾನುಘಟಿಗಳಿಗೆ ಕೊಕ್:
ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರಕಾರದಲ್ಲಿ ಈ ಬಾರಿ ದಿನೇಶ್ ಗುಂಡೂರಾವ್, ಎಂಬಿ ಪಾಟೀಲ್ ಬಬಲೇಶ್ವರ್, ಈಶ್ವರ್ ಖಂಡ್ರೆ, ಎಸ್ ಆರ್ ಪಾಟೀಲ್, ರಾಮಲಿಂಗಾ ರೆಡ್ಡಿ, ಎಂ ಕೃಷ್ಣಪ್ಪ, ಹೆಚ್ ಕೆ ಪಾಟೀಲ್, ಸತೀಶ್ ಜಾರಕಿಹೊಳಿ ಗೆ ಸಚಿವ ಸ್ಥಾನದಿಂದ ಕೊಕ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ಜೆಡಿಎಸ್:
ಜೆಡಿಎಸ್ ನಲ್ಲಿ ಹಿರಿಯ ಶಾಸಕ, ಮಾಜಿ ಸಚಿವ ಬಸವರಾಜ್ ಹೊರಟ್ಟಿ, ಎಟಿ ರಾಮಸ್ವಾಮಿ, ಎಚ್.ವಿಶ್ವನಾಥ್, ಬಿಎಂ ಫಾರೂಕ್ ಅವರು ಸಚಿವ ಸ್ಥಾನದಿಂದ ದೂರ ಉಳಿಯುವ ನಿರ್ಧಾರ ಕೈಗೊಂಡಿದ್ದಾರೆನ್ನಲಾಗಿದೆ.
ಬುಧವಾರ ಮಧ್ಯಾಹ್ನ 2.12ಕ್ಕೆ ರಾಜಭವನದ ಗಾಜಿನಮನೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನ ನೂತನ ಸಚಿವರು ಪದಗ್ರಹಣ ಮಾಡಲಿದ್ದು, ರಾಜ್ಯಪಾಲ ವಜೂಭಾಯ್ ವಾಲಾ ಪ್ರಮಾಣವಚನ ಬೋಧಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ