ರಾಜ್ಯದಲ್ಲಿ ಈ ಬಾರಿ ಬಿಜೆಪಿಗೆ ಕೇವಲ 11 ಸ್ಥಾನ?

ಜೆಡಿಎಸ್‌ - ಕಾಂಗ್ರೆಸ್‌ ಮೈತ್ರಿಗೆ ಮುನ್ನಡೆ ; ಹಲವು ಕ್ಷೇತ್ರಗಳಲ್ಲಿ ಕ್ಲೋಸ್‌ ಫೈಟ್‌! : ‘ಪೋಲ್‌ ಐ ಸಮೀಕ್ಷೆ’ಯಲ್ಲಿ ಬಹಿರಂಗ

Team Udayavani, Apr 4, 2019, 1:58 PM IST

Poll-I-Survey-726

ಬೆಂಗಳೂರು: 2014ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಅಲೆಯ ಕಾರಣದಿಂದ 28 ಸ್ಥಾನಗಳ ಪೈಕಿ 17 ಲೋಕಸಭಾ ಸ್ಥಾನಗಳಲ್ಲಿ ಜಯಗಳಿಸಿದ್ದ ಭಾರತೀಯ ಜನತಾ ಪಕ್ಷಕ್ಕೆ ಈ ಬಾರಿ ಕಾಂಗ್ರೆಸ್‌ ಜೆಡಿಎಸ್‌ ಮೈತ್ರಿ ಭಾರೀ ಹೊಡೆತ ನೀಡಲಿದೆಯೇ? ಹೌದು ಎನ್ನುತ್ತಿದೆ ಪೋಲ್‌ ಐ ನಡೆಸಿರುವ ಚುನಾವಣಾ ಸಮೀಕ್ಷೆ.

ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗಮನಾರ್ಹ ಸಾಧನೆ ತೋರಿದ್ದರೂ ಅಧಿಕಾರಕ್ಕೇರುವಲ್ಲಿ ವಿಫ‌ಲವಾಗಿತ್ತು. ಆ ಬಳಿಕ ನಡೆದ ರಾಜಕೀಯ ವಿದ್ಯಮಾನಗಳಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪರಸ್ಪರ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರುವಂತಾಯಿತು. ಇನ್ನೂ ಮುಂದುವರೆದು ಲೋಕಸಭಾ ಚುನಾವಣೆಗೂ ಸಹ 21-7 ಮಾದರಿಯಲ್ಲಿ ಸ್ಥಾನ ಹೊಂದಾಣಿಕೆ ಮಾಡಿಕೊಂಡು ಇದೀಗ ಬಿಜೆಪಿ ಮತ್ತು ಮೋದಿ ವಿರುದ್ಧ ಕರ್ನಾಟಕದಲ್ಲಿ ಈ ಪಕ್ಷಗಳು ಟೊಂಕ ಕಟ್ಟಿ ನಿಂತಿವೆ.

ಈ ಎಲ್ಲಾ ಬೆಳವಣಿಗೆಗಳು ಈ ಬಾರಿ ರಾಜ್ಯದಿಂದ ಶತಾಯ ಗತಾಯ 22 ಸಂಸದರನ್ನು ಸಂಸತ್ತಿಗೆ ಕಳುಹಿಸಬೇಕೆಂದು ಪಣತೊಟ್ಟಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹಾಗೂ ಕಮಲ ಪಕ್ಷದ ಇತರ ನಾಯಕರಿಗೆ ತಲೆನೋವಿನ ವಿಚಾರವಾಗಿದೆ. ಈ ಚುನಾವಣಾ ಪೂರ್ವ ಸಮೀಕ್ಷೆಯಂತೆ ಕರ್ನಾಟಕದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ 17 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ ಮತ್ತು ಬಿಜೆಪಿ 11 ಸ್ಥಾನಗಳಲ್ಲಿ ಮಾತ್ರವೇ ಮುನ್ನಡೆಯನ್ನು ಕಾಯ್ದುಕೊಂಡಿದೆ. ಕಳೆದ ಬಾರಿಗಿಂತ ಬಿಜೆಪಿ ಈ ಬಾರಿ 7 ಕ್ಷೇತ್ರಗಳಲ್ಲಿ ಹಿನ್ನಡೆ ಸಾಧಿಸಿದೆ. ಇನ್ನು ಮತ ಹಂಚಿಕೆ ವಿಷಯದಲ್ಲೂ ದೋಸ್ತಿ ಪಕ್ಷಗಳೇ ಮುನ್ನಡೆಯಲ್ಲಿದ್ದು ಕಾಂಗ್ರೆಸ್‌-ಜೆಡಿಎಸ್‌ ಒಟ್ಟಾರೆ 51 ಪ್ರತಿಶತ ಮತಗಳಿಸುವ ನಿರೀಕ್ಷೆಯಿದ್ದರೆ ಬಿಜೆಪಿಯ ನಿರೀಕ್ಷಿತ ಮತಗಳಿಕೆಯ ಪ್ರಮಾಣ 45 ಪ್ರತಿಶತವಾಗಲಿದೆ ಎಂದು ಈ ಸಮೀಕ್ಷೆ ನುಡಿಯುತ್ತಿದೆ.

ಇನ್ನು ಕಳೆದ ಬಾರಿಯ ವಿಧಾನ ಸಭಾ ಚುನಾವಣೆಯ ಬಳಿಕ ತಳಮಟ್ಟದಲ್ಲಿ ಬಿಜೆಪಿಯ ಶಕ್ತಿವರ್ಧನೆಯಾಗಿರುವುದು ಹಾಗೂ ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಡುವೆ ಮತಹಂಚಿಕೆ ಪರಿಣಾಮಕಾರಿಯಾಗದೇ ಇರುವ ಎರಡು ಅಂಶಗಳಿಂದಾಗಿ ಹಲವಾರು ಕ್ಷೇತ್ರಗಳಲ್ಲಿ ಜಯಾಪಜಯದ ನಿರ್ಣಯ ಕಷ್ಟಸಾದ್ಯವಾಗಲಿದೆ ಎಂಬ ವಿಷಯವೂ ಈ ಸಮೀಕ್ಷೆಯಿಂದ ಬಯಲಾಗಿದೆ.

ಈ ಸಮೀಕ್ಷೆಯ ಪ್ರಕಾರ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳ ಗೆಲುವು 8 ಕ್ಷೇತ್ರಗಳಲ್ಲಿ ಖಚಿತವಾಗಿರುವಂತಿದೆ 4 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಪಕ್ಕಾ ಅನ್ನುವಂತಿದೆ. ಇನ್ನು 3 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲುವಿನ ಸಾಧ್ಯತೆ ಇದ್ದು ಮತ್ತೆ ನಾಲ್ಕರಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿನ ಸಾಧ್ಯತೆ ತೋರಿಬರುತ್ತಿದೆ. ಆದರೆ ಇನ್ನುಳಿದ 9 ಕ್ಷೇತ್ರಗಳಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆಲ್ಲಬಹುದು ಎಂದು ಊಹೆಮಾಡಲಾಗದಷ್ಟೂ ಟೈಟ್‌ ಫೈಟ್‌ ಇರುವುದು ಈ ಸಮೀಕ್ಷೆಯಿಂದ ಬಹಿರಂಗಗೊಂಡಿದೆ.

ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಹಿಡಿತ ಬಲವಾಗಿದ್ದರೆ ತುಮಕೂರು, ಹಾಸನ, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲೂ ಮೈತ್ರಿ ಹವಾ ಜೋರಾಗಿದೆ. ಇನ್ನು ಭಾರತೀಯ ಜನತಾ ಪಕ್ಷವು ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಬಾಗಲಕೋಟೆ ಸೇರಿದಂತೆ ಬೆಂಗಳೂರು ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳಲ್ಲಿ ಪ್ರಬಲವಾಗಿದೆ. ಆದರೆ ಕೆಲವು ಕ್ಷೇತ್ರಗಳಲ್ಲಿ ಮೂರೂ ಪಕ್ಷಗಳು ಆಂತರಿಕ ಬಂಡಾಯ ಪರಿಸ್ಥಿತಿಯನ್ನು ಎದುರಿಸುತ್ತಿರುವುದು ಅಂತಿಮ ಫ‌ಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.