ಜನರ ಜೀವದೊಂದಿಗೆ ಕೈ-ದಳ ಚೆಲ್ಲಾಟ: ಬಿಎಸ್‌ವೈ


Team Udayavani, Nov 28, 2019, 3:07 AM IST

janara

ಹೊಸಕೋಟೆ: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ತಮ್ಮ ಅಧಿಕಾರವಧಿಯಲ್ಲಾಗಲಿ, ಚುನಾವಣಾ ಪ್ರಚಾರದ ಲ್ಲಾಗಲಿ ರಾಜ್ಯದ ಅಭಿವೃದ್ದಿಯ ಬಗ್ಗೆ ಚಕಾರವೆತ್ತದೆ ಸಾಮಾನ್ಯ ಜನರ ಜೀವನದೊಂದಿಗೆ ಚೆಲ್ಲಾಟವಾಡುತ್ತಿವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ತಾಲೂಕಿನ ಖಾಜಿ ಹೊಸಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತ ಮಂಜುನಾಥ್‌ ಮೇಲೆ ನಡೆದಿರುವ ಹಲ್ಲೆಯನ್ನು ಉಲ್ಲೇಖೀಸಿ ಚುನಾವಣೆ ಸಂದರ್ಭದಲ್ಲಿ ನಡೆಯುವ ಗೂಂಡಾಗಿರಿಯನ್ನು ಹುಟ್ಟಡಗಿಸಲು ಸರಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರದ ಅಸ್ತಿತ್ವಕ್ಕಾಗಿ ಸಚಿವ ಸ್ಥಾನವನ್ನೇ ತ್ಯಾಗ ಮಾಡಿರುವ, ಪ್ರಾಮಾಣಿಕತೆಗೆ ಮತ್ತೂಂದು ಹೆಸರಾಗಿರುವ ಎಂಟಿಬಿ ನಾಗರಾಜ್‌ರನ್ನು ಸೋಲಿಸಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ ಎಂದು ಪುನರುಚ್ಚರಿಸಿದರು.

ಕಾಡುಗೊಡಿಯಿಂದ ನಗರಕ್ಕೆ ಮೆಟ್ರೊ ವಿಸ್ತರಣೆ, ಎಲ್ಲಾ ಗ್ರಾಮಗಳಲ್ಲೂ ಶುದ್ಧ ಕುಡಿಯುವ ನೀರಿನ ಘಟಕ ಒಳಗೊಂಡಂತೆ ಎಂಟಿಬಿ ನಾಗರಾಜ್‌ ಸಲ್ಲಿಸಿರುವ ಎಲ್ಲಾ ಪ್ರಸ್ತಾವನೆಗಳನ್ನೂ ಸಹ ಅಂಗೀಕರಿಸಿ ಮಂಜೂರು ಮಾಡಲಾಗುವುದು. ಇಡೀ ಸಂಚಿವ ಸಂಪುಟವೇ ಎಂಟಿಬಿ ನಾಗರಾಜ್‌ ಪರವಾಗಿ ಪ್ರಚಾರ ಕೈಗೊಂಡಿದ್ದು, ತಾವು ಡಿ.1ಕ್ಕೆ ಮತ್ತೂಮ್ಮೆ ಕ್ಷೇತ್ರಕ್ಕೆ ಭೇಟಿ ನೀಡುವುದಾಗಿ ತಿಳಿಸಿದರು. ಜೊತೆಗೆ, ವೀರಶೈವರು ಎಂಟಿಬಿ ನಾಗರಾಜ್‌ ಪರವಾಗಿ ಮತ ಚಲಾಯಿಸಿ ಗೆಲ್ಲಿಸಿದಲ್ಲಿ ಮಾತ್ರ ತಮಗೆ ಈಗ ಮಾಡಿರುವ ಸನ್ಮಾನ ಸಾರ್ಥಕವಾಗಲಿದೆ ಎಂದರು.

ಎಂಟಿಬಿ ನಾಗರಾಜ್‌ ಹಾಗೂ ಡಾ. ಸುಧಾಕರ್‌ ರಾಜೇನಾಮೆಗೂ ಮೊದಲು ನನ್ನನ್ನು ಭೇಟಿ ಮಾಡಿ ಚರ್ಚಿಸಿ ತೀರ್ಮಾನ ಕೈಗೊಂಡಿದ್ದಾರೆ. ಉಪಚುನಾವಣೆ ನಡೆಯುತ್ತಿರುವ ಎಲ್ಲಾ 15 ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದ್ದು ಜಾತಿ ಆಧಾರದ ಮೇಲೆ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯವಿಲ್ಲ.
-ಎಸ್‌.ಎಂ.ಕೃಷ್ಣ , ಮಾಜಿ ಮುಖ್ಯಮಂತ್ರಿ

10-15 ವರ್ಷಗಳ ಹಿಂದೆ ಹೊಡೆದಾಟಕ್ಕೆ ಖ್ಯಾತಿ ಪಡೆದಿದ್ದ ಕ್ಷೇತ್ರದಲ್ಲಿ ಇಂದು ಶಾಂತಿ ಸುವ್ಯವಸ್ಥೆ ನೆಲೆಸಲು ಎಂಟಿಬಿ ನಾಗರಾಜ್‌ ಕಾರಣರಾಗಿದ್ದಾರೆ. ಹಿಂದಿನ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತ ಚಲಾಯಿಸಿರುವ ಮತದಾರರು ಈ ಬಾರಿಯೂ ಸಹ ಎಂಟಿಬಿ ನಾಗರಾಜ್‌ಗೆ ಮತ ನೀಡಬೇಕು. ಮುಂದಿನ ಬಾಕಿ ಉಳಿದಿರುವ ಮೂರೂವರೆ ವರ್ಷಗಳ ಯಡಿಯೂರಪ್ಪ ನೇತೃತ್ವದ ಸರಕಾರವನ್ನು ಭದ್ರಗೊಳಿಸಲು ಮತದಾರರು ಆಶೀರ್ವದಿಸಬೇಕು.
-ಶೋಭಾ ಕರಂದ್ಲಾಜೆ, ಲೋಕಸಭಾ ಸದಸ್ಯೆ

ಟಾಪ್ ನ್ಯೂಸ್

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.