ಕೈ-ದಳ ಮುಳುಗುತ್ತಿರುವ ಹಡಗು: ಸಚಿವ ಜೋಶಿ
Team Udayavani, Aug 25, 2019, 3:06 AM IST
ಹುಬ್ಬಳ್ಳಿ: ಕಾಂಗ್ರೆಸ್ ಹಾಗೂ ಜೆಡಿಎಸ್ ಮುಳುಗುತ್ತಿರುವ ಹಡಗುಗಳಾಗಿದ್ದು, ಅದರಲ್ಲಿ ಪ್ರಯಾಣಿಸಿ ಪ್ರಾಣ ಕಳೆದುಕೊಳ್ಳಲು ಯಾರೂ ಬಯಸುವುದಿಲ್ಲ. ಯಾವುದೇ ಕಾರಣಕ್ಕೂ ಉಮೇಶ ಕತ್ತಿ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ವೇಳೆ ಕೆಲವರಲ್ಲಿ ಅಸಮಾಧಾನ ಉಂಟಾಗಿದೆ. ಅಂತವರನ್ನು ಸಮಾಧಾನ ಪಡಿಸುವ ಕೆಲಸ ಮಾಡುತ್ತಿದ್ದೇವೆ. ಯಾರು ಸಚಿವರಾಗಬೇಕು, ಆಗಬಾರದು ಎನ್ನುವದಕ್ಕೆ ಹೆಚ್ಚು ಒತ್ತು ನೀಡಿಲ್ಲ. ರಾಜ್ಯದಲ್ಲಿ ನಾಲ್ಕು ವರ್ಷ ಒಳ್ಳೆಯ ಆಡಳಿತ ನೀಡುವುದಕ್ಕೆ ಹೆಚ್ಚು ಗಮನ ಹರಿಸಲಾಗಿದೆ. ಉಮೇಶ ಕತ್ತಿ ಪಕ್ಷ ಬಿಡುತ್ತಾರೆ ಎಂಬುದು ಸುಳ್ಳು ಸುದ್ದಿ. ಅವರು ಸೇರಿ ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದರು.
ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಿರುವುದರ ಹಿಂದೆ ಹೊಸ ಪ್ರಯೋಗ ಇರಬಹುದು. ಮಹೇಶ ಕುಮಟಳ್ಳಿ, ಉಮೇಶ ಕತ್ತಿ ಸೇರಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನ ಮಾಡುವ ಕೆಲಸ ಪಕ್ಷದ ಹಿರಿಯರಿಂದ ನಡೆಯುತ್ತಿದೆ ಎಂದರು.
ಕಾಂಗ್ರೆಸ್-ಜೆಡಿಎಸ್ ನಾಯಕರ ಭಿನ್ನಾಭಿಪ್ರಾಯಗಳಿಂದ ಮೈತ್ರಿ ಸರ್ಕಾರ ಪತನಗೊಳ್ಳುತ್ತದೆ ಎಂದು ಈ ಹಿಂದೆಯೇ ಹೇಳಿದ್ದೆ, ಅದು ಸತ್ಯವಾಗಿದೆ. ಸಿದ್ದರಾಮಯ್ಯ ಹಾಗೂ ದೇವೇಗೌಡರ ಹೇಳಿಕೆ ಮತ್ತು ಪ್ರತಿ ಹೇಳಿಕೆಗಳು ಇದಕ್ಕೆ ಸಾಕ್ಷಿಯಾಗಿವೆ. ತಮ್ಮ ಬೇಗುದಿಯಿಂದ ಸರ್ಕಾರ ಪತನವಾಗುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ನಾಯಕರು ಸರ್ಕಾರ ಅಸ್ಥಿರಗೊಳಿಸುತ್ತಿದ್ದಾರೆ ಎಂದು ಬೊಬ್ಬೆ ಹಾಕಿದ್ದರು.
ಆದರೆ ಇದೀಗ ಎಲ್ಲವೂ ಬಹಿರಂಗಗೊಂಡಿದ್ದು, ಸೈದ್ಧಾಂತಿಕವಾಗಿ ಹೊಂದಾಣಿಕೆಯಾಗದೆ ಅಧಿಕಾರಕ್ಕಾಗಿ ಅನೈತಿಕ ಮೈತ್ರಿ ಮಾಡಿಕೊಂಡು ವಾಮಮಾರ್ಗದಿಂದ ಅಧಿಕಾರಕ್ಕೆ ಬಂದಿದ್ದರು. ಬಿಜೆಪಿಯನ್ನು ದೂರ ಇರಿಸುವುದಕ್ಕೆ ಮೈತ್ರಿ ಎಂದು ಸಬೂಬು ನೀಡುತ್ತಿದ್ದರು ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ