ಸಿಎಂ ಸಿದ್ದರಾಮಯ್ಯಗೆ ಶಾಕ್ !; ಕೈ ಬಿಟ್ಟ ರೇವಣ ಸಿದ್ದಯ್ಯ
Team Udayavani, Apr 22, 2018, 11:38 AM IST
ಮೈಸೂರು: ಸ್ಥಳೀಯ ಕಾಂಗ್ರೆಸ್ ಮುಖಂಡ,ನಿವೃತ್ತ ಐಪಿಎಸ್ ಅಧಿಕಾರಿ ರೇವಣಸಿದ್ದಯ್ಯ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದು ಸಿದ್ದರಾಮಯ್ಯ ವಿರುದ್ಧ ಹೋರಾಟಕ್ಕೆ ಸಿದ್ದವಾಗಿದ್ದಾರೆ.
ನಿನ್ನೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ರೇವಣ ಸಿದ್ದಯ್ಯ ಅವರು ಭಾನುವಾರ ಸುದ್ದಿಗೋಷ್ಠಿ ನಡೆಸಿ ಸಿದ್ದರಾಮಯ್ಯ ವಿರುದ್ಧ ಪ್ರಚಾರ ನಡೆಸುವುದಾಗಿ ಘೋಷಿಸಿದ್ದಾರೆ.
ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ಜಿ.ಟಿ.ದೇವೇಗೌಡರಿಗೆ ಬೆಂಬಲ ಸೂಚಿಸುವುದಾಗಿ ಹೇಳಿರುವ ಅವರು ವರುಣಾದಲ್ಲಿ ಬಿಜೆಪಿ ಬೆಂಬಲಿಸುವುದಾಗಿ ಹೇಳಿದ್ದಾರೆ.
‘ನನಗೆ ಕಾಂಗ್ರೆಸ್ ಪಕ್ಷದ ಬಗ್ಗೆ ವಿರೋಧ ವಿಲ್ಲ.ಸಿದ್ದರಾಮಯ್ಯ ನನ್ನ ನೇರ ವೈರಿ. ನನ್ನನ್ನು ಸಾಕು ಪ್ರಾಣಿ ರೀತಿ ನೋಡಿಕೊಂಡರು ಈಗ ನನಗೆ ಬಿಸ್ಕತ್ ಹಾಕಲು ಬಂದಿದ್ದಾರೆ’ ಎಂದು ತೀವ್ರ ಅಸಮಾಧಾನ ಹೊರಹಾಕಿದರು.
ಕೆಲ ದಿನಗಳ ಹಿಂದೆ ರೇವಣ್ಣ ಸಿದ್ದಯ್ಯ ಅವರನ್ನು ಭೇಟಿ ಮಾಡಿದ್ದ ಬಿ.ವೈ.ವಿಜಯೇಂದ್ರ, ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ರೇವಣ ಸಿದ್ದಯ್ಯ ಅವರ ತೋಟದ ಮನೆಗೆ ಭೇಟಿಯಿತ್ತ ಡಾ.ಯತೀಂದ್ರ, ಒಂದು ಗಂಟೆಗೂ ಹೆಚ್ಚು ಕಾಲ ಗೌಪ್ಯ ಮಾತುಕತೆ ನಡೆಸಿ, ಕಾಂಗ್ರೆಸ್ ಪಕ್ಷದಲ್ಲೆ ಇರುವಂತೆ ಕೋರಿದ್ದರು.
ಲಿಂಗಾಯತ ಸುಮುದಾಯದ ನಾಯಕರಾಗಿರುವ ರೇವಣ ಸಿದ್ದಯ್ಯ ಅವರು ಚಾಮುಂಡೇಶ್ವರಿ ಮತ್ತು ವರುಣಾದಲ್ಲಿ ತನ್ನದೇ ಆದ ಅಭಿಮಾನಿಗಳನ್ನು ಹೊಂದಿದ್ದು ಕ್ಷೇತ್ರದಲ್ಲಿ ನಡೆಸಬೇಕಾದ ರಣತಂತ್ರಗಳನ್ನೂ ಬಲ್ಲವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ