ಧಮ್ಕಿ ಕೇಸ್; “ಕೈ” ಮುಖಂಡ ನಾರಾಯಣಸ್ವಾಮಿ ಪೊಲೀಸರಿಗೆ ಶರಣಾಗತಿ
Team Udayavani, Feb 23, 2018, 10:24 AM IST
ಬೆಂಗಳೂರು: ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಎರಚಿದ್ದ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಶುಕ್ರವಾರ ರಾಮಮೂರ್ತಿ ನಗರ ಪೊಲೀಸರಿಗೆ ಶರಣಾಗಿದ್ದಾನೆ.
ಫೆ,21ರಂದು ನಾರಾಯಣಸ್ವಾಮಿ ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಸುರಿದು ಬೆಂಕಿಹಚ್ಚುವುದಾಗಿ ಬೆದರಿಕೆ ಒಡ್ಡಿದ್ದ. ಬಳಿಕ ಈ ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರವಾಗುವ ಮೂಲಕ ಚರ್ಚೆಗೆ ಗ್ರಾಸವಾಗಿತ್ತು.
ಕೂಡಲೇ ನಾರಾಯಣಸ್ವಾಮಿಯನ್ನು ಬಂಧಿಸುವಂತೆ ಸಿಎಂ ಸಿದ್ದರಾಮಯ್ಯನವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅದರಂತೆ ನಾರಾಯಣಸ್ವಾಮಿ ಬಂಧನಕ್ಕೆ ಮೂರು ತಂಡಗಳನ್ನು ರಚಿಸಿದ್ದರು. ಏತನ್ಮಧ್ಯೆ ನಾರಾಯಣಸ್ವಾಮಿ ಧಮ್ಕಿ ಪ್ರಕರಣ ವಿಧಾನಸಭೆಯ ಉಭಯ ಮಂಡಲಗಳಲ್ಲೂ ಪ್ರತಿಧ್ವನಿಸಿತ್ತು.