ಜಾಧವ್ ಇಕ್ಕಟ್ಟಿಗೆ ಸಿಲುಕಿಸಲು ಕೈ ಯತ್ನ?
Team Udayavani, Mar 13, 2019, 12:30 AM IST
ಬೆಂಗಳೂರು: ಪಕ್ಷದ ವಿರುದ್ಧ ಬಂಡೆದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಡಾ.ಉಮೇಶ್ ಜಾಧವ್ ರಾಜೀನಾಮೆ ಅಂಗೀಕರಿಸದಂತೆ ಕಾಂಗ್ರೆಸ್ ನಾಯಕರು, ಸ್ಪೀಕರ್ಗೆ ಮನವಿ ಮಾಡಲು ಮುಂದಾಗಿದ್ದಾರೆ. ಈ ಮೂಲಕ ಪಕ್ಷದ ಶಿಸ್ತು ಉಲ್ಲಂಘನೆ ಪ್ರಕರಣವನ್ನು ಕಾನೂನು ರೀತಿ ಹೋರಾಟಕ್ಕೆ ತೆಗೆದುಕೊಂಡು ಹೋಗಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ.
ಉಮೇಶ್ ಜಾಧವ್ ಶಾಸಕಾಂಗ ಪಕ್ಷದ ಸಭೆಗಳಿಗೆ ಹಾಜರಾಗದೇ ಪಕ್ಷದ ವಿಪ್ ಉಲ್ಲಂ ಸಿದ್ದಾರೆ ಎಂದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿದ್ದ ದೂರು ಇನ್ನೂ ಇತ್ಯರ್ಥವಾಗುವ ಮೊದಲೇ ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸುವಂತೆ ಕಾಂಗ್ರೆಸ್ ದೂರು ನೀಡಿರುವ ಹಿನ್ನೆಲೆ ಅದರ ಪೂರ್ಣ ವಿಚಾರಣೆ ಮುಕ್ತಾಯವಾಗುವವರೆಗೂ ರಾಜೀನಾಮೆ ಅಂಗೀಕರಿಸದಂತೆ ಒತ್ತಡ ಹೇರಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಅದಕ್ಕೆ ಪೂರಕವಾಗಿ ಇತ್ತೀಚೆಗೆ ಜಾಧವ್ ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದ ಬಿಜೆಪಿ ಸಭೆಯಲ್ಲಿ ಹಾಜರಾಗಿರುವುದು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿರುವುದು ಕೂಡ ಪಕ್ಷಾಂತರ ನಿಷೇಧ ಕಾಯ್ದೆ ವ್ಯಾಪ್ತಿಗೆ ಬರುವುದರಿಂದ ಅವರ ವಿರುದಟಛಿ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯ ಮಾಡುತ್ತಿದ್ದಾರೆ ಎನ್ನಲಾಗಿದೆ.
ಒಂದು ವೇಳೆ, ಬಿಜೆಪಿ ಡಾ.ಉಮೇಶ್ ಜಾಧವ್ ಅವರನ್ನು ಕಲಬುರಗಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಅಧಿಕೃವಾಗಿ ಷಿಸಿದರೆ, ಆ ಸಂದರ್ಭದಲ್ಲಿ ಸ್ಪೀಕರ್ಗೆ ಇರುವ ಪರಮಾಧಿಕಾರ ಬಳಸಿ, ಜಾಧವ್ರನ್ನು ಉಚ್ಚಾಟನೆ ಮಾಡಿಸುವ ಸಾಧ್ಯತೆಯೂ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಅಂಗೀಕಾರಕ್ಕಾಗಿ ಸ್ಪೀಕರ್ಗೆ ಪತ್ರ
ಬೆಂಗಳೂರು: ಕಲಬುರಗಿ ಜಿಲ್ಲಾ ಮುಖಂಡರ ನಡವಳಿಕೆಯಿಂದ ಬೇಸತ್ತು ಚಿಂಚೋಳಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಉಮೇಶ್ ಜಾಧವ್ ತಮ್ಮ ರಾಜೀನಾಮೆಯನ್ನು ಆದಷ್ಟು ಬೇಗ ಅಂಗೀಕರಿಸುವಂತೆ ವಿಧಾನ ಸಭಾಧ್ಯಕ್ಷ ರಮೇಶ್ ಕುಮಾರ್ಗೆ ಪತ್ರ ಬರೆದಿದ್ದಾರೆ.
ಮಾ.4 ರಂದು ವಿಧಾನ ಸಭಾಧ್ಯಕ್ಷ ರಮೇಶ್ ಕುಮಾರ್ ಅವರ ಊರು ಕೋಲಾರ ಜಿಲ್ಲೆಯ ಅಡಗಲ್ ಗ್ರಾಮಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದರು. ಆ ನಂತರ ಬಿಜೆಪಿ ಸೇರ್ಪಡೆಯಾಗಿದ್ದರು. ತಮ್ಮ ರಾಜೀನಾಮೆ ಕುರಿತು ವಿವರಣೆ ನೀಡುವಂತೆ ಸ್ಪೀಕರ್ ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ ಮೂಲಕ ನೋಟಿಸ್ ನೀಡಿದ್ದರು. ಆ ನೊಟೀಸ್ಗೆ ಸ್ಪಷ್ಟೀಕರಣ ನೀಡಲು ಜಾಧವ್, ಮಂಗಳವಾರ ವಿಧಾನಸಭೆಯ ಸ್ಪೀಕರ್ ಕಚೇರಿಗೆ ಆಗಮಿಸಿದ್ದರು.
ರಮೇಶ್ ಕುಮಾರ್ ಕಚೇರಿಯಲ್ಲಿ ಇಲ್ಲದ ಕಾರಣ ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ ಅವರನ್ನು ಭೇಟಿ ಮಾಡಿ, ತಮ್ಮ ರಾಜೀನಾಮೆಗೆ ವಿವರಣೆ ನೀಡಿದ್ದಾರೆ. ಅಲ್ಲದೇ ಸ್ಪೀಕರ್ ಆಪ್ತ ಕಾರ್ಯದರ್ಶಿಯನ್ನೂ ಭೇಟಿ ಮಾಡಿ ಮಾಹಿತಿ ನೀಡಿದ್ದಾರೆ. ಆ ನಂತರ ಸ್ಪೀಕರ್ಗೆ ಪತ್ರ ಬರೆದಿದ್ದು, ನನ್ನ ರಾಜೀನಾಮೆಯನ್ನು ವಿಳಂಬ ಮಾಡದೇ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಉಮೇಶ್ ಜಾಧವ್ ಮಾತನಾಡಿ, ಪಕ್ಷ ವಿರೋಧಿ ಚಟುವಟಿಕೆಕುರಿತು ವಿಚಾರಣೆ ಮುಂದೂಡಿಕೆಯಾಗಿದೆ ಎಂದು ಸ್ಪೀಕರ್ ಕಚೇರಿಯ ಸಿಬ್ಬಂದಿ ತಿಳಿಸಿದ್ದಾರೆ. ನನ್ನ ರಾಜೀನಾಮೆಯ ವಿಷಯವಾಗಿ ಸ್ಪೀಕರ್ ಕೆಲವು ಮಾಹಿತಿ ಕೇಳಿದ್ದರು. ಎಲ್ಲ ಮಾಹಿತಿಯನ್ನು ನೀಡಿದ್ದೇನೆ. ರಾಜೀನಾಮೆ ಅಂಗೀಕರಿಸುವ ವಿಶ್ವಾಸ ಇದೆ ಎಂದರು.
ಜನರೇ ಉತ್ತರ ಕೊಡುತ್ತಾರೆ
ಕಲಬುರಗಿಗೆ ಯಾರೇ ಬಂದರೂ ಖರ್ಗೆಯವರನ್ನು ಸೋಲಿಸಲು ಸಾಧ್ಯವಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಉಮೇಶ್ ಜಾಧವ್, ಸಾಮಾನ್ಯ ಜನರು ಹಾಗೂ ಯುವಕರ ಆಶೀರ್ವಾದ ನನ್ನ ಮೇಲಿದೆ. ಜನರು ಬದಲಾವಣೆ ಬಯಸುತ್ತಿದ್ದಾರೆ. ನನಗೆ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸ ಇದೆ. ಮೇ 23ಕ್ಕೆ ಜನರೇ ಉತ್ತರ ಕೊಡುತ್ತಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ