ಮಂತ್ರಿಗಿರಿಗಾಗಿ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಲಾಬಿ ಶುರು!
Team Udayavani, May 26, 2018, 6:10 PM IST
ನವದೆಹಲಿ: ರಾಜ್ಯ ರಾಜಕಾರಣದ ನಾಟಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ ಬೆನ್ನಲ್ಲೇ ನವದೆಹಲಿಯಲ್ಲಿ ಮಂತ್ರಿಗಿರಿಗಾಗಿ ಕಾಂಗ್ರೆಸ್ ನಾಯಕರು ಭಾರೀ ಲಾಬಿಯಲ್ಲಿ ತೊಡಗಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಕಾಂಗ್ರೆಸ್ ರಾಜ್ಯ ನಾಯಕರು ದೆಹಲಿ ತಲುಪುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿಯಲ್ಲಿ ಬೀಡು ಬಿಟ್ಟಿರುವುದಾಗಿ ವರದಿ ವಿವರಿಸಿದೆ.
ಡಿಸಿಎಂ ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂ ರಾವ್ ಎಐಸಿಸಿ ಅಧ್ಯಕ್ಷರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಮತ್ತೊಂದೆಡೆ ಡಿಕೆ ಶಿವಕುಮಾರ್, ಎಚ್ ಕೆ ಪಾಟೀಲ್, ಲಕ್ಷ್ಮಿ ಹೆಬ್ಬಾಳಕ್ಕರ್, ರೋಷನ್ ಬೇಗ್, ಎಂಬಿ ಪಾಟೀಲ್ ಸೇರಿದಂತೆ ಹಲವು ಸಚಿವ ಆಕಾಂಕ್ಷಿಗಳು ದೆಹಲಿಯಲ್ಲಿ ಲಾಬಿಯಲ್ಲಿ ತೊಡಗಿದ್ದಾರೆ ಎಂದು ವರದಿ ಹೇಳಿದೆ.