ಸಿದ್ದರಾಮಯ್ಯ ನಿವಾಸಕ್ಕೆ ಕಾಂಗ್ರೆಸ್ ನಾಯಕರ ದೌಡು
Team Udayavani, Jun 23, 2019, 3:00 AM IST
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮಧ್ಯಂತರ ಚುನಾವಣೆ “ಬಾಂಬ್’ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಶನಿವಾರವೂ ಚಟುವಟಿಕೆಗಳು ಗರಿಗೆದರಿದ್ದವು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಾಸ್ತವ್ಯ ಇರುವ “ಕಾವೇರಿ’ ನಿವಾಸಕ್ಕೆ ಸಚಿವರು, ಶಾಸಕರು ಸೇರಿ ಕಾಂಗ್ರೆಸ್ ನಾಯಕರು ಭೇಟಿ ನೀಡಿ ಮಾತುಕತೆ ನಡೆಸಿದರು.
ಸಚಿವರಾದ ಕೆ.ಜೆ.ಜಾರ್ಜ್, ಪಿ.ಟಿ.ಪರಮೇಶ್ವರ್ ನಾಯ್ಕ, ಶಾಸಕರಾದ ಶರಣಬಸಪ್ಪ ದರ್ಶನಾಪುರ, ಸುಬ್ಟಾರೆಡ್ಡಿ ಸೇರಿ ಹಲವರು ಆಗಮಿಸಿ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.