Statement: ಎಚ್ಡಿಕೆ ಹೇಳಿಕೆಗೆ ಕಾಂಗ್ರೆಸ್ ನಾಯಕರು ಗರಂ
Team Udayavani, May 25, 2024, 9:43 PM IST
ಬೆಂಗಳೂರು: ಪ್ರಜ್ವಲ್ ಪ್ರಕರಣಕ್ಕೆ ಸಿಎಂ ಸಿದ್ದರಾಮಯ್ಯ ಪುತ್ರ ರಾಕೇಶ್ ವಿಚಾರ ಎಳೆದು ತಂದಿರುವ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕರು ಕ್ಷುದ್ರಗೊಂಡಿದ್ದಾರೆ. ಸಹಕಾರ ಸಚಿವ ಕೆ.ಎನ್. ರಾಜಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಅನೇಕರು ಎಚ್ಡಿಕೆ ಹೇಳಿಕೆಗೆ ಕಿಡಿ ಕಾರಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ ರಾಕೇಶ್ ಸಿದ್ದರಾಮಯ್ಯ ವಿದೇಶಕ್ಕೆ ಹೋಗಿದ್ದು ತಪ್ಪೇ? ಅದೇನು ಕಾನೂನು ಬಾಹಿರವೇ? ಅವರ ಮೇಲೆ ಆರೋಪವಿತ್ತೇ? ತಲೆ ತಪ್ಪಿಸಿಕೊಂಡು ಹೋಗಿದ್ದರೆ? ಇದಕ್ಕೂ ಪ್ರಜ್ವಲ್ ಪ್ರಕರಣಕ್ಕೂ ಏನು ಸಂಬಂಧ. 300-400 ಹೆಣ್ಣುಮಕ್ಕಳ ಭವಿಷ್ಯ ಹಾಳು ಮಾಡಿದ ಪ್ರಕರಣಕ್ಕೆ ಇದನ್ನು ಹೋಲಿಸುತ್ತಾರಾ? ಇದು ಮಾಜಿ ಪ್ರಧಾನಿ ಕುಟುಂಬಕ್ಕೆ ಗೌರವ ತರುತ್ತದೆಯೇ? ನಿಮ್ಮ ಮನೆ ಮಗ ಎಲ್ಲಿ ಎನ್ನುವುದಕ್ಕೆ ಉತ್ತರ ಕೊಡಿ, ಬೇರೆ ಮನೆ ಮಕ್ಕಳ ಬಗ್ಗೆ ಮಾತೇಕೆ? ಎಲ್ಲ ಗೊತ್ತಿದ್ದು ಟಿಕೆಟ್ ಕೊಟ್ಟು ಪ್ರಧಾನಿ ಪ್ರಚಾರ ಮಾಡಿದ್ದೇಕೆ? ಇದು ಮೋದಿ ಬಚಾವೋ ಅಭಿಯಾನದಂತಿದೆ ಎಂದು ವ್ಯಂಗ್ಯವಾಡಿದರು.
ಇನ್ನು ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತಾಡಿ, ಸಿದ್ದರಾಮಯ್ಯ ಪುತ್ರ ರಾಕೇಶ್ ಬಗ್ಗೆ ಕುಮಾರಸ್ವಾಮಿ ಲಘುವಾಗಿ ಮಾತನಾಡಿದ್ದಾರೆ. ಆ ರೀತಿ ವೈಯಕ್ತಿಕವಾಗಿ ಹೇಳಲು ನಮ್ಮ ಬಳಿಯೂ ಸಾಕಷ್ಟು ಇರುತ್ತದೆ. ಸುಮ್ಮನೆ ಕೆಸರು ಚೆಲ್ಲುವ ಕೆಲಸ ಮಾಡಬಾರದು. ಪಾಪ ರಾಕೇಶ್ ಸಾವಾಗಿದೆ. ನೊಂದ ಸಿಎಂ ಮನಸ್ಸಿಗೆ ಮತ್ತೆ ನೋಯಿಸುವ ಕೆಲಸ ಮಾಡಬಾರದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ
Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
Train Mishap: ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ
Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು
Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.