ದೆಹಲಿಗೆ ಕಾಂಗ್ರೆಸ್ ನಾಯಕರು;ಗೊಂದಲಗಳ ಕುರಿತು ರಾಗಾ ಜೊತೆ ಚರ್ಚೆ
Team Udayavani, Sep 19, 2018, 6:00 AM IST
ಬೆಂಗಳೂರು: ಸರ್ಕಾರ ಹಾಗೂ ಪಕ್ಷದಲ್ಲಿನ ಗೊಂದಲಗಳ ಕುರಿತು ಹೈ ಕಮಾಂಡ್ ನಾಯಕರ ಜೊತೆ ಚರ್ಚಿಸಲು ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಈಗಾಗಲೇ ದೆಹಲಿಗೆ ತೆರಳಿದ್ದು,ಬುಧವಾರ ರಾಹುಲ್ ಗಾಂಧಿ ಹಾಗೂ ಹೈ ಕಮಾಂಡ್ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ.
ಜಾರಕಿಹೊಳಿ ಸಹೋದರರಿಂದ ಪಕ್ಷ ಹಾಗೂ ಸರ್ಕಾರದಲ್ಲಿ ಉಂಟಾಗಿರುವ ಗೊಂದಲ, ಡಿ.ಕೆ. ಶಿವಕುಮಾರ್ ಬಗ್ಗೆ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನ, ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್ರಿಂದ ಉಂಟಾದ ಸಮಸ್ಯೆಯ ಬಗ್ಗೆ ರಾಜ್ಯ ನಾಯಕರು ಹೈ ಕಮಾಂಡ್ ಗಮನಕ್ಕೆ ತರುವ ಸಾಧ್ಯತೆ ಇದೆ. ಇದೇ ವೇಳೆ, ರಾಜ್ಯ ವಿಧಾನ ಪರಿಷತ್ತಿನ ಖಾಲಿ ಇರುವ 6 ಸ್ಥಾನಗಳ ಪೈಕಿ ಕಾಂಗ್ರೆಸ್ಗೆ ದೊರೆಯುವ 4 ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ಕುರಿತಂತೆಯೂ ಚರ್ಚೆ ನಡೆಸಿ ಅಂತಿಮಗೊಳಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…