ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ವಿಧಾನ ಪರಿಷತ್‌ನಲ್ಲಿ ಹಾಲಿ 29 ಸದಸ್ಯ ಬಲ ಹೊಂದಿರುವ ಕಾಂಗ್ರೆಸ್‌

Team Udayavani, May 21, 2024, 6:55 AM IST

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಬೆಂಗಳೂರು: ವಿಧಾನಸಭೆಯಲ್ಲಿ 135 ಸ್ಥಾನ ಪಡೆದು ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸರಕಾರಕ್ಕೆ ವಿಧಾನಪರಿಷತ್ತಿನಲ್ಲಿ ಸಂಖ್ಯಾ ಬಲವಿಲ್ಲ. ಇದರಿಂದ ಬಹುಮತದ ಅಗ್ನಿಪರೀಕ್ಷೆಯಲ್ಲಿ ಸಾಕಷ್ಟು ಬಾರಿ ಸೋಲು ಅನುಭವಿಸಿದೆ.

ಈಗ ಶಿಕ್ಷಕರು, ಪದವೀಧರರ ಕ್ಷೇತ್ರಗಳ 6 ಹಾಗೂ ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಸೇರಿ ಒಟ್ಟು 17 ಸ್ಥಾನಗಳಿಗೆ ನಡೆಯಲಿರುವ ಚುನಾ ವಣೆಗಳಿಂದ ಕಾಂಗ್ರೆಸ್‌ ಸದಸ್ಯರ ಬಲ ಹೆಚ್ಚಾಗುವ ನಿರೀಕ್ಷೆ ಸರಕಾರದಲ್ಲಿದೆ.

ಒಟ್ಟು 75 ಸದಸ್ಯಬಲ ಹೊಂದಿರುವ ವಿಧಾನ ಪರಿಷತ್ತಿನಲ್ಲಿ ಬಹುಮತ ಸಾಬೀತುಪಡಿಸಲು ಕನಿಷ್ಠ 38 ಸ್ಥಾನಗಳಾದರೂ ಬೇಕು. ಆದರೆ ಆಡಳಿತಾರೂಢ ಕಾಂಗ್ರೆಸ್‌ ಬಳಿ 29 ಸದಸ್ಯಬಲವಿದ್ದು, ಇನ್ನೂ 9 ಸ್ಥಾನಗಳನ್ನು ಗಳಿಸಿಕೊಂಡರೆ ಬಹುಮತ ಸಿಗಲಿದೆ.

ಪ್ರಸ್ತುತ 35 ಸದಸ್ಯಬಲ ಹೊಂದಿದ್ದ ಬಿಜೆಪಿಗೆ ತೇಜಸ್ವಿನಿ ಗೌಡ, ಕೆ.ಪಿ. ನಂಜುಂಡಿ, ಆಯನೂರು ಮಂಜುನಾಥ್‌ ರಾಜೀನಾಮೆಯಿಂದ 3 ಸ್ಥಾನ ನಷ್ಟವಾಗಿ 32ಕ್ಕೆ ಇಳಿದಿದೆ. ಅದೇ ರೀತಿ ಮರಿತಿಬ್ಬೇಗೌಡ ರಾಜೀನಾಮೆಯಿಂದ ಜೆಡಿಎಸ್‌ ಸದಸ್ಯಬಲ ಏಳಕ್ಕೆ ಕುಸಿದಿದೆ. ಆದರೂ ಉಭಯ ಪಕ್ಷಗಳ ಸಂಖ್ಯೆ ಸೇರಿ 39 ಸ್ಥಾನ ಆಗುವುದರಿಂದ ಬಹುಮತದ ಅಂಚಿನಲ್ಲಿವೆ.

ಇದಲ್ಲದೆ ಜಗದೀಶ್‌ ಶೆಟ್ಟರ್‌ ಅವರ ರಾಜೀನಾಮೆಯಿಂದ ಕಾಂಗ್ರೆಸ್‌ಗೆ ಒಂದು ಸ್ಥಾನ ಕಡಿಮೆಯಾಗಿದ್ದು, ಪಕ್ಷೇತರರಾಗಿರುವ ಲಖನ್‌ ಜಾರಕಿಹೊಳಿ ಯಾರ ಪರ ಎಂಬುದು ಗೌಪ್ಯವಾಗಿದೆ. ಅನಿವಾರ್ಯ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರ ಒಂದು ಮತವೂ ಪರಿಗಣನೆಗೆ ಒಳಗಾಗುತ್ತದೆ.
ಶಿಕ್ಷಕ ಹಾಗೂ ಪದವೀಧರರ 6 ಕ್ಷೇತ್ರಗಳ ಪೈಕಿ ಮೂರು ಬಿಜೆಪಿ, ಎರಡು ಜೆಡಿಎಸ್‌ ಹಾಗೂ ಒಂದು ಮಾತ್ರ ಕಾಂಗ್ರೆಸ್‌ ತೆಕ್ಕೆಯಲ್ಲಿತ್ತು. ಜೂ.3ರಂದು ನಡೆಯಲಿರುವ ಈ ಚುನಾವಣೆಯಲ್ಲಿ ಯಾರಿಗೆ ಹೆಚ್ಚು ಮತ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಜೂ.6ರಂದು ಇದರ ಫ‌ಲಿತಾಂಶ ಹೊರಬೀಳಲಿದ್ದು, ಒಂದಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ಕಾಂಗ್ರೆಸ್‌ ಲಾಭವೇ ಆಗಲಿದೆ.ಜೂ.13ರಂದು ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಈ ಪೈಕಿ ನಾಲ್ಕು ಕಾಂಗ್ರೆಸ್‌, ಐದು ಬಿಜೆಪಿ ಮತ್ತು ಒಂದು ಜೆಡಿಎಸ್‌ ಬತ್ತಳಿಕೆಯಲ್ಲಿದ್ದ ಸ್ಥಾನಗಳಾಗಿದ್ದವು. ವಿಧಾನಸಭೆಯಲ್ಲಿ 135 ಸ್ಥಾನ ಪಡೆದಿರುವ ಕಾಂಗ್ರೆಸ್‌ ಅನಾಯಾಸವಾಗಿ 7 ಸ್ಥಾನಗಳನ್ನು ಗೆಲ್ಲಲಿದ್ದು, ಶಿಕ್ಷಕರು ಮತ್ತು ಪದವೀಧರ ಕ್ಷೇತ್ರದಿಂದ ಕನಿಷ್ಠ ಎರಡು ಸ್ಥಾನ ಗೆದ್ದರೆ ಮೇಲ್ಮನೆಯಲ್ಲೂ ಕಾಂಗ್ರೆಸ್‌ ಪಾರುಪತ್ಯವೇ ಇರಲಿದೆ.

ಪ್ರಸ್ತುತ ಬಲಾಬಲ
ಬಿಜೆಪಿ 35
ಕಾಂಗ್ರೆಸ್‌ 29
ಜೆಡಿಎಸ್‌ 8
ಸಭಾಪತಿ 1
ಪಕ್ಷೇತರ 1
ಖಾಲಿ 1
ಒಟ್ಟು 75

ಎಲ್ಲಿ, ಎಷ್ಟು ಅಭ್ಯರ್ಥಿಗಳು?
ಈಶಾನ್ಯ ಪದವೀಧರ ಕ್ಷೇತ್ರ 19
ಬೆಂಗಳೂರು ಪದವೀಧರ ಕ್ಷೇತ್ರ 15
ನೈಋತ್ಯ ಪದವೀಧರ ಕ್ಷೇತ್ರ 10
ಆಗ್ನೇಯ ಶಿಕ್ಷಕರ ಕ್ಷೇತ್ರ 15
ದಕ್ಷಿಣ ಶಿಕ್ಷಕರ ಕ್ಷೇತ್ರ 11
ನೈಋತ್ಯ ಶಿಕ್ಷಕರ ಕ್ಷೇತ್ರ 8

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.