ಗೊಡ್ಡು ಹಸುಗಳನ್ನು ಗೋಶಾಲೆಗಾದರೂ ಬಿಡಬಹುದಿತ್ತು, ಆದರೆ…: ಕುಟುಕಿದ ಕಾಂಗ್ರೆಸ್
Team Udayavani, Apr 11, 2023, 6:46 PM IST
ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ದೂರು ಸರಿಯುವ ನಿರ್ಧಾರ ಪ್ರಕಟಿಸುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದೆ.
ಯಡಿಯೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್.. ಬಿಜೆಪಿ ಎಂಬ ಕಳೆಗೆ ನೀರು ಗೊಬ್ಬರ ಹಾಕಿ ಬೆಳೆಸಿದ ನಾಯಕರನ್ನು ಅಗೌರವದ ನಿರ್ಗಮನ ದಾರಿ ತೋರಿಸಿದೆ ಬಿಜೆಪಿ. “ನಾವೇ ಎಲ್ಲ” ಎನ್ನುತ್ತಿದ್ದವರಿಗೆ “ನೀವೇನೂ ಅಲ್ಲ” ಎನ್ನುತ್ತಿದೆ ಮೊ-ಶಾ ಜೋಡಿ. ಗೊಡ್ಡು ಹಸುಗಳನ್ನು ಗೋಶಾಲೆಗಾದರೂ ಬಿಡಬಹುದಿತ್ತು, ಆದರೆ ನೇರ ಕಸಾಯಿಖಾನೆಗೇ ಕಳಿಸುತ್ತಿರುವುದು ದುರಂತ ಎಂದು ಟ್ವೀಟಾಸ್ತ್ರ ಪ್ರಯೋಗಿಸಿದೆ.
ಯಡಿಯೂರಪ್ಪನವರನ್ನು ಕಣ್ಣೀರು ಹಾಕಿಸಿ ಪದಚ್ಯುತಿ ಮಾಡಲಾಯ್ತು. ಮಾಡಿದ್ದುಣ್ಣೋ ಮಹಾರಾಯ ಎಂಬಂತೆ ಈಶ್ವರಪ್ಪನವರ ರಾಜಕೀಯವನ್ನೇ ಮುಗಿಸಿಯಾಯ್ತು. ಜಗದೀಶ್ ಶೆಟ್ಟರ್ ಕಾಲವೂ ಸನ್ನಿಹಿತ. ಅಲ್ಲಿಗೆ ಬಿಜೆಪಿಯಲ್ಲಿ ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕತ್ವವನ್ನು ಕಿತ್ತು ನಾಗಪುರದ ನೌಕರರಾದ ಜೋಶಿ ಹಾಗೂ ಸಂತೋಷ ಕೂಟ ಆಪೋಷನ ತೆಗೆದುಕೊಂಡಾಯ್ತು! ಯಡಿಯೂರಪ್ಪ – ಔಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ – ಔಟ್, ಈಶ್ವರಪ್ಪ – ಔಟ್, ಜಗದೀಶ್ ಶೆಟ್ಟರ್ – ಔಟ್? ಸಾವಿರ ತಲೆ ತೆಗೆದಾದರೂ ಸರಿ ಪ್ರಹ್ಲಾದ್ ಜೋಶಿ, ಬಿ ಎಲ್ ಸಂತೋಷರಿಗೆ ಜಾಗ ಮಾಡಿಕೊಡಲು ಅಮಿತ್ ಶಾ ತಯಾರಾಗಿದ್ದಾರೆ. ಸಂತೋಷ ಕೂಟದ ಆಟಕ್ಕೆ ಬಿಜೆಪಿಯ ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕರು ಹೀನಾಯ ಅವಮಾನ ಎದುರಿಸಿ ಹೊರನಡೆಯುತ್ತಿದ್ದಾರೆ ಎಂದಿದೆ.
BSY, ಈಶ್ವರಪ್ಪ, ಜಗದೀಶ್ ಶೆಟ್ಟರ್..
ಬಿಜೆಪಿ ಎಂಬ ಕಳೆಗೆ ನೀರು ಗೊಬ್ಬರ ಹಾಕಿ ಬೆಳೆಸಿದ ನಾಯಕರನ್ನು ಅಗೌರವದ ನಿರ್ಗಮನ ದಾರಿ ತೋರಿಸಿದೆ ಬಿಜೆಪಿ.
“ನಾವೇ ಎಲ್ಲ” ಎನ್ನುತ್ತಿದ್ದವರಿಗೆ “ನೀವೇನೂ ಅಲ್ಲ” ಎನ್ನುತ್ತಿದೆ ಮೊ-ಶಾ ಜೋಡಿ.
ಗೊಡ್ಡು ಹಸುಗಳನ್ನು ಗೋಶಾಲೆಗಾದರೂ ಬಿಡಬಹುದಿತ್ತು, ಆದರೆ ನೇರ ಕಸಾಯಿಖಾನೆಗೇ ಕಳಿಸುತ್ತಿರುವುದು ದುರಂತ!
— Karnataka Congress (@INCKarnataka) April 11, 2023
ಮೊ-ಶಾ ಜೋಡಿಯ ಮಸಲತ್ತು ನೋಡಿದರೆ ಬೊಮ್ಮಾಯಿಯವರೂ ರಾಜಕೀಯ ನಿವೃತ್ತಿ ಘೋಷಿಸಿದರೆ ಯಾವುದೇ ಆಶ್ಚರ್ಯವಿಲ್ಲ! ಜೋಶಿ, ಸಂತೋಷರನ್ನು ಪ್ರತಿಷ್ಠಾಪಿಸಲು ಹವಣಿಸುತ್ತಿರುವ ಬೊಮ್ಮಾಯಿಯವರು ಅದೆಷ್ಟೇ ನಾಗಪುರದ ನೌಕರರು ಎನಿಸಿಕೊಂಡರೂ ಆರ್ ಎಸ್ಎಸ್ ಗೆ ಅಪಥ್ಯವೇ. ಯಡಿಯೂರಪ್ಪರಂತೆ ಬೊಮ್ಮಾಯಿಯವರ ರಾಜಕೀಯ ಬದುಕೂ ದುರಂತ ಅಂತ್ಯ ಕಾಣಲಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ