ಕಾಂಗ್ರೆಸ್ ಪ್ರಣಾಳಿಕೆ ಇಂದು ಬಿಡುಗಡೆ
Team Udayavani, Apr 2, 2019, 5:00 AM IST
ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಇಂದು ಅಧಿಕೃತ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಧ್ಯಕ್ಷತೆ ಬಿಡುಗಡೆ ಮಾಡಲಿದ್ದಾರೆ. ಪ್ರಣಾಳಿಕೆ ಸಮಿತಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಪಿ. ಚಿದಂಬರಂ ದೇಶಾದ್ಯಂತ ಪ್ರತಿ ರಾಜ್ಯದಲ್ಲಿಯೂ ಸಾರ್ವಜನಿಕರೊಂದಿಗೆ ನಾಲ್ಕೈದು ಸಭೆಗಳನ್ನು ನಡೆಸಿದ್ದರು. ಪ್ರ
ಣಾಳಿಕೆಯಲ್ಲಿ ಪ್ರಮುಖವಾಗಿ ಈಗಾಗಲೇ ರಾಹುಲ್ ಗಾಂಧಿ ಘೋಷಿಸಿರುವ ಸಾಮಾನ್ಯ ಜನರಿಗೆ ಪ್ರತಿ ತಿಂಗಳು 6 ಸಾವಿರ ರೂಪಾಯಿ ಹಾಕುವ ನ್ಯಾಯ್ ಯೋಜನೆ, ಶಾಸನ ಸಭೆಯಲ್ಲಿ ಮಹಿಳೆಯರಿಗೆ ಶೇಕಡಾ 33 ರಷ್ಟು ಮೀಸಲಾತಿ ಕಲ್ಪಿಸುವುದು. ರೈತ ಸಮುದಾಯಕ್ಕೆ ಆದಾಯ ಹೆಚ್ಚಳ ಮಾಡುವ ಬಗ್ಗೆ ಪ್ರಣಾಳಿಕೆಯಲ್ಲಿ ಆದ್ಯತೆ ನೀಡಲಾಗಿದೆ ಎಂದು ತಿಳಿದು ಬಂದಿದೆ.