“ಕಾಂಗ್ರೆಸ್ನಿಂದ ಕೀಳುಮಟ್ಟದ ರಾಜಕೀಯ’
Team Udayavani, Feb 14, 2017, 7:29 AM IST
ಬೆಂಗಳೂರು: ವರಿಷ್ಠರಿಗೆ ಮುಖ್ಯಮಂತ್ರಿಗಳು ಕಪ್ಪ ನೀಡಿರುವುದು ಹಾಗೂ ಉಕ್ಕಿನ ಮೇಲ್ಸೇತುವೆ ಕಾಮಗಾರಿಯಲ್ಲಿ ಸಿಎಂ ಮತ್ತು ಅವರ ಶಿಷ್ಯ ವರ್ಗಕ್ಕೆ ಕಮಿಷನ್ ಸಂದಾಯವಾಗಿರುವ ಬಗ್ಗೆ ಮಾಡಿರುವ ಆರೋಪ ಜೀರ್ಣಿಸಿಕೊಳ್ಳಲು ಸಾಧ್ಯವಾಗದೆ ಹತಾಶವಾಗಿರುವ ಕಾಂಗ್ರೆಸ್ ಸಚಿವರು, ತಾವಿಬ್ಬರು ಮಾತನಾಡಿರುವ ಸೀಡಿ ಬಿಡುಗಡೆ ಮಾಡುವ ಮೂಲಕ ಕೀಳುಮಟ್ಟದ ರಾಜಕೀಯಕ್ಕೆ ಇಳಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತಕುಮಾರ್ ಆರೋಪಿಸಿದ್ದಾರೆ.
ಕಾಂಗ್ರೆಸ್ನ ಕೆಲವು ಸಚಿವರು ತಮ್ಮ ಮೇಲೆ ಮಾಡಿರುವ ಆರೋಪ ಮತ್ತು ಅದಕ್ಕೆ ಸಂಬಂಧಿಸಿದಂತೆ ಸೀಡಿ ಬಿಡುಗಡೆ ಮಾಡಿರುವ ಕುರಿತು ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಹೈಕಮಾಂಡ್ಗೆ 1 ಸಾವಿರ ಕೋಟಿ ರೂ. ಕಪ್ಪ ಸಲ್ಲಿಸಿರುವುದು ಮತ್ತು ಉಕ್ಕಿನ ಮೇಲ್ಸೇತುವೆ ಕಾಮಗಾರಿಯಲ್ಲಿ ಮುಖ್ಯಮಂತ್ರಿಗಳು ಮತ್ತು ಅವರ ಶಿಷ್ಯ ವರ್ಗಕ್ಕೆ ಕಮಿಷನ್ ಸಂದಾಯವಾಗಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜು ಅವರ ಡೈರಿಯಲ್ಲಿದೆ ಎಂಬ ಆರೋಪವನ್ನು ಅರಗಿಸಿಕೊಳ್ಳಲು ಕಾಂಗ್ರೆಸ್ಗೆ
ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದ್ದಾರೆ.
ತಮ್ಮೊಂದಿಗಿನ ಸಂಭಾಷಣೆ ವೇಳೆ ಮುಖ್ಯಮಂತ್ರಿಗಳು, ಅವರು (ಬಿಜೆಪಿ) ಕೂಡ ಹೈಕಮಾಂಡ್ಗೆ ಹಣ ನೀಡಿಲ್ಲವೇ ಎಂದು ಪ್ರಶ್ನಿಸಿದ್ದರು. ಅಂದರೆ, ಆಡಳಿತಾರೂಢ ಕಾಂಗ್ರೆಸ್ ಹೈಕಮಾಂಡ್ಗೆ ಹಣ ನೀಡಿದೆ ಎಂಬುದು ಸ್ಪಷ್ಟವಾಗುತ್ತದೆ. ಎಂದು ಅನಂತಕುಮಾರ್ ಹೇಳಿದ್ದಾರೆ. ಸವಾಲು ಸ್ವೀಕರಿಸಲು ಸಿದ್ಧ: ಇನ್ನೊಂದೆಡೆ, ಸಿದ್ದರಾಮಯ್ಯ ಅವರು ಕಾಂಗ್ರೆಸ್ ವರಿಷ್ಠರಿಗೆ 1000 ಕೋಟಿ ರೂ. ನೀಡಿರುವುದು ಮತ್ತು ಉಕ್ಕಿನ ಮೇಲ್ಸೇತುವೆ ಕಾಮಗಾರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಮತ್ತು ಅವರ
ಶಿಷ್ಯರಿಗೆ 65 ಕೋಟಿ ರೂ. ಸಂದಾಯವಾಗಿದೆ ಎಂಬ ತಮ್ಮ ಆರೋಪವನ್ನು ಪುನರುಚ್ಚರಿಸಿರುವ ಮಾಜಿ ಸಿಎಂ ಬಿ.ಎಸ್
.ಯಡಿಯೂರಪ್ಪ, ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ಹಾಕುವ ಸವಾಲುಗಳನ್ನು ಎದುರಿಸಲು ಸಿದ್ಧವಿರುವುದಾಗಿ
ಹೇಳಿದ್ದಾರೆ.
ವೀಡಿಯೋ ತಿರುಚಿರುವ ಕಾಂಗ್ರೆಸ್: ಗೋ.ಮಧುಸೂಧನ್ ಹೈಕಮಾಂಡ್ಗೆ ಹಣ ಸಂದಾಯ ಮಾಡುವ ಕುರಿತು ಸಿದ್ದರಾಮಯ್ಯ ತಮ್ಮೊಂದಿಗೆ ನಡೆಸಿದ ಮಾತುಕತೆ ವಿವರಗಳನ್ನು ಕೇಂದ್ರ ಸಚಿವ ಅನಂತಕುಮಾರ್ ಅವರು ಬಿ.ಎಸ್ .ಯಡಿಯೂರಪ್ಪ ಅವರೊಂದಿಗೆ ಹಂಚಿಕೊಂಡಿದ್ದನ್ನು ತಿರುಚಿ, ಅವರಿಬ್ಬರ ವಿರುದ್ಧವೇ ಆರೋಪ ಮಾಡುತ್ತಿರುವ ಕಾಂಗ್ರೆಸ್ ಆತಂಕಕ್ಕೆ ಒಳಗಾಗಿ ಹೇಳಿಕೆ ನೀಡುತ್ತಿದೆ ಎಂದು ಬಿಜೆಪಿ ವಕ್ತಾರ ಗೋ. ಮಧುಸೂಧನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು