ದಿಢೀರ್‌ ಸಕ್ರಿಯರಾದ ಕಾಂಗ್ರೆಸ್‌ ಹಿರಿಯರು

ಮತ್ತೂಮ್ಮೆ ಮೈತ್ರಿ ಸಾಧ್ಯತೆ: ಸಿದ್ದರಾಮಯ್ಯ ವಿರೋಧಿಸಿದ ನಾಯಕರು ಈಗ ಪ್ರಚಾರಕ್ಕೆ

Team Udayavani, Dec 2, 2019, 6:56 PM IST

Congress JDS

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ 15 ಕ್ಷೇತ್ರಗಳ ಉಪಚುನಾವಣೆಗೆ ಮತದಾನದ ದಿನ ಹತ್ತಿರವಾಗುತ್ತಿರುವಂತೆ ರಾಜ್ಯದ ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ರಾಜಕೀಯ
ಲೆಕ್ಕಾಚಾರಗಳನ್ನು ಬದಲಾಯಿಸುವ ಸಾಧ್ಯತೆಯಿದ್ದು ಈ ನಿಟ್ಟಿನಲ್ಲಿ ಕಾಂಗ್ರೆಸ್‌ ಹಿರಿಯ ನಾಯಕರು
ಸಕ್ರಿಯರಾಗಿದ್ದಾರೆ.

ಹದಿನೈದು ಕ್ಷೇತ್ರಗಳ ಚುನಾವಣಾ ಫ‌ಲಿತಾಂಶ ರಾಜ್ಯ ಸರ್ಕಾರದ ಭವಿಷ್ಯ ನಿರ್ಧರಿಸಲಿದ್ದು, ಹೆಚ್ಚು ಸ್ಥಾನ ಗೆದ್ದರೆ ಮತ್ತೆ ರಾಜ್ಯದಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಡುವೆ ಮರು ಮೈತ್ರಿಯಾಗುವ ಹೊಸ ಕನಸೊಂದು ಚಿಗುರೊಡೆಯುವಂತೆ ಮಾಡಿದೆ. ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ, ಸಿದ್ದರಾಮಯ್ಯ ಅವರ ಏಕಪಕ್ಷೀಯ ನಿರ್ಧಾರಗಳಿಂದ ಬೇಸತ್ತು ಚುನಾವಣಾ ಕಣದಿಂದಲೇ ಅಂತರ ಕಾಯ್ದುಕೊಂಡಿದ್ದ ಹಿರಿಯ ನಾಯಕರು ಈಗ ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗಿದ್ದಾರೆ.

ಮಹಾರಾಷ್ಟ್ರ ಬೆಳವಣಿಗೆಯೇ ಸ್ಪೂರ್ತಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಸಿಪಿ ಮೈತ್ರಿಗೆ
ಸರ್ಕಾರ ರಚಿಸುವಷ್ಟು ಸ್ಪಷ್ಟ ಬಹುಮತ ಬಾರದಿದ್ದರೂ, ಶಿವಸೇನೆ ಹಾಗೂ ಬಿಜೆಪಿ ನಡುವಿನ ಮನಸ್ತಾಪದ ಪರಿಣಾಮ ಶಿವಸೇನೆ ಜೊತೆಗೆ ಮೈತ್ರಿ ಸರ್ಕಾರ ರಚಿಸುವ ಮೂಲಕ ಬಿಜೆಪಿಯವನ್ನು ಅಧಿಕಾರದಿಂದ ದೂರ ಇಟ್ಟಿರುವುದರಿಂದ ರಾಜ್ಯದಲ್ಲಿ ಜೆಡಿಎಸ್‌ ಜೊತೆಗೆ ಮತ್ತೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂಬ ಅಭಿಪ್ರಾಯ ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿದೆ.
ಅದೇ ಕಾರಣಕ್ಕೆ ರಾಜ್ಯದಲ್ಲಿಯೂ ಮತ್ತೆ ಮೈತ್ರಿಯ ಚರ್ಚೆಗಳು ಪ್ರಾರಂಭವಾಗಿವೆ. ಹೀಗಾಗಿ, ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್‌.ಮುನಿಯಪ್ಪ, ಎಂ.ವೀರಪ್ಪ ಮೊಯ್ಲಿ, ಡಾ.ಜಿ.ಪರಮೇಶ್ವರ್‌ ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗಿದ್ದಾರೆ. ಕೊನೆಯ ಮೂರು ದಿನ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿದ್ದಾರೆ.

ಆರಂಭದಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸಿದ್ದರಾಮಯ್ಯ ಏಕಪಕ್ಷೀಯವಾಗಿ ತೆಗೆದುಕೊಂಡ ನಿರ್ಧಾರಗಳಿಂದ ಬೇಸತ್ತು ಅವರೇ ಏಕಾಂಗಿಯಾಗಿ ಚುನಾವಣೆ ಎದುರಿಸಿ ಗೆಲ್ಲಿಸಿಕೊಂಡು ಬರಲಿ ಎಂದು ದೂರ ಉಳಿದಿದ್ದ ಹಿರಿಯ ನಾಯಕರು, ಈಗ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ಹೇಳಿಕೆಗಳಿಂದ ಮತ್ತೆ ಮೈತ್ರಿ ಸಾಧ್ಯತೆಯನ್ನು ಅರಿತಿದ್ದಾರೆ. ಹೀಗಾಗಿ, ಹಿರಿಯ
ನಾಯಕರು ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ತಮ್ಮ ಶ್ರಮವನ್ನೂ ಸೇರಿಸುವ ಯತ್ನ ನಡೆಸಿದ್ದಾರೆ
ಎನ್ನಲಾಗುತ್ತಿದೆ.

ಗೆಲುವಿಗೆ ಸಹಕಾರ ತತ್ವ: ಹಾಲಿ ನಡೆಯುತ್ತಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಕೆಲವು ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಪೂರಕವಾಗುವಂತೆ ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಬಿಜೆಪಿಯನ್ನು ಏಕಾಂಗಿಯಾಗಿ ಸೋಲಿಸಲು ಕಷ್ಟವಾಗಬಹುದು ಎಂದು ಅರಿತಿರುವ ಎರಡೂ ಪಕ್ಷಗಳ ನಾಯಕರು ಹುಣಸೂರು, ಕೆ.ಆರ್‌.ಪೇಟೆ, ಯಶವಂತಪುರ, ಚಿಕ್ಕಬಳ್ಳಾಪುರ, ಕೆ.ಆರ್‌.ಪುರ, ಅಥಣಿ, ಕಾಗವಾಡ, ರಾಣೆಬೆನ್ನೂರು, ಹೀರೆಕೆರೂರು ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ತತ್ವ ಅನುಸರಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಹುಣಸೂರು ಹಾಗೂ ಕೆ.ಆರ್‌.ಪೇಟೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪ್ರಬಲವಾಗಿದ್ದರೂ, ಅನರ್ಹ ಶಾಸಕರನ್ನು ಗೆಲ್ಲಿಸಿಕೊಳ್ಳುವ ಮೂಲಕ ಬಿಜೆಪಿ ತನ್ನ ಖಾತೆ ತೆರೆಯಲು ಪ್ರಯತ್ನ ನಡೆಸುತ್ತಿದೆ. ಹೀಗಾಗಿ,
ಹುಣಸೂರಿನಲ್ಲಿ ಕಾಂಗ್ರೆಸ್‌ಗೂ, ಕೆ.ಆರ್‌.ಪೇಟೆಯಲ್ಲಿ ಜೆಡಿಎಸ್‌ಗೆ ಎರಡೂ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ತತ್ವ ಅನುಸರಿಸಿ ಎರಡೂ ಕ್ಷೇತ್ರಗಳಲ್ಲಿ ಅನರ್ಹರನ್ನು ಸೋಲಿಸುವ ಮೂಲಕ ಆಡಳಿತ ಪಕ್ಷಕ್ಕೆ ಶಾಕ್‌ ನೀಡುವ ಲೆಕ್ಕಾಚಾರ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಅದೇ ರೀತಿ, ಬೆಂಗಳೂರಿನ ಯಶವಂತಪುರದಲ್ಲಿ ಜೆಡಿಎಸ್‌ಗೆ, ಕೆ.ಆರ್‌.ಪುರದಲ್ಲಿ ಕಾಂಗ್ರೆಸ್‌ಗೆ ಪರಸ್ಪರ ಸಹಕಾರ ತತ್ವ ಪಾಲನೆಯ ತಂತ್ರ ಅನುಸರಿಸಲಾಗುತ್ತಿದೆ ಎನ್ನಲಾಗುತ್ತಿದೆ.

ಸಿದ್ದರಾಮಯ್ಯಗೆ ಗೊಂದಲ
ಪಕ್ಷದಲ್ಲಿನ ಗೊಂದಲಗಳಿಂದ ‌ ಮುನಿಸಿಕೊಂಡು ಅಂತರ ಕಾಯ್ದುಕೊಂಡಿದ್ದ ಹಿರಿಯಕರು ಮೈತ್ರಿ ಕನಸಿದಿಗೆ ಮತ್ತೆ ಸಕ್ರಿಯವಾಗಿ ರುವುದು ಸಿದ್ದರಾಮಯ್ಯಅವರಿಗೆ ಗೊಂ‌ಲ ಮಾಡಿದೆ ಎನ್ನಲಾಗುತ್ತಿದೆ. ಯಾವುದೇ ಕಾರಣಕ್ಕೂ ಜೆಡಿಎಸ್‌ ಜೊತೆ ಮತ್ತೆ ಮೈತಿಇಲ್ಲ ಎಂದು ಬಹಿರಂಗವಾಗಿಯೇ ಸಿದ್ದರಾಮಯ್ಯ
ಹೇಳುತ್ತಿರೂ, ಮೂಲ ಕಾಂಗ್ರೆಸ್ಸಿಗರು ಮಹಾರಾಷ್ಟ್ರದ ಬೆಳವಣಿಗೆಯಿಂದ ಪ್ರೇರೆಪಿತರಾಗಿ ಮತ್ತೆ ಮೈತ್ರಿಯ ಮಾತನಾಡುತ್ತಿರುವುದು ಹಾಗೂ ‌ಕ್ಕೆ ಪೂರಕವಾಗಿ ಸಹಕಾರ ತತ್ವ ಅನುಸರಿಸುತ್ತಿರುವುದು
ಸಿದ್ದರಾಮಯ್ಯ ಅವರನ್ನು ಗೊಂದಲಕ್ಕೀಡು ಮಾಡಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಶಂಕರ ಪಾಗೋಜಿ

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.