ಕಾಂಗ್ರೆಸ್‌ನಲ್ಲೂ ಅಡ್ಜಸ್ಟ್‌ಮೆಂಟ್‌ ಚರ್ಚೆ


Team Udayavani, Jan 16, 2021, 6:40 AM IST

ಕಾಂಗ್ರೆಸ್‌ನಲ್ಲೂ ಅಡ್ಜಸ್ಟ್‌ಮೆಂಟ್‌ ಚರ್ಚೆ

ಬೆಂಗಳೂರು: ಅಡ್ಜಸ್ಟ್‌ ಮೆಂಟ್‌ ರಾಜಕಾರಣ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿಯ  ಯತ್ನಾಳ್‌, ಎಚ್‌.ವಿಶ್ವನಾಥ್‌ ಸಿಡಿಸಿರುವ  “ಬಾಂಬ್‌’ ಕಾಂಗ್ರೆಸ್‌ ಹೈಕಮಾಂಡ್‌  ತಲುಪಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು  ಯಡಿಯೂರಪ್ಪ ಜತೆ ಅಡ್ಜಸ್ಟ್‌ಮೆಂಟ್‌ ಮಾಡಿಕೊಂಡಿದ್ದಾರೆ ಎಂಬ ಆರೋಪಕ್ಕೆ ಪೂರಕವಾಗಿ ಆಡಿಯೋ ಹಾಗೂ ವೀಡಿಯೋ ಕ್ಲಿಪಿಂಗ್‌ ಅನ್ನು ಹಿರಿಯ ನಾಯಕರು ಹೈಕಮಾಂಡ್‌ಗೆ ರವಾನಿಸಿದ್ದಾರೆ.

ಆಪರೇಷನ್‌ ಕಮಲ ಕಾರ್ಯಾಚರಣೆ ಮೂಲಕ ಕಾಂಗ್ರೆಸ್‌ನ ಶಾಸಕರನ್ನು ಸೆಳೆದು ಸರಕಾರ ರಚನೆ ಮಾಡಿರುವ ಬಿಜೆಪಿ ವೈಫ‌ಲ್ಯಗಳ ವಿರುದ್ಧ ಪ್ರತಿ ಹೆಜ್ಜೆಯಲ್ಲೂ ತಪ್ಪು ಹುಡುಕಿ ಹೋರಾಟ ಮಾಡಬೇಕಿತ್ತು. ಆದರೆ, ಇಬ್ಬರಲ್ಲೂ ಸಮನ್ವಯತೆ ಇಲ್ಲ. ಜತೆಗೆ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಜತೆ ಉತ್ತಮ ಬಾಂಧವ್ಯ ಹೊಂದುವ ಮೂಲಕ ಗಟ್ಟಿ ಧ್ವನಿ ಎತ್ತುತ್ತಿಲ್ಲ ಎಂಬ ಬಗ್ಗೆ ದೂರನ್ನೂ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಡಿನೋಟಿಫಿಕೇಷನ್‌ ಪ್ರಕರಣ ಸಂಬಂಧ  ಯಡಿಯೂರಪ್ಪ ವಿರುದ್ಧ ಹೈಕೋರ್ಟ್‌ ನೀಡಿದ ತೀರ್ಪು ಸಹಿತ ಸರಕಾರದ ವೈಫ‌ಲ್ಯಗಳ ವಿರುದ್ಧ ಹೋರಾಟ ಮಾಡಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತಿಲ್ಲ ಎಂಬ ಬೇಸರ ಪಕ್ಷದ ವಲಯದಲ್ಲೇ ಕೇಳಿಬರುತಿತ್ತು. ಈಗ ಹೊಂದಾಣಿಕೆ ಬಗ್ಗೆ ಬಿಜೆಪಿ ನಾಯಕರ ಹೇಳಿಕೆ ಯಿಂದ ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ಕುಗ್ಗಲಿದೆ ಎಂದು ದೂರಿದ್ದಾರೆ ಎನ್ನಲಾಗಿದೆ.

ಬಿಬಿಎಂಪಿಗೆ ಚುನಾವಣೆ ನಡೆಸುವ ಸಂಬಂಧವೂ ಬೆಂಗಳೂರಿನ ಶಾಸಕರು ಬಿಜೆಪಿಯ ಜತೆಗೂಡಿದ್ದರು. ಬಿಬಿಎಂಪಿ ಕಾಯ್ದೆ ರಚನೆಗೆ ಒತ್ತಾಸೆಯಾಗಿ ನಿಂತು ಅದಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ-ಸೂಚನೆ ನೀಡಿದರು. ಹೀಗಾಗಿಯೇ ಚುನಾವಣೆ ಮುಂದಕ್ಕೆ ಹೋಗುವಂತಾಗಿದೆ. ಈ ವಿಚಾರದಲ್ಲಿ ರಾಜ್ಯ ನಾಯಕರ ಗಮನಕ್ಕೆ ತಂದರೂ  ಮೌನ ವಹಿಸಿದ್ದರು. ಇವರಿಗೂ ಚುನಾವಣೆ ನಡೆಯುವುದು ಬೇಕಿರಲಿಲ್ಲ ಎಂಬುದು ಈಗ ಅರ್ಥವಾಗುತ್ತಿದೆ ಎಂದು ಮುಖಂಡರೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.

ಡಿಕೆಶಿಯಿಂದಲೇ ದಾಖಲೆ? :

ಸಿ.ಪಿ. ಯೋಗೇಶ್ವರ್‌ ವಿರುದ್ಧ ಭ್ರಷ್ಟಾಚಾರದ ಆರೋಪಗಳಿದ್ದು, ಅವರನ್ನು ತತ್‌ಕ್ಷಣವೇ ಸಂಪುಟದಿಂದ ಕೈಬಿಡಲು ಮುಖ್ಯಮಂತ್ರಿಗೆ  ನಿರ್ದೇಶನ ನೀಡುವಂತೆ  ಕೋರಿ ಎಂ.ಪಿ.ರೇಣುಕಾಚಾರ್ಯ ಅವರು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ದಿಲ್ಲಿಯಲ್ಲಿ ಭೇಟಿಯಾಗಿ ದೂರು ನೀಡಿದ್ದಾರೆ.  ಇದಕ್ಕೆ ಪೂರಕವಾಗಿ  ಯೋಗೇಶ್ವರ್‌ ವಿರುದ್ಧದ ದಾಖಲೆಗಳನ್ನು  ರೇಣುಕಾಚಾರ್ಯ ಅವರಿಗೆ ಡಿ.ಕೆ.ಶಿವಕುಮಾರ್‌ ಅವರೇ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ರೇಣುಕಾಚಾರ್ಯ ಗುರುವಾರ ದಿಲ್ಲಿಗೆ ಹೋದ ಬಳಿಕ  ಡಿ.ಕೆ.ಶಿವಕುಮಾರ್‌ ಸಹ ಶುಕ್ರವಾರ ದಿಲ್ಲಿಗೆ ಹೋಗಿದ್ದಾರೆ ಎನ್ನಲಾಗಿದೆ.

ಬಿಜೆಪಿ ಅಥವಾ ಯಡಿಯೂರಪ್ಪ ಅವರ ಜತೆ ಕಾಂಗ್ರೆಸ್‌ನ ಯಾವ ನಾಯಕರೂ ಅಡ್ಜಸ್ಟ್‌ ಮೆಂಟ್‌ ಮಾಡಿಕೊಂಡಿಲ್ಲ.  ಯತ್ನಾಳ್‌ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಬಿಜೆಪಿ ವಿರುದ್ಧದ ನಮ್ಮ ಹೋರಾಟದಲ್ಲಿ ಯಾವುದೇ ರಾಜಿ ಇಲ್ಲ.  -ಡಿ.ಕೆ.ಶಿವಕುಮಾರ್‌,ಕೆಪಿಸಿಸಿ ಅಧ್ಯ ಕ್ಷ 

 

 

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.