ಕಾಂಗ್ರೆಸ್‌ನಿಂದ ಬಿಜೆಪಿಯ ಲೆಹರ್‌ಸಿಂಗ್‌ ಡೈರಿ’ ಬಿಡುಗಡೆ


Team Udayavani, Feb 26, 2017, 3:50 AM IST

25-PTI-14.jpg

ಬೆಂಗಳೂರು: ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವಿನ “ಡೈರಿ’ ಸಮರ ಮುಂದುವರಿದಿದ್ದು, ” ಗೋವಿಂದರಾಜು ಡೈರಿ’ಗೆ ಪ್ರತ್ಯುತ್ತರ ಎಂಬಂತೆ ಕಾಂಗ್ರೆಸ್‌ ಶನಿವಾರ, ಬಿಜೆಪಿ ವರಿಷ್ಠರಿಗೆ “ಕಪ್ಪ’ ನೀಡಲಾಗಿದೆ ಎನ್ನಲಾಗುವ ಮಾಹಿತಿ ಇರುವ “ಲೆಹರ್‌ಸಿಂಗ್‌ ಡೈರಿ’ ಬಿಡು ಗಡೆ ಮಾಡಿದೆ.

ಬಿಜೆಪಿ ಪಕ್ಷದ ಹಾಲಿ ವಿಧಾನ ಪರಿಷತ್‌ ಸದಸ್ಯ ಹಾಗೂ ಪಕ್ಷದ ರಾಜ್ಯ ಸಹ ಖಜಾಂಚಿ ಲೆಹರ್‌ಸಿಂಗ್‌ ಸಿರೋಯ್‌  ಮನೆ ಮೇಲೆ 2013ರ ನವೆಂ ಬರ್‌ಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ವೇಳೆ ಸಿಕ್ಕಿದೆ ಎನ್ನಲಾದ ಮತ್ತು ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ “ಡೈರಿ’ ಹಾಳೆಯನ್ನು ಕಾಂಗ್ರೆಸ್‌ ಬಿಡು ಗಡೆಗೊಳಿಸಿದೆ. ಇದರಲ್ಲಿ ಬಿಜೆಪಿ ವರಿಷ್ಠರಿಗೆ ಹಣ ನೀಡಿದವರ ಹಾಗೂ ಪಡೆದುಕೊಂಡವರ ಹೆಸರುಗಳನ್ನು ಸಂಕೇತಗಳಲ್ಲಿ ಬರೆಯಲಾಗಿದೆ. 

ವಿಧಾನಸೌಧದ ಕಾಂಗ್ರೆಸ್‌ ಶಾಸಕ ಪಕ್ಷದ ಕಚೇರಿಯಲ್ಲಿ ಶನಿವಾರ ನಡೆದ ಜಂಟಿ  ಪತ್ರಿಕಾಗೋಷ್ಠಿಯಲ್ಲಿ ಡೈರಿ ಬಿಡು
ಗಡೆ ಮಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಗೋವಿಂದ ರಾಜು ಡೈರಿ ವಿಚಾರವನ್ನು ಮುಂದಿಟ್ಟು ಕೊಂಡು ಕಾಂಗ್ರೆಸ್‌ ಮೇಲೆ ಸವಾರಿ ಮಾಡಲು ಹೊರಟಿದ್ದ ಬಿಜೆಪಿಯ ಬಣ್ಣ ಲೆಹರ್‌ಸಿಂಗ್‌ ಡೈರಿಯಿಂದ ಈಗ ಬಯಲಾಗಿದೆ ಎಂದು ಆರೋಪಿಸಿದರು. ಜತೆಗೆ, ಯಡಿಯೂರಪ್ಪ ಮೇಲಿನ ಭ್ರಷ್ಟಾಚಾರ ಪ್ರಕರಣಗಳನ್ನು ಸಮರ್ಥಿಸಿ ಕೊಳ್ಳುವ ಧಾಟಿಯಲ್ಲಿ ಲೆಹರ್‌ಸಿಂಗ್‌, 2013ರ ಮೇ 13ರಂದು ಎಲ್‌.ಕೆ. ಆಡ್ವಾಣಿ ಅವರಿಗೆ ಬರೆದ ಪತ್ರವನ್ನು ಸಹ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು.

ಲೆಹರ್‌ಸಿಂಗ್‌ ಅವರದು ಎನ್ನಲಾದ ಡೈರಿಯಲ್ಲಿ “ಸಿಎಂಒ+ಆರ್‌ಎ 67 ಕೋಟಿ, ಎಂ. ನಿರಾಣಿ 128 ಕೋಟಿ, ರೇಣು 13 ಕೋಟಿ, ಜೆಎಸ್‌ 9 ಕೋಟಿ, ಎಸ್‌ಕೆ 3 ಕೋಟಿ, ಎಸ್‌ಆರ್‌ 1.8 ಕೋಟಿ, ಆರ್‌ಎ+ಕೆಎಸ್‌ಈ 31 ಕೋಟಿ, ಡಿವಿಎಸ್‌+ಪಿಎಸ್‌ 11 ಕೋಟಿ, ಇತರ ಕಂಪೆನಿಗಳು ಮತ್ತು ಗುತ್ತಿಗೆದಾರರು 128 ಕೋಟಿ ರೂ. ಸಹಿತ 391.8 ಕೋಟಿ ರೂ. ಸ್ವೀಕರಿಸಲಾಗಿದೆ ಎಂದು ಬರೆಯಲಾಗಿದೆ. 

ಅದೇ ರೀತಿ, ಎಸ್‌ 34 ಕೋಟಿ, ಬಿಎಸ್‌ವೈ 69 ಕೋಟಿ, ನಮೋ 120 ಕೋಟಿ, ಎಸ್‌ಎಸ್‌7 ಕೋಟಿ, ಎಕೆ 18 ಕೋಟಿ, ಎಂ.ಡಿ. ರಾವ್‌ 4.8 ಕೋಟಿ, ಡಿಪಿ 9 ಕೋಟಿ, ಪಾರ್ಟಿ ಫ‌ಂಡ್‌ 90 ಕೋಟಿ, ಮೀಡಿಯಾ (ಪಿಟಿವಿ) 10 ಕೋಟಿ, ಎಚ್‌ವಿ (ದೆಹಲಿ ಎಲೆಕ್ಷನ್‌) 32 ಕೋಟಿ ರೂ. ಈ ರೀತಿ ಒಟ್ಟು 391.8 ಕೋಟಿ ರೂ.ಗಳನ್ನು 

ಕೇಂದ್ರದ ಬಿಜೆಪಿ ನಾಯಕರಿಗೆ ಪಾವತಿಸ ಲಾಗಿದೆ ಎಂದು ಡೈರಿಯ ಹಾಳೆಯಲ್ಲಿ ಕೈಬರಹದಿಂದ ನಮೂದಿಸಲಾಗಿದ್ದು, ಇದರಲ್ಲಿ ಲೆಹರ್‌ಸಿಂಗ್‌ ಅವರ ಹಸ್ತಾಕ್ಷರ ಇದೆ ಎಂದು ಅವರು ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ ದಿನೇಶ್‌ ಗುಂಡೂರಾವ್‌, ಕಾಂಗ್ರೆಸ್‌ ಸರಕಾರವನ್ನು ಅಸ್ಥಿರಗೊಳಿಸಬೇಕು. ಆ ಮೂಲಕ ಮುಖ್ಯಮಂತ್ರಿ ಹಾಗೂ ಇತರ ಕಾಂಗ್ರೆಸ್‌ ಮುಖಂಡರ ತೇಜೋವಧೆ ಮಾಡಿ, ಕರ್ನಾಟಕದಲ್ಲಿ “ಸಂವಿಧಾನೇತರ ರಾಜಕೀಯ ಬಿಕ್ಕಟ್ಟು’ ಸೃಷ್ಟಿಸಲು ಬಿಜೆಪಿ ವ್ಯವಸ್ಥಿತ ಷಡ್ಯಂತ್ರ ರಚಿಸಿದೆ. ಈ ಷಡ್ಯಂತ್ರಕ್ಕೆ ಕೇಂದ್ರ ಸರಕಾರ, ಆದಾಯ ತೆರಿಗೆ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಮೂವರು ಸಚಿವರ ಬಗ್ಗೆ ದಾಖಲೆಗಳಿವೆ ಎಂದು ಯಡಿಯೂರಪ್ಪ ಡಿಸೆಂಬರ್‌ನಲ್ಲಿ ಹೇಳಿದ್ದರು. ಅದಾದ ಮೇಲೆ ಕಾಂಗ್ರೆಸ್‌ ಸಚಿವರು, ಶಾಸಕರ ಮನೆ ಮೇಲೆ ಐಟಿ ದಾಳಿ ನಡೆಯಿತು. ಅನಂತರ “ಯಡಿಯೂರಪ್ಪ – ಅನಂತಕುಮಾರ್‌’ ನಡುವಿನ ಸಂಭಾಷಣೆ, ಈಗ ಗೋವಿಂದರಾಜು ಡೈರಿ. ಈ ಎಲ್ಲ ಬೆಳವಣಿಗೆಗಳ ಹಿಂದೆ ಬಿಜೆಪಿ ಪಿತೂರಿ ಇರುವುದು ಸಷ್ಟವಾಗುತ್ತದೆ. 

ಬಿಜೆಪಿಯ ಈ ಹುರುಳಿಲ್ಲದ ಆರೋಪಗಳಿಗೆ ಉತ್ತರಿಸಲು ಮುಖ್ಯಮಂತ್ರಿ ಬಳಿ ಸಮಯ ವಿಲ್ಲ ಎಂದು ತಿಳಿಸಿದರು. 

ಗೋವಿಂದರಾಜು ಡೈರಿ ವಿಚಾರ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಲೆಹರ್‌ ಸಿಂಗ್‌ ಡೈರಿ ಹೊರ ಬಂದಿರುವುದರಿಂದ ಈಗ ಅವರೇ ರಾಜೀನಾಮೆ ಕೊಡಲಿ. ಮಾತೆತ್ತಿದರೆ ನೈತಿಕತೆ ಪ್ರಶ್ನೆ ಎತ್ತುವ ಯಡಿಯೂರಪ್ಪ, ಸಹಾರಾ-ಬಿರ್ಲಾ ಡೈರಿಯಲ್ಲಿ ಪ್ರಧಾನಿ ಮೋದಿ ಹೆಸರು ಬಂದಿರುವುದರಿಂದ ಅವರ (ಮೋದಿ) ರಾಜೀನಾಮೆಗೆ ಆಗ್ರಹಿಸಿ ನೈತಿಕತೆಗೆ ಮೇಲ್ಪಂಕ್ತಿ ಹಾಕಲಿ.
 ದಿನೇಶ ಗುಂಡೂರಾವ್‌, ಕೆಪಿಸಿಸಿ ಕಾರ್ಯಾಧ್ಯಕ್ಷ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.