ಸಂತೋಷ್ ಆತ್ಮಹತ್ಯೆ ಪ್ರಯತ್ನದ ಹಿಂದೆ ವಿಜಯೇಂದ್ರ ಒತ್ತಡ ಇರಬಹುದು: ಕಾಂಗ್ರೆಸ್
Team Udayavani, Nov 28, 2020, 4:30 PM IST
ಬೆಂಗಳೂರು: ಸಿಎಂ ಬಿ ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಧರಣಿ ನಡೆಸಿದರು.
ಬೆಂಗಳೂರಿನ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಧರಣಿ ನಡೆಸಿದ್ದು, ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಗೊತ್ತಾಗುತ್ತಿದೆ. ಮುಖ್ಯಮಂತ್ರಿಗಳ ಕುಟುಂಬದಲ್ಲೇ ಇಂತಹ ಸ್ಥಿತಿ ಇದೆ. ಇದು ಅಧಿಕಾರದ ಮೇಲೂ ಪರಿಣಾಮ ಬೀರಲಿದೆ ಎಂದು ಮಾಜಿ ಮೇಯರ್ ರಾಮಚಂದ್ರಪ್ಪ ಹೇಳಿದರು.
ಸಂತೋಷ್ ಆತ್ಮಹತ್ಯೆ ಪ್ರಯತ್ನದ ಹಿಂದೆ ರಾಜಕೀಯ ಕೈವಾಡವಿದೆ. ವಿಜಯೇಂದ್ರರ ಒತ್ತಡ ಇರಬಹುದು. ಹೀಗಾಗಿ ಸಿಬಿಐಗೆ ತನಿಖೆಗೆ ವಹಿಸಬೇಕು ಎಂದು ಸರ್ಕಾರಕ್ಕೆ ರಾಮಚಂದ್ರಪ್ಪ ಆಗ್ರಹಿಸಿದರು.
ಇದನ್ನೂ ಓದಿ:ಸಂತೋಷ್ ನೀಡಿದ್ದ ವಿಡಿಯೋದಿಂದ ಸಚಿವರೊಬ್ಬರು BSY ರನ್ನು ಬ್ಲ್ಯಾಕ್ ಮೇಲ್ ಮಾಡಿದ್ದರು: ಡಿಕೆಶಿ
ಮಾಜಿ ಮೇಯರ್ ರಾಮಚಂದ್ರಪ್ಪ, ಮನೋಹರ್ ನೇತೃತ್ವದಲ್ಲಿ ಧರಣಿ ನಡೆಯುತ್ತಿದ್ದು, ಹಲವು ಕೈ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಶುಕ್ರವಾರ ರಾತ್ರಿ ನಿದ್ದೆ ಮಾತ್ರೆ ನುಂಗಿ ಆತ್ಮಹತ್ಯೆ ಯತ್ನ ಮಾಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಸದ್ಯ ಸಂತೋಷ್ ಚೇತರಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.