Congress ಎರಡನೇ ಪಟ್ಟಿ ಅಂತಿಮ ಇಂದು; ಸುರ್ಜೇವಾಲಾ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ
12-18 ಕ್ಷೇತ್ರಗಳಿಗೆ ಆಯ್ಕೆ? ಇಂದೇ ಸಿಇಸಿಗೆ ರವಾನೆ
Team Udayavani, Mar 11, 2024, 7:15 AM IST
ಬೆಂಗಳೂರು: ಲೋಕ ಸಭಾ ಚುನಾವಣೆಗೆ ಮತ್ತೊಂದು ಸುತ್ತಿನ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಸಲಿರುವ ಕಾಂಗ್ರೆಸ್ ಇದಕ್ಕಾಗಿ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ಸೋಮವಾರ ಬೆಂಗಳೂರಿನಲ್ಲಿ ಹಮ್ಮಿ ಕೊಂಡಿದೆ. ರಾಜ್ಯದ ಗಮನ ಸೆಳೆಯಲಿರುವ ಪ್ರತಿಷ್ಠಿತ ಮತ್ತು ಸಚಿವರನ್ನು ಅಗ್ನಿಪರೀಕ್ಷೆಗೆ ಒಡ್ಡಬಹುದಾದ ಕ್ಷೇತ್ರಗಳೂ 2ನೇ ಪಟ್ಟಿಯಲ್ಲಿ ಅಂತಿಮ ಗೊಳ್ಳುವ ಸಾಧ್ಯತೆ ಇರುವುದರಿಂದ ಕೈ ಪಾಳಯದ ಚಿತ್ತ ಈಗ ಸೋಮವಾರದ ಸಭೆಯತ್ತ ನೆಟ್ಟಿದೆ.
ಕಾಂಗ್ರೆಸ್ ಸ್ಕ್ರೀನಿಂಗ್ ಸಮಿತಿ ಸದಸ್ಯರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳನ್ನು ಒಳಗೊಂಡ ಈ ಸಭೆಯಲ್ಲಿ ಉಳಿದ 21 ಕ್ಷೇತ್ರಗಳ ಪೈಕಿ ಸಣ್ಣ ಪುಟ್ಟ ಗೊಂದಲಗಳ ನಿವಾರಣೆಗೆ ಕ್ರಮ ಕೈಗೊಳ್ಳಲಿದೆ. ಜತೆಗೆ ಪರಸ್ಪರ ಬಣಗಳ ಮನವೊಲಿಕೆಯೊಂದಿಗೆ ಸಾಧ್ಯವಾದಷ್ಟು ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಉದ್ದೇಶ ಹೊಂದಿದೆ. 2ನೇ ಹಂತದಲ್ಲಿ ಕನಿಷ್ಠ 12ರಿಂದ 15 ಕಡೆ ಅಭ್ಯರ್ಥಿ ಗಳನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಇಲ್ಲಿ ಅಂತಿಮಗೊಳ್ಳುವ ಆಯ್ಕೆ ಪಟ್ಟಿಯನ್ನು ಸಂಜೆ ಹೊಸದಿಲ್ಲಿಯಲ್ಲಿ ನಡೆಯಲಿರುವ ಸಿಇಸಿ (ಕಾಂಗ್ರೆಸ್ ಚುನಾವಣ ಸಮಿತಿ)ಗೆ ಕಳುಹಿಸಿ ಕೊಡ ಲಾಗುತ್ತದೆ ಎಂದು ಹೇಳಲಾಗಿದೆ.
ಈಗಾಗಲೇ ಸಾಕಷ್ಟು ಸಮಯವಾಗಿದೆ. ವಿಳಂಬ ವಾದಷ್ಟು ತಳಮಟ್ಟದಲ್ಲಿ ಗೊಂದಲಗಳು ಮತ್ತು ಪ್ರಚಾರ ಕಾರ್ಯಕ್ಕೆ ತೊಂದರೆ ಆಗುವುದೇ ಹೆಚ್ಚು. ಆದ್ದರಿಂದ ತೀರಾ ಪೈಪೋಟಿ ಇರುವ ಹಾಗೂ ವಿಪಕ್ಷಗಳಲ್ಲಿ ಅಭ್ಯರ್ಥಿ ಗಳ ಬದಲಾವಣೆ ಮಾಡುವ ಸಾಧ್ಯತೆ ಇರುವಂತಹ ಆರೆಂಟು ಕ್ಷೇತ್ರಗಳನ್ನು ಹೊರತುಪಡಿಸಿ, ಉಳಿದ ಕಡೆ ಪಕ್ಷದ ಉಮೇದುವಾರರ ಹೆಸರು ಘೋಷಿ ಸುವ ಲೆಕ್ಕಾಚಾರ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ರಾಜ್ಯ ರಾಜಧಾನಿಯಲ್ಲೇ ಎರ ಡನೇ ಪಟ್ಟಿ ಅಂತಿಮಗೊಳಿಸಿ, ಕಾಂಗ್ರೆಸ್ ಚುನಾವಣ ಸಮಿತಿಗೆ ಅದನ್ನು ಕಳುಹಿಸಿಕೊಡಲಾಗುವುದು. ಅಲ್ಲಿ ಸಣ್ಣಪುಟ್ಟ ಮಾರ್ಪಾಡು ಗಳೊಂದಿಗೆ ಅದನ್ನು ಅಂತಿಮಗೊಳಿಸ ಲಾಗುವುದು.
ಪಕ್ಷದ ಚುನಾವಣ ಸಮಿತಿ ಸಭೆ ಕೂಡ ಅದೇ ದಿನ ನಡೆಯಲಿದೆ. ಹಾಗಾಗಿ ಸೋಮ ಅಥವಾ ಮಂಗಳವಾರ ಈ ಕುತೂಹಲಕ್ಕೆ ಬಹುತೇಕ ತೆರೆಬೀಳುವ ಸಾಧ್ಯತೆ ಇದೆ.
ಕೆಲವೆಡೆ ಬಿಜೆಪಿಯು ಹಾಲಿ ಸಂಸದರನ್ನು ಕೈಬಿಟ್ಟು ಹೊಸ ಮುಖವನ್ನು ಪರಿಚಯಿಸಲು ಮುಂದಾಗಿದೆ. ಹಲವೆಡೆ ಪಕ್ಷ ಇನ್ನೂ ಅಂತಿಮಗೊಳಿಸಬೇಕಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಅಭ್ಯರ್ಥಿ ಅಂತಿಮವಾಗಿದ್ದರೂ ಪಕ್ಷ ಸೇರ್ಪಡೆ ಕಾರ್ಯಕ್ರಮ ಆಗಿಲ್ಲ. ಇಂತಹ ಹಲವು ಕಾರಣಗಳಿಂದ ಅನಂತರದ ಹಂತದಲ್ಲಿ ಪ್ರಕಟಗೊಳ್ಳಲಿವೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಪೈಪೋಟಿ ಹೆಚ್ಚಿರುವ ಆಯ್ದ ಕ್ಷೇತ್ರಗಳಲ್ಲಿ ಸಚಿವರನ್ನು ಕಣಕ್ಕಿಳಿಸಲು ಪಕ್ಷದ ಹೈಕಮಾಂಡ್ ಯೋಚಿಸಿತ್ತು. ಆದರೆ ಈ ಹೊರೆಯಿಂದ ನುಣುಚಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸಿರುವ ಸಚಿವರು ಕುಟುಂಬದ ಕುಡಿಗಳನ್ನೇ ಅಖಾಡಕ್ಕಿಳಿಸಿ, ಗೆಲ್ಲಿಸಿಕೊಂಡು ಬರುವುದಾಗಿ ತಮ್ಮ ನಾಯಕರ ಮನವೊಲಿಸುವಲ್ಲಿ ಭಾಗಶಃ ಯಶಸ್ವಿಯಾಗಿದೆ. ಆದರೂ ಪಟ್ಟಿ ಅಂತಿಮಗೊಳ್ಳುವವರೆಗೂ ತಳಮಳ ಮನೆ ಮಾಡಿದೆ.
ಇಂದು ಯಾವುದು ಅಂತಿಮ?
ಮಂಗಳೂರು, ಬೆಂಗಳೂರು ದಕ್ಷಿಣ, ಕೇಂದ್ರ ಮತ್ತು ಉತ್ತರ, ಚಿತ್ರದುರ್ಗ, ಹುಬ್ಬಳ್ಳಿ-ಧಾರವಾಡ, ಬಳ್ಳಾರಿ, ಉತ್ತರ ಕನ್ನಡ, ಬಳ್ಳಾರಿ, ಬೀದರ್, ಕಲಬುರಗಿ, ಕೊಪ್ಪಳ ಕ್ಷೇತ್ರಗಳು.
ಕಗ್ಗಂಟಾಗಿರುವ ಕ್ಷೇತ್ರಗಳು
ಉಡುಪಿ-ಚಿಕ್ಕಮಗಳೂರು, ಬೆಳಗಾವಿ, ಚಿಕ್ಕೋಡಿ, ಚಿಕ್ಕಬಳ್ಳಾಪುರ, ರಾಯಚೂರು, ಬಾಗಲಕೋಟೆ ಸೇರಿದಂತೆ ಆರೆಂಟು ಕ್ಷೇತ್ರಗಳು. ಇವುಗಳ ಬಗ್ಗೆ ಮತ್ತೂಂದು ಹಂತದಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಗ್ಯಾರಂಟಿ ಸಮಿತಿ
ನೇಮಕಕ್ಕೆ ಚರ್ಚೆ?
ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಗಳಿಗೆ ಪದಾಧಿಕಾರಿಗಳ ನೇಮಕದ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಎಲ್ಲ ಐದು ಗ್ಯಾರಂಟಿಗಳ ಅನುಷ್ಠಾನ ಮತ್ತು ಮೇಲುಸ್ತುವಾರಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಮಿತಿಗಳ ರಚನೆ ಆಗಬೇಕಿದೆ. ಇದಕ್ಕಾಗಿ ಸುಮಾರು ಆರೇಳು ಸಾವಿರ ಕಾರ್ಯಕರ್ತರಿಗೆ ಈ ಸಮಿತಿಗಳ ಮೂಲಕ ಕಾಂಗ್ರೆಸ್ ಅಧಿಕಾರ ಭಾಗ್ಯ ನೀಡಲಿದೆ. ಈ ಸಂಬಂಧದ ಕಸರತ್ತು ಕೂಡ ಇದೇ ವೇಳೆ ನಡೆಯುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?