ಕಾಂಗ್ರೆಸ್ನಿಂದ ಭಾರತ್ ಜೋಡೋ: ಜಿಲ್ಲಾವಾರು ಸಂಯೋಜಕರ ನೇಮಕ
Team Udayavani, Aug 9, 2022, 10:36 PM IST
ಬೆಂಗಳೂರು: ಮುಂಬರುವ ಭಾರತ್ ಜೋಡೋ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರ ಚಾಮರಾಜನಗರ, ಮೈಸೂರು, ಮಂಡ್ಯ ಸೇರಿ ಹಲವು ಜಿಲ್ಲೆಗಳ ಜಿಲ್ಲಾವಾರು ಸಂಯೋಜಕರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.
ಚಾಮರಾಜನಗರ ಜಿಲ್ಲಾ ಸಂಯೋಜಕರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರನ್ನು ನೇಮಿಸಲಾಗಿದೆ. ಶಾಸಕ ತನ್ವೀರ್ ಸೇಠ್ ಮಾಜಿ ಶಾಸಕ ವಾಸು, ಎಂ.ಕೆ. ಸೋಮಶೇಖರ್ ಅವರನ್ನು ಮೈಸೂರು ನಗರ ಸಂಯೋಜಕರನ್ನಾಗಿ ನೇಮಿಸಲಾಗಿದೆ.
ಮೈಸೂರು ಗ್ರಾಮಾಂತರ ಸಂಯೋಜಕರಾಗಿ ಶಾಸಕ ಎಚ್.ಪಿ. ಮಂಜುನಾಥ್, ಡಾ| ಯತೀಂದ್ರ, ಮಂಡ್ಯ ಜಿಲ್ಲಾ ಸಂಯೋಜಕರಾಗಿ ಮಾಜಿ ಸಚಿವ ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ಶಾಸಕ ಮಧು ಮಾದೇಗೌಡ ಅವರನ್ನು ನೇಮಕ ಮಾಡಲಾಗಿದೆ.
ತುಮಕೂರು ಜಿಲ್ಲಾ ಸಂಯೋಜಕರಾಗಿ ಮಾಜಿ ಸಚಿವ ಟಿ.ಬಿ. ಜಯಚಂದ್ರ, ಮಾಜಿ ಶಾಸಕ ಕೆ.ಎನ್. ರಾಜಣ್ಣ ಮತ್ತು ಚಿತ್ರದುರ್ಗ ಜಿಲ್ಲಾ ಸಂಯೋಜಕರಾಗಿ ಶಾಸಕ ಟಿ. ರಘುಮೂರ್ತಿ, ಮಾಜಿ ಶಾಸಕ ಸುಧಾಕರ್ ಅವರನ್ನು ನೇಮಿಸಲಾಗಿದೆ ಹಾಗೆಯೇ ಬಳ್ಳಾರಿ ಜಿಲ್ಲೆಯ ಕಾರ್ಯಕ್ರಮ ಸಂಯೋಜಕರಾಗಿ ಸಂಸದ ನಾಸೀರ್ ಹುಸೆನ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಶಾಸಕ ಈ. ತುಕರಾಂ, ನಾಗೇಂದ್ರ, ಜೆ.ಎಸ್. ಆಂಜನೇಯಲು ಹಾಗೂ ರಾಯಚೂರು ಜಿಲ್ಲಾ ಸಂಯೋಜಕರಾಗಿ ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಭೋಸ್ರಾಜ್, ಶಾಸಕ ಅಮರೇಗೌಡ ಬಯ್ನಾಪುರ ಅವರನ್ನು ನೇಮಕ ಮಾಡಲಾಗಿದೆ.