ಬೆಂಗಳೂರು ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ: ಡಿಕೆಶಿ


Team Udayavani, Nov 23, 2021, 11:00 PM IST

ಬೆಂಗಳೂರು ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ: ಡಿಕೆಶಿ

ಬೆಂಗಳೂರು:ವಿಧಾನಪರಿಷತ್‌ ಚುನಾವಣೆಯಲ್ಲಿ ಬೆಂಗಳೂರು ನಗರ ಕ್ಷೇತ್ರವನ್ನು ಕಾಂಗ್ರೆಸ್‌ ಮೊದಲಿನಿಂದಲೂ ಗೆದ್ದುಕೊಂಡು ಬರುತ್ತಿದೆ. ಈ ಬಾರಿಯೂ ಗೆಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು ನಗರ ಕ್ಷೇತ್ರದ ಅಭ್ಯರ್ಥಿ ಯೂಸುಫ್ ಷರೀಫ್ ಅವರ ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣೆಯಲ್ಲಿ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಪಕ್ಷ ಇಲ್ಲಿ ಜಯಗಳಿಸಲಿದೆ ಎಂದು ತಿಳಿಸಿದರು.

ಚುನಾವಣೆ ಸ್ಪರ್ಧೆ ವಿಚಾರದಲ್ಲಿ ಕೆಲವು ಕಾರ್ಯಕರ್ತರು ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಕಾನೂನು ಸಲಹೆ ಪಡೆದು ಅವರನ್ನು ವಾಪಸ್ಸು ತೆಗೆಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಪರಿಷತ್‌ ಚುನಾವಣೆಗೆ ಕೆಲವರಿಗೆ ಟಿಕೆಟ್‌ ನೀಡಿಲ್ಲ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ರೀತಿಯ ಕ್ರಮ ಕೈಗೊಂಡಿದ್ದು, ಅವರನ್ನು ಬಳಸಿಕೊಳ್ಳುತ್ತೇವೆ. ವಿಧಾನಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವುದು ನಮ್ಮ ಗುರಿ ಎಂದು ತಿಳಿಸಿದರು.

ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲಿ ಕುಟುಂಬದವರಿಗೆ ಮಣೆ ಹಾಕಲಾಗಿದೆ ಎಂದು ಬಿಜೆಪಿಯವರು ಆರೋಪಿಸುತ್ತಾರೆ. ಪಾಪ, ಅವರ ಲಿಸ್ಟ್‌ ನೋಡಲಿ. ಧಾರವಾಡದಲ್ಲಿ ಜಗದೀಶ್‌ ಶೆಟ್ಟರ್‌ ಸಹೋದರ ಪ್ರದೀಪ್‌ ಶೆಟ್ಟರ್‌, ಶಿವಮೊಗ್ಗದಲ್ಲಿ ಡಿ.ಎಚ್‌.ಶಂಕರಮೂರ್ತಿ ಪುತ್ರ ಅರುಣ್‌ ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ:ಕ್ಲಬ್ , ರೆಸಾರ್ಟ್‌ ಮೇಲೆ ಪೊಲೀಸರ ದಾಳಿ : 113 ಜನರ ಬಂಧನ, 5.83 ಲಕ್ಷ ರೂ ಜಪ್ತಿ

ಇದಕ್ಕೂ ಮುನ್ನ ಯೂಸುಫ್ ಷರೀಪ್‌ ಅವರು ಜಿಲ್ಲಾಧಿಕಾರಿ ಮಂಜುನಾಥ್‌ ಅವರಿಗೆ ನಾಮಪತ್ರ ಸಲ್ಲಿಕೆ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಪರಿಷತ್‌ ಸದಸ್ಯ ನಾರಾಯಣಸ್ವಾಮಿ, ಶಾಸಕ ಶಿವಣ್ಣ ಉಪಸ್ಥಿತರಿದ್ದರು.

ಮಳೆ ಅನಾಹುತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡುತ್ತಿದ್ದಾರೆ. ರಾಜಕೀಯಕ್ಕಾಗಿ ಭೇಟಿ ಮಾಡುತ್ತಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಾಗದು. ಇದೊಂದು ಕಣ್ಣೊರೆಸುವ ತಂತ್ರ. ಕಳೆದ ವರ್ಷ ಮಳೆಯಿಂದಾದ ಹಾನಿಗೆ ಸರ್ಕಾರ ಇದುವರೆಗೂ ಬೆಳೆ ಪರಿಹಾರ ನೀಡಿಲ್ಲ. ಕೊರೊನಾದಿಂದ ಮೃತಪಟ್ಟವರಿಗೂ ಸರ್ಕಾರ ಪರಿಹಾರ ಕೊಟ್ಟಿಲ್ಲ. ಎಷ್ಟು ಪರಿಹಾರ ಕೊಟ್ಟಿದೆ ಎಂದು ದಾಖಲಾತಿ ಬಿಡುಗಡೆ ಮಾಡಲಿ.
– ಡಿ.ಕೆ.ಶಿವಕುಮಾರ್‌

ಟಾಪ್ ನ್ಯೂಸ್

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.