ಬಿಜೆಪಿಯನ್ನು ಹತ್ತಿಕ್ಕಲು ಕಾಂಗ್ರೆಸ್ ಗೂಂಡಾಗಿರಿ: ಬಿಎಸ್ವೈ
Team Udayavani, Feb 22, 2018, 3:25 PM IST
ಹಾವೇರಿ : ಬಿಜೆಪಿಯನ್ನು ಹತ್ತಿಕ್ಕಲು ಕಾಂಗ್ರೆಸ್ ಗೂಂಡಾಗಳು ಹಲ್ಲೆಗೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಸರಕಾರ ಅಸ್ತಿತ್ವದಲ್ಲಿದೆಯೋ ಇಲ್ಲವೋ ಎಂಬ ಶಂಕೆ ಮೂಡುತ್ತಿದೆ. ಸಿಎಂ ಸಿದ್ಧರಾಮಯ್ಯನವರ ಸರಕಾರಕ್ಕೆ ಜನರೇ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಹಾವೇರಿಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಕಾಂಗ್ರೆಸ್ ನಾಯಕರ ಗೂಂಡಾಗಿರಿ ರಾಜ್ಯದಲ್ಲಿ ಮುಂದುವರಿದಿದ್ದು ಭಯದ ವಾತಾವರಣ ನೆಲೆಗೊಂಡಿದೆ. ಜನರಿಗೆ ಈ ಗೂಂಡಾ ಸರಕಾರದಿಂದ ಸಾಕಾಗಿ ಹೋಗಿದೆ. ಮುಂಬರುವ ಚುನಾವಣೆಯಲ್ಲಿ ಜನರೇ ಕಾಂಗ್ರೆಸಿಗೆ ಬುದ್ಧಿಕಲಿಸಲಿದಾದ್ರೆ ಎಂದವರು ಹೇಳಿದರು.