ಕಾಂಗ್ರೆಸ್ ನವರಿಗೆ ಭ್ರಷ್ಟಾಚಾರದ ಬಗ್ಗೆ ಮಾತಾಡುವ ನೈತಿಕತೆಯಿಲ್ಲ: ಕಟೀಲ್ ತಿರುಗೇಟು
Team Udayavani, Apr 1, 2022, 11:28 AM IST
ಬೆಂಗಳೂರು: ಬೊಮ್ಮಾಯಿ ಭ್ರಷ್ಟ ಸರ್ಕಾರ ಎಂದ ಕಾಂಗ್ರೆಸ್ ನವರು ಸ್ವಲ್ಪ ಯೋಚನೆ ಮಾಡಿ ಮಾತಾಡಬೇಕು. ಅವರ ಅಧ್ಯಕ್ಷರು, ರಾಷ್ಟ್ರೀಯ ಅಧ್ಯಕ್ಷರೇ ಬೇಲ್ ಮೇಲೆ ಇದ್ದಾರೆ. ಇವರು ಇದ್ದುಕೊಂಡು ನಮ್ಮ ಮೇಲೆ ಭ್ರಷ್ಟಾಚಾರ ಆರೋಪ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮ ಪಾರ್ಟಿಯ ಅಧ್ಯಕ್ಷರೇ ಭ್ರಷ್ಟಾಚಾರದ ಕೇಸ್ ನಲ್ಲಿದ್ದಾರೆ. ಅವರು ಇನ್ನೂ ಅಪರಾಧಿಯಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರನ್ನು ಉಲ್ಲೇಖಿಸುವ ಮೂಲಕ ಕಾಂಗ್ರೆಸ್ ಗೆ ತಿರುಗೇಟು ನೀಡಿದರು.
ಗಲಭೆ ಪ್ರಕರಣಗಳು ನಿಯಂತ್ರಣವಾಗಬೇಕು ಅಂದರೆ ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕಟೀಲ್, ರಾಹುಲ್ ಗಾಂಧಿ, ಸೋನಿಯ ಗಾಂಧಿಯೇ ಜಾಮೀನಿನ ಮೇಲಿದ್ದಾರೆ. ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಈ ದೇಶದಲ್ಲಿ ಅತಿ ಹೆಚ್ಚು ಕೋಮು ಗಲಭೆಗಳು ಆಗಿದ್ದು ಕಾಂಗ್ರೆಸ್ ನ ಅವಧಿಯಲ್ಲಿ. ಅತಿ ಹೆಚ್ಚು ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದು ಸಿದ್ದರಾಮಣ್ಣನ ಕಾಲದಲ್ಲಿ. ಗೋಹತ್ಯೆ ಕೇಸ್ ಆಗಿದ್ದು ಸಿದ್ದರಾಮಣ್ಣನ ಕಾಲದಲ್ಲಿ. ಕೋಮ ಗಲಭೆ ಸೃಷ್ಟಿಕರ್ತರೇ ಇವರು ಎಂದರು.
ಇದನ್ನೂ ಓದಿ:ಪಕ್ಷ ಮತ್ತು ಸರ್ಕಾರದಲ್ಲಿ ಏನೂ ಬದಲಾವಣೆ ಇಲ್ಲ: ನಳಿನ್ ಕುಮಾರ್ ಕಟೀಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ