ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಲು ಕಾಂಗ್ರೆಸ್ ತೀರ್ಮಾನ: ಏನಿದು ಡಿಕೆಶಿ ಪ್ಲ್ಯಾನ್
Team Udayavani, Jan 18, 2022, 1:20 PM IST
ಬೆಂಗಳೂರು: ಕೋವಿಡ್ ಮಾರ್ಗಸೂಚಿ ಪಾಲನೆ ಮಾಡದ ಬಿಜೆಪಿ ನಾಯಕರ ಮೇಲೆ ಕೇಸ್ ಹಾಕುವಂತೆ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಲು ಕಾಂಗ್ರೆಸ್ ತೀರ್ಮಾನ ಮಾಡಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಾವು ಸಿಎಂ ಭೇಟಿ ಮಾಡಲು ಹೋಗುವುದು ನೆಂಟಸ್ಥಿಕೆ ಮಾಡಲಲ್ಲ. ನಾವೇನು ಮಾಡುತ್ತೇವೆ ಎನ್ನುವುದನ್ನು ನೀವು ನೋಡ್ತಾ ಇರಿ ಎಂದರು.
ಸಿದ್ದರಾಮಯ್ಯನವರಿಗೆ ಕಾಯುತ್ತಿದ್ದೇನೆ, ಅವರು ಮೈಸೂರಿಗೆ ಹೋಗಿದ್ದಾರೆ. ಎನು ಮಾಡಬೇಕು ಅಲ್ಲಿಗೆ ಹೋಗಿ ಮಾಡುತ್ತಿದ್ದೇವೆ. ಈಗಾಗಲೇ ಸಿಎಸ್ ಗೆ ಪತ್ರ ಬರೆದಿದ್ದೇನೆ. ಈಗ ಸಹಿ ಹಾಕಿದ್ದೇನೆ. ನಾವು ಸುಮ್ಮನೆ ಕುಳಿತು ಕೊಳ್ಳುವವರಲ್ಲ. ನೀವು ನೋಡುತ್ತಿರಿ ಎಂದು ಡಿಕೆ ಶಿವಕುಮಾರ್ ಹೇಳಿದರು.
ಇದನ್ನೂ ಓದಿ:ಪರೀಕ್ಷೆ ಬರೆಯಲು ಬಂದವರಿಗೆ ಕೋವಿಡ್ ಪರೀಕ್ಷೆ: 68 ಮಂದಿಗೆ ಪಾಸಿಟಿವ್
ಸಚಿವ ಆರ್ ಅಶೋಕ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಾನು ಅವರಷ್ಟು ಅತಿ ಬುದ್ದಿವಂತನಲ್ಲ. ಅವರು ಕೋವಿಡ್ ಬಂದು ರೆಸ್ಟ್ ಮಾಡುತ್ತಿದ್ದರು, ಈಗ ಪಾಪ ಮಾತನಾಡುತ್ತಿದ್ದಾರೆ. ಇನ್ನಷ್ಟು ರೆಸ್ಟ್ ಮಾಡಲಿ. ಮೇಕೆದಾಟು ಯೋಜನೆ ಕುಡಿಯುವ ನೀರಿಗಾಗಿ ಕನಕಪುರದ ಒಂದೇ ಒಂದು ಎಕರೆಗೆ ಬಳಕೆಯಾಗಲ್ಲ. ಬೆಂಗಳೂರಿನ ಕುಡಿಯುವ ನೀರಿಗಾಗಿ ಯೋಜನೆ ಅದು. ಹಾಸನ ತುಮಕೂರು, ಮೈಸೂರು ರೈತರಿಗೆ ಅನುಕೂಲ ಆಗಲಿದೆ ಎಂದರು.
ಅಫೆನ್ಸ್ ಇಸ್ ದ ಬೆಸ್ಟ್ ಡಿಫೆನ್ಸ್ ಎಂಬ ಡಾ ಅಶ್ವಥ್ ನಾರಾಯಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, “ಮೆಂಟಲ್ ಬ್ಯಾಲೆನ್ಸ್ ಕಳೆದುಕೊಂಡವರ ಬಗ್ಗೆ ಮಾತನಾಡುವುದು ಬೇಡ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ