ಸೆಗಣಿ ರಾಡಿ ಸುರುವಿಕೊಂಡು ಸೊಬರದಮಠ ಪ್ರತಿಭಟನೆ
Team Udayavani, Apr 11, 2018, 6:00 AM IST
ನರಗುಂದ: ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗೆ ಆಗ್ರಹಿಸಿ ನಡೆಯುತ್ತಿರುವ ನಿರಂತರ ಹೋರಾಟ ಮಂಗಳವಾರ ಸಾವಿರ ದಿನ ಪೂರೈಸಿದ್ದು, ಹೋರಾಟ ದ ನೇತೃತ್ವ ವಹಿಸಿರುವ ಸ್ವಾಮೀಜಿ ವೀರೇಶ ಸೊಬರದಮಠ ಜೀವ ಜಲಕ್ಕಾಗಿ ಮೈಮೇಲೆ ಸೆಗಣಿ ರಾಡಿ ಸುರುವಿಕೊಂಡು ವಿನೂತನವಾಗಿ ಪ್ರತಿಭಟಿಸಿದರು.
ನಿರಂತರ ಸತ್ಯಾಗ್ರಹ ಸಾವಿರ ದಿನ ಪೂರೈಸಿದ ಹಿನ್ನೆಲೆಯಲ್ಲಿ ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು. ಪುರಸಭೆ ಆವರಣದ ಬಾಬಾಸಾಹೇಬ ಪುತ್ಥಳಿ ಬಳಿ ಪ್ರತಿಭಟನೆ ಪ್ರಾರಂಭಿಸುವ ಮುನ್ನ ಸೇರಿದ್ದ ಹೋರಾಟಗಾರರಿಂದ ಸೊಬರದಮಠ ಸ್ವಾಮೀಜಿ ಮೈಮೇಲೆ ಸೆಗಣಿ ರಾಡಿ ಖುದ್ದಾಗಿ ಸುರುವಿಕೊಂಡರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ಸಾಗಿತು. ಪ್ರತಿಭಟನಾಕಾರರು ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ನೀರಿಗಾಗಿ
ಒತ್ತಾಯಿಸಿದರು. ಮಹದಾಯಿ ಹೋರಾಟ 2015ರ ಜು.16ರಂದು ಪ್ರಾರಂಭಗೊಂಡು ಸುದೀರ್ಘ ಒಂದು ಸಾವಿರ ದಿನ ಪೂರೈಸಿತು. ರೈತರ ಅಸಹನೆ, ಆಕ್ರೋಶ ಮುಂದುವರಿಯುತ್ತಲೇ ಬಂದಿದ್ದು, ಮಂಗಳವಾರ ಸಾವಿರ ದಿನದಂದು ಹೋರಾಟಗಾರರು ಆಳುವ ಸರ್ಕಾರ, ಜನಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ