ಸಂವಿಧಾನ ಕುರಿತ ಚರ್ಚೆ: ಸ್ಪೀಕರ್‌ ಕಾಗೇರಿ ಭಾಷಣದಲ್ಲಿ ಕೆಲ ತಿದ್ದುಪಡಿ


Team Udayavani, Mar 5, 2020, 3:06 AM IST

sanvidhana

ವಿಧಾನಸಭೆ: ಸರ್‌ ಬಿ.ಎನ್‌.ರಾವ್‌ ಅವರು ರಚಿಸಿದ ಸಂವಿಧಾನದ ಮೂಲ ಕರಡು ಪ್ರತಿಯನ್ನು ಅಂಬೇಡ್ಕರ್‌ರವರ ನೇತೃತ್ವದಲ್ಲಿ ರಚಿಸಲಾದ ಸಂವಿಧಾನದ ಕರಡು ಸಮಿತಿಗೆ ಸಲ್ಲಿಸಲಾಗಿತ್ತು ಎಂಬುದು ಸೇರಿ ನನ್ನ ಪ್ರಾಸ್ತಾವಿಕ ಭಾಷಣದ ಕೆಲ ಅಂಶಗಳನ್ನು ತಿದ್ದುಪಡಿ ಮಾಡಿ ಪರಿಷ್ಕೃತ ಮಾಹಿತಿ ಒದಗಿಸಲಾಗುವುದು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸದನಕ್ಕೆ ತಿಳಿಸಿದರು.

ಸಂವಿಧಾನ ಕುರಿತ ವಿಶೇಷ ಚರ್ಚೆ ಸಂಬಂಧ ಮಂಗಳವಾರ ಕಾಗೇರಿ ಮಾಡಿದ ಪ್ರಾಸ್ತಾವಿಕ ಭಾಷಣದಲ್ಲಿ ಉಲ್ಲೇಖೀಸಿದ ಕೆಲ ಅಂಶಗಳಿಗೆ ಬುಧ ವಾರ ಚರ್ಚೆ ವೇಳೆ ಕಾಂಗ್ರೆಸ್‌ನ ಎಚ್‌.ಕೆ.ಪಾಟೀಲ್‌ ಆಕ್ಷೇಪ ವ್ಯಕ್ತಪಡಿಸಿದರು. “ಮೂಲತಃ ಮಂಗಳೂರಿನವರಾದ ಬಿ.ಎನ್‌.ರಾವ್‌ ಅವರು ಭಾರತ ಸಂವಿಧಾನದ ರಚನಾ ಸಭೆಯ ಸಲಹೆಗಾರರಾಗಿ ಕಾರ್ಯ ನಿರ್ವಹಿಸಿದರು.

ಅವರು ರಚಿಸಿದ ಸಂವಿಧಾನದ ಮೂಲ ಕರಡು ಪ್ರತಿಯನ್ನು ಅಂಬೇಡ್ಕರ್‌ ನೇತೃತ್ವದಲ್ಲಿ ರಚಿಸಲಾದ ಸಂವಿಧಾನದ ಕರಡು ಸಮಿತಿಗೆ ಸಲ್ಲಿಸಲಾಗಿತ್ತು. ಈ ಮೂಲ ಕರಡನ್ನು ರಚನಾ ಸಭೆಯಲ್ಲಿ ಚರ್ಚಿಸಿ, ಅಂಬೇಡ್ಕರ್‌ ನೇತೃತ್ವದಲ್ಲಿ ಹಲವು ಮಾರ್ಪಾಡು ಮಾಡಿ ಭಾರತೀಯರ ಸರ್ವತೋಮುಖ ಅಭಿವೃದ್ಧಿಗೆ ಸಮಗ್ರ, ಸಮರ್ಥ ಸಂವಿಧಾನ ರಚಿಸಲಾಗಿದೆ’ ಎಂದು ಕಾಗೇರಿಯವರು ಪ್ರಾಸ್ತಾವಿಕ ಭಾಷಣದಲ್ಲಿ ಉಲ್ಲೇಖೀಸಿದ್ದರು.

ಈ ಬಗ್ಗೆ ಆಕ್ಷೇಪ ತೆಗೆದ ಎಚ್‌.ಕೆ.ಪಾಟೀಲ್‌, ಪೂರ್ವಾಶ್ರಮದ ರಾಜಕೀಯ ಹಿನ್ನೆಲೆಯಲ್ಲಿ ಭಾಷಣ ಮೂಡಿದಂತಿದೆ. ಅವರ ಮಾತುಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಉಲ್ಲೇಖವಿಲ್ಲ. ಸೇನಾನಿಗಳ ಪ್ರಸ್ತಾಪವಿಲ್ಲ. ನೆಹರೂ ಅವರ ಪ್ರಸ್ತಾಪವೂ ಇಲ್ಲ. ಸ್ವಾತಂತ್ರ್ಯದ ವಿಚಾರದಲ್ಲಿ ಕಾಂಗ್ರೆಸ್‌ ಸಂಘಟನೆಯ ಕೊಡುಗೆಯನ್ನು ಯಾರೂ ಅಲ್ಲಗಳೆಯುವಂತಿಲ್ಲ ಎಂದು ಹೇಳಿದರು.

ಇದಕ್ಕೆ ಸ್ಪಷ್ಟನೆ ನೀಡಿದ ಕಾಗೇರಿ, ಸ್ವಾತಂತ್ರ್ಯ ಹೋರಾಟ ಹಾಗೂ ಸಂವಿಧಾನ ರಚನೆ ಪ್ರತ್ಯೇಕವಾಗಿಸಿ ಸಂವಿಧಾನ ಕುರಿತು ಹೆಚ್ಚು ಉಲ್ಲೇಖ ಮಾಡಲಾಗಿದೆಯೇ ಹೊರತು ಪ್ರಾಮುಖ್ಯತೆ ಇಲ್ಲ ಎಂಬ ಕಾರಣಕ್ಕೆ ಉಲ್ಲೇಖೀಸಿಲ್ಲ ಎಂದುಕೊಳ್ಳಬಾರದು ಎಂದು ತಿಳಿಸಿದರು. ಮತ್ತೆ ಮಾತು ಮುಂದುವರಿಸಿದ ಎಚ್‌.ಕೆ.ಪಾಟೀಲ್‌, ಬಿ.ಎನ್‌.ರಾವ್‌ ಬಗ್ಗೆ ಅಪಾರ ಗೌರ ವವಿದೆ. ಆದರೆ, ಅವರೇ ಸಂವಿಧಾನದ ಮೂಲ ಕರಡು ಪ್ರತಿ ಸಿದ್ಧಪಡಿಸಿದರು ಎಂದು ಉಲ್ಲೇಖೀಸಿರುವುದು ಸರಿಯಲ್ಲ ಎಂದು ಆಕ್ಷೇಪ ತೆಗೆದರು.

ಅಂಬೇಡ್ಕರ್‌ಗೆ ಗೌರವ ಸಲ್ಲಬೇಕು: ಆಗ ಮಧ್ಯ ಪ್ರವೇಶಿಸಿದ ಸಿಎಂ, ಅಂಬೇಡ್ಕರ್‌ ಬಗ್ಗೆ ನಮಗೆ ವಿಶೇಷ ಗೌರವವಿದೆ. 7 ಮಂದಿ ಸದಸ್ಯರಿ ದ್ದರೂ ಅಂಬೇಡ್ಕರ್‌ ಒಬ್ಬರೇ ಕರಡು ಪೂರ್ತಿ ಮಾಡಿ ಸಂವಿಧಾನಕ್ಕೆ ದಾರಿ ತೋರಿದವರು ಎಂದು ಚರ್ಚೆಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು. ಬಳಿಕ ಸ್ಪಷ್ಟನೆ ನೀಡಿದ ಕಾಗೇರಿ, ಎಚ್‌.ಕೆ.ಪಾಟೀಲ್‌ ಅವರು ಪ್ರಸ್ತಾಪಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ನನ್ನ ಪ್ರಾಸ್ತಾವಿಕ ನುಡಿಗಳಲ್ಲಿ ಎಂ.ಎನ್‌.ರಾವ್‌ ಅವರ ಪಾತ್ರದ ಬಗೆಗಿನ ಮಾಹಿತಿ ಕುರಿತಂತೆ ಕೆಲ ತಿದ್ದುಪಡಿ ಮಾಡಿ, ಪರಿಷ್ಕೃತ ಮಾಹಿತಿ ನೀಡಲಾಗುವುದು ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.