ವಿಷ್ಣು ಸ್ಮಾರಕ ; ಅನಿರುದ್ಧ್ ವಿರುದ್ಧ ಕಿಡಿ ಕಾರಿದ ಸಿಎಂ ಎಚ್ಡಿಕೆ !
Team Udayavani, Nov 28, 2018, 12:36 PM IST
ಬೆಂಗಳೂರು: ನಟ ವಿಷ್ಣು ವರ್ಧನ್ ಅವರ ಸ್ಮಾರಕ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿ ಸರ್ಕಾರವನ್ನು ಟೀಕಿಸಿದ್ದ ನಟ ಅನಿರುದ್ಧ್ ವಿರುದ್ಧ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೆಂಡಾಮಂಡಲವಾಗಿದ್ದಾರೆ.
ಅನಿರುದ್ಧ್ ಅವರು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ
ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ವಿಷ್ಣು ವರ್ಧನ್ ಅವರ ಸ್ಮಾರಕ ನಿರ್ಮಾಣ ಮಾಡಬೇಕು. ಈಗಿನ ಮುಖ್ಯಮಂತ್ರಿ ಉಡಾಫೆ ಮುಖ್ಯಮಂತ್ರಿ ಎಂದಿದ್ದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಎಚ್ಡಿಕೆ, ತೀವ್ರ ಆಕ್ರೋಶ ಹೊರ ಹಾಕಿದರು. ವಿಷ್ಣು ವರ್ಧನ್ ಅವರ ಅಳಿಯನ ಹೇಳಿಕೆಯಿಂದ ನನಗೆ ಬಹಳ ನೋವಾಯಿತು. ನಾನು ಕದ್ದು ಮುಚ್ಚಿ ಮಾತನಾಡುವವನಲ್ಲ, ನೇರವಾಗಿ ಮಾತನಾಡುವವ ಎಂದರು.
ಉಡಾಫೆ ಮುಖ್ಯಮಂತ್ರಿ ಅಂತ ಪದ ಬಳಸಿದ್ದಾರೆ. ಪದ ಬಳಕೆ ಮಾಡಬೇಕಾದರೆ ಗಾಂಭೀರ್ಯತೆ ಅರ್ಥ ಮಾಡಿಕೊಳ್ಳಬೇಕು. ನಾಡಿನ ಜನತೆಗೆ ಸೇವೆ ಸಲ್ಲಿಸಿದ ಹಲವಾರು ಪ್ರಮುಖ ನಾಯಕರಿದ್ದಾರೆ. ಕಲಾವಿದರಾಗಿ ಅವರ ಕೊಡುಗೆಗೆ ಗೌರವ ಸಲ್ಲಿಸುವುದಷ್ಟೇ ನಾನು ಮಾಡಿದ್ದೇನೆ ಎಂದರು.
ವಿಷ್ಣು ವರ್ಧನ್ ಅವರು ನಿಧನರಾದಾಗ ನಾನು ಅಧಿಕಾರದಲ್ಲಿರಲಿಲ್ಲ.10 ವರ್ಷಗಳ ಹಿಂದೆ ಮೈಸೂರಿನಿಂದ ವಿಷ್ಣು ವರ್ಧನ್ ಅವರ ಪಾರ್ಥೀವ ಶರೀರ ತರುತ್ತಿದ್ದರು, ನಾನು ಅವರ ಮನೆಗೆ ಹೋಗಿ ಅಂತಿಮ ದರ್ಶನ ಪಡೆದೆ , ಶಿವಾರಾಂ ಅವರ ಬಳಿ ಕೇಳಿದೆ ಎಲ್ಲಿ ಅಂತ್ಯಕ್ರಿಯೆ ಮಾಡುತ್ತೀರಿ ಎಂದು. ಬನಶಂಕರಿಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡಲು ತೀರ್ಮಾನ ಮಾಡಿದ್ದರು. ಆಗ ನಾನೇ ಒಬ್ಬ ಕಲಾವಿದ ರಾಜ್ಕುಮಾರ್ ಅವರ ಬಳಿಕ ಅವರದ್ದೇ ಅಭಿಮಾನಿಗಳನ್ನು ಗಳಿಸಿದ್ದಾರೆ. ಬನಶಂಕರಿಯಲ್ಲಿ ಮಾಡಿದರೆ ತಪ್ಪಾಗುತ್ತದೆ ಅಂತ ನಾನೇ ಸಲಹೆ ಕೊಟ್ಟು . ಅಂಬರೀಶ್ ಅವರಿಗೂ ಕರೆ ಮಾಡಿ ಮಾತನಾಡಿದ್ದೆ. ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಖುದ್ದು ನಾನೇ ಫೋನ್ ಮಾಡಿ ವಿಷ್ಣುವರ್ಧನ್ ಅವರಿಗೆ ಸರ್ಕಾರದಿಂದ ಎಲ್ಲಾದರೂ ಸಕಲ ಗೌರವ ಕೊಡಬೇಕಾಗಿದೆ ಎಂದು ಮನವಿ ಮಾಡಿದ್ದೆ. ಬಳಿಕ ಅಂದಿನ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಅವರ ಬಳಿಯೂ ಚರ್ಚೆ ಮಾಡಿದ್ದೆ ಎಂದು ತಿಳಿಸಿದರು.
ನಾನು ಭೇಟಿಗೆ ಸಮಯ ಕೊಡಲಿಲ್ಲ ಅನ್ನುತ್ತಾರಲ್ಲ , ಅವರು ಬಂದು ನನ್ನನ್ನು ಕೇಳಿ ಬಂದಿದ್ದೀರಾ ಎಂದು ಪ್ರಶ್ನಿಸಿದರು.
ನಮ್ಮ ಮೇಲೆ ದಬ್ಬಾಳಿಕೆ ಮಾಡಿದ್ರೆ ಆಗುವುದಿಲ್ಲ. ನಮ್ಮದೂ ಶಾಂತಿಪ್ರಿಯ ಸಂಸ್ಕೃತಿ , ನಮ್ಮಿಂದ ಏನಾದರೂ ತಪ್ಪಾಗಿದೆಯಾ ? ನಾನು ಕರ್ತವ್ಯ ನಿರ್ವಹಣೆ ಮಾಡಿದ್ದೀನಿ ಅಷ್ಟೇ .ರಾಜ್ಯದ ಜನತೆಯೂ ತಿಳಿದು ಕೊಳ್ಳಬೇಕಾಗುತ್ತದೆ ಎಂದರು.
ಭಾರತಿ ಕ್ಷಮೆ
ಅಳಿಯನ ಹೇಳಿಕೆ ವಿವಾದಕ್ಕೆ ಗುರಿಯಾದ ಬೆನ್ನಲ್ಲೇ ಭಾರತಿ ವಿಷ್ಣುವರ್ಧನ್ ಅವರು ಮಾಧ್ಯಮವೊಂದರಲ್ಲಿ ಅಳಿಯನ ಪರವಾಗಿ ಸಿಎಂ ಎಚ್ಡಿಕೆಯವರ ಕ್ಷಮೆ ಯಾಚಿಸಿದ್ದಾರೆ, ಮಾತ್ರವಲ್ಲದೆ ವಿಷ್ಣು ಸ್ಮಾರಕ ಮೈಸೂರಿನಲ್ಲೇ ಆಗಬೇಕು. ರಾಜ್ಕುಮಾರ್ ಮತ್ತು ಅಂಬರೀಷ್ ಅವರ ಸ್ಮಾರಕದ ಜೊತೆಯಲ್ಲಿ ಬೇಡ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ