ಪೇಜಾವರ ಶ್ರೀಗಳಿಗೆ ಚಿಕಿತ್ಸೆ ಮುಂದುವರಿಕೆ
Team Udayavani, Dec 26, 2019, 3:06 AM IST
ಉಡುಪಿ: ಪೇಜಾವರ ಶ್ರೀಗಳಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಯುತ್ತಿದ್ದು, ಹಲವು ಗಣ್ಯರು ಭೇಟಿ ನೀಡಿ ಅವರ ಕ್ಷೇಮಾರ್ಥ ಪ್ರಾರ್ಥನೆ ಸಲ್ಲಿಸಿದರು. ಕಾಂಗ್ರೆಸ್ ಪ್ರದೇಶ ಅಧ್ಯಕ್ಷ ದಿನೇಶ್ ಗುಂಡೂರಾವ್ ಭೇಟಿ ನೀಡಿ, “ನಾನು ಚಿಕ್ಕ ವಯಸ್ಸಿನಲ್ಲಿ ತಂದೆ ಜತೆ ಭೇಟಿ ಮಾಡಿದ್ದೆ. ಆಧ್ಯಾತ್ಮಿಕ, ಧಾರ್ಮಿಕ ಸೇವೆ ಮಾಡಿದ ಶಕ್ತಿ ಅವರಲ್ಲಿದೆ. ಅವರು ಶೀಘ್ರ ಗುಣಮುಖರಾಗಲಿ’ ಎಂದು ಪ್ರಾರ್ಥಿಸಿದರು.
ವಿಹಿಂಪ ರಾಷ್ಟ್ರೀಯ ಅಧ್ಯಕ್ಷ, ಮಾಜಿ ರಾಜ್ಯಪಾಲ ಸದಾಶಿವ ಕೋಕಡೆ, ಪ್ರ.ಕಾರ್ಯದರ್ಶಿ ಮಿಲಿಂದ್ ಪೆರಾಂಜೆ ಭೇಟಿ ನೀಡಿ, ವಿಹಿಂಪದೊಂದಿಗೆ ದಶಕಗಳ ಕಾಲದಿಂದ ಇದ್ದ ಸಂಬಂಧ, ಸಂಘಟನೆಯನ್ನು ಬೆಳೆಸುವಲ್ಲಿ ಶ್ರೀಗಳ ಪರಿಶ್ರಮವನ್ನು ನೆನಪಿಸಿಕೊಂಡು ಆರೋಗ್ಯ ಯಾಗುವಂತೆ ಹಾರೈಸಿದರು.
ತಿರುಮಲದಲ್ಲಿ ಪೂಜೆ: ಶ್ರೀಗಳ ಆಯುರಾರೋಗ್ಯಕ್ಕಾಗಿ ತಿರುಮಲ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಗಿದೆ. ಶೀಘ್ರದಲ್ಲಿಯೇ ಶ್ರೀಗಳವರನ್ನು ಭೇಟಿಯಾಗುತ್ತೇನೆ ಎಂದು ದೇವಸ್ಥಾನದ ಅಧ್ಯಕ್ಷ ವೈ.ವಿ.ಸುಬ್ಬರಾವ್ ತಿಳಿಸಿದ್ದಾರೆ.
ಮೈಸೂರಿನ ಹನಸೋಗೆಯ ಶ್ರೀ ವಿಶ್ವನಂದನತೀರ್ಥರು, ಕಣ್ವ ಮಠದ ಶ್ರೀ ವಿದ್ಯಾವಿರಾಜತೀರ್ಥರು, ಮಾಜಿ ಸಚಿವರಾದ ವಿನಯಕುಮಾರ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಕ್ಯಾ|ಗಣೇಶ ಕಾರ್ಣಿಕ್, ಗೋಪಾಲ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರು, ಎಂ.ಎ.ಗಫೂರ್ ಭೇಟಿ ನೀಡಿದರು.
ಹಂಪಿಯಲ್ಲಿ ಪೂಜೆ: ಶ್ರೀಗಳು ಸನ್ಯಾಸದೀಕ್ಷೆ ತೆಗೆದುಕೊಂಡ ಹಂಪಿ ಚಕ್ರತೀರ್ಥದ ಯಂತ್ರೋದ್ಧಾರಕ ಪ್ರಾಣದೇವರ ಸನ್ನಿಧಾನದಲ್ಲಿ ಗಂಗಾವತಿಯ ವಿಜಯಧ್ವಜ ವಿದ್ಯಾಪೀಠದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಲಕ್ಷ ಧನ್ವಂತರಿ ಜಪ, ತಲಾ 108ರಂತೆ ವಾಯುಸ್ತುತಿ ಪುರಶ್ಚರಣ, ಪವಮಾನ ಸೂಕ್ತ, ಮನ್ಯುಸೂಕ್ತ ಪುರಶ್ಚರಣ, ಸುಂದರಕಾಂಡ, ವಿಷ್ಣುಸಹಸ್ರನಾಮ ಪಾರಾಯಣಗಳನ್ನು ನಡೆಸಿದರು. ಆನೆಗುಡ್ಡೆ ದೇವಸ್ಥಾನದಲ್ಲಿ, ಅರ್ಚಕರು ವಿಶೇಷ ಪೂಜೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ