ಭೌತಿಕ ತರಗತಿ ಮುಂದುವರಿಸಿ: ಹೊರಟ್ಟಿ ಆಗ್ರಹ

ಆನ್‌ಲೈನ್‌ ಎಲ್ಲರಿಗೂ ಸರಿಹೊಂದದು; ವಿದ್ಯಾಗಮ ನಿಷ್ಪ್ರಯೋಜಕ

Team Udayavani, Jan 16, 2022, 6:20 AM IST

ಭೌತಿಕ ತರಗತಿ ಮುಂದುವರಿಸಿ: ಹೊರಟ್ಟಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭೌತಿಕ ತರಗತಿ ಬಗ್ಗೆ ಪೋಷಕರು ಹಾಗೂ ಮಕ್ಕಳಲ್ಲಿರುವ ಆತಂಕ-ಗೊಂದಲಗಳನ್ನು ಸರಕಾರ ದೂರ ಮಾಡಿ, ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಒಂದೇ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಗ್ರಹಿಸಿದ್ದಾರೆ.

ತಮ್ಮ ಸರಕಾರಿ ನಿವಾಸದಲ್ಲಿ ಶನಿವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಗಳ ವಿಚಾರದಲ್ಲಿ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಕೊಟ್ಟಿರುವುದು ಸರಿಯಲ್ಲ. ಒಂದು ಜಿಲ್ಲೆಯಲ್ಲಿ ಶಾಲೆ ನಡೆಸು ವುದು, ಮತ್ತೊಂದೆಡೆ ಮುಚ್ಚಿದರೆ ಗೊಂದಲವಾಗುತ್ತದೆ. ಆದ್ದರಿಂದ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಸರಕಾರ ತೀರ್ಮಾನ ತೆಗೆದು ಕೊಳ್ಳಬೇಕು ಎಂದರು.

ಮೂರನೇ ಅಲೆಯಲ್ಲಿ ಕೋವಿಡ್‌ ಸೋಂಕು ಹರಡುವುದು ಜಾಸ್ತಿ, ಆದರೆ, ಗಂಭೀರತೆ ಕಡಿಮೆ ಎಂದು ತಜ್ಞರು ಹೇಳಿದ್ದಾರೆ. ಆದ್ದರಿಂದ 1ರಿಂದ 5ನೇ ತರಗತಿಗಳನ್ನು ಬೇಕಿದ್ದರೆ ಮುಚ್ಚಲಿ. 6ನೇ ತರಗತಿಯಿಂದ ಶಾಲೆಗಳನ್ನು ನಡೆಸಲಿ. ಶಾಲೆಗಳನ್ನು ಮುಚ್ಚುವುದರಿಂದ ಕಲಿಕೆ ಮೇಲೆ ಪರಿಣಾಮ ಬೀಳುತ್ತದೆ ಎಂದರು.

ವಿದ್ಯಾಗಮ ನಿಷ್ಪ್ರಪ್ರಯೋಜಕ
ವಿದ್ಯಾಗಮ ಕಾರ್ಯಕ್ರಮದಿಂದ ಏನೂ ಪ್ರಯೋಜನವಿಲ್ಲ. ಗುಡಿ ಯೊಳಗೆ, ಮರದ ಕೆಳಗೆ ಕಲಿಸಬೇಕು ಎಂದರೆ ಹೇಗೆ? ಅದೇ ರೀತಿ ಆನ್‌ಲೈನ್‌ ತರಗತಿಗಳು ಎಲ್ಲ ಕಡೆ ಯಶಸ್ವಿ ಆಗುವುದಿಲ್ಲ. ಒಂದಿಷ್ಟು ಶ್ರೀಮಂತರ ಮತ್ತು ನಗರ ಪ್ರದೇಶದ ಮಕ್ಕಳು ಆನ್‌ಲೈನ್‌ ಮೂಲಕ ಶಿಕ್ಷಣ ಪಡೆಯಬಹುದು. ಗ್ರಾಮೀಣ ಭಾಗಕ್ಕೆ ಆನ್‌ಲೈನ್‌ ಶಿಕ್ಷಣ ನಡೆಯುವುದಿಲ್ಲ. ಇದರಿಂದ ಬಡ ಮಕ್ಕಳು ಶಿಕ್ಷಣದಲ್ಲಿ ಹಿಂದುಳಿಯುವ ಆತಂಕವಿದೆ ಎಂದು ಹೇಳಿದರು.

ಇದನ್ನೂ ಓದಿ:ರಮೇಶ ಜಾರಕಿಹೊಳಿ – ಆರೆಸ್ಸೆಸ್‌ ಮುಖಂಡ ಮಾತುಕತೆ

ವಿಧಾನಸೌಧದಲ್ಲಿ ಕೊಠಡಿ ಬೇಡುವ ಸ್ಥಿತಿ
ಶಾಸಕಾಂಗಕ್ಕಾಗಿ ಕಟ್ಟಲಾಗಿರುವ ವಿಧಾನಸೌಧದಲ್ಲಿ ಕಾರ್ಯಾಂಗ ಠಿಕಾಣಿ ಹೂಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸೌಧ ಇರುವುದೇ ಶಾಸಕಾಂಗಕ್ಕಾಗಿ. ಆದರೆ, ಅಲ್ಲಿ ಕೊಠಡಿ ಕೊಡಿ ಎಂದು ಕೇಳುವ ಪರಿಸ್ಥಿತಿ ಬಂದಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ವಿಧಾನಸೌಧ ಕಟ್ಟಿರುವುದೇ ಶಾಸಕಾಂಗಕ್ಕೆ. ವಿಧಾನಸೌಧದಲ್ಲಿ ಕೊಠಡಿ ಕೊಡಿ ಎಂದು ನಾವು ಆದೇಶಿಸಬೇಕು. ಆದರೆ, ಕೊಠಡಿ ಕೊಡಿ ಎಂದು ಕೇಳುವ ಪರಿಸ್ಥಿತಿ ಇದೆ. ನಾವು ಸಿಬಂದಿ ಮತ್ತು ಆಡಳಿತ ಸುಧಾರಣ(ಡಿಪಿಎಆರ್‌) ಇಲಾಖೆಯನ್ನು ಬೇಡುವ ಪರಿಸ್ಥಿತಿ ಇರುವುದು ಸರಿಯಲ್ಲ. ಚಿಕ್ಕ ಕೊಠಡಿಯಲ್ಲಿ 30 ಸಿಬಂದಿ ಕುಳಿತುಕೊಳ್ಳಬೇಕಾಗಿದ್ದು, ಸದ್ಯದ ಸ್ಥಿತಿಯಲ್ಲಿ ಅದು ಕಷ್ಟವಾಗುತ್ತದೆ. ಕೊಠಡಿ ಕೊಡುವಂತೆ ಡಿಪಿಎಆರ್‌ ಕಾರ್ಯದರ್ಶಿಗೆ ಪತ್ರ ಬರೆದಿದ್ದೇನೆ. ಏನು ಮಾಡುತ್ತಾರೆ ನೋಡೋಣ. ಸ್ಪೀಕರ್‌ ಕೂಡ ಕೊಠಡಿ ಕೇಳಿದ್ದಾರೆ. ಶಾಸಕಾಂಗ ಹಾಗೂ ಕಾರ್ಯಾಂಗವನ್ನು ಪ್ರತ್ಯೇಕಿಸಬೇಕು. ವಿಧಾನಸೌಧ ಇರುವುದು ಶಾಸಕಾಂಗಕ್ಕೆ ಮಾತ್ರ. ಕಾರ್ಯಾಂಗವು ಬಹುಮಹಡಿ ಕಟ್ಟಡಕ್ಕೆ (ಎಂಎಸ್‌ ಬಿಲ್ಡಿಂಗ್‌ಗೆ) ಸ್ಥಳಾಂತರವಾಗಲಿ. ನಾವು ಶಿಮ್ಲಾಗೆ ಪ್ರವಾಸ ಹೋಗಿದ್ದಾಗ ಅಲ್ಲಿ ಶಾಸಕಾಂಗ ಹಾಗೂ ಕಾರ್ಯಾಂಗ ಬೇರೆಯಾಗಿವೆ ಎಂದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.