ಮುಂದುವರಿದ ಕರ ನಿರಾಕರಣೆ ಸತ್ಯಾಗ್ರಹ
Team Udayavani, Oct 16, 2017, 10:53 AM IST
ಬೆಂಗಳೂರು: ಕೈ ಉತ್ಪನ್ನಗಳ ಮೇಲಿನ ಸುಂಕ ರದ್ದು ಮಾಡಲು ಪಕ್ಷಾತೀತವಾಗಿ ಜನಪ್ರತಿನಿಧಿಗಳು ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಆಗ್ರಹಿಸಿ ಹಿರಿಯ ರಂಗಕರ್ಮಿ ಕೆ.ಪ್ರಸನ್ನ ನೇತೃತ್ವದಲ್ಲಿ ನಿಡುಮಾಮಿಡಿ ಮಠದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಭಾನುವಾರವೂ ಮುಂದುವರಿದಿತ್ತು. ರಾಜ್ಯದಲ್ಲಿ ಶೇ.60ರಷ್ಟು ಮಂದಿ ಗಾಣಿಗರು, ಕುರುಬರು, ಕುಂಬಾರರು ಸೇರಿದಂತೆ ಹಲವು ಉಪಜಾತಿಗಳ ಜನರು ಕೈ ಉತ್ಪನ್ನಗಳನ್ನು ನಂಬಿ ಜೀವನ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಿಎಸ್ಟಿ ನೀತಿಯು ಈ ಉಪಜಾತಿಗಳನ್ನು ಬೀದಿಗೆ ತರಲಿದೆ.
ಆದ್ದರಿಂದ ರಾಜಕೀಯ ಪಕ್ಷಗಳು, ಮುಖಂಡರು ಪಕ್ಷಾತೀತವಾಗಿ ಕೈಉತ್ಪನ್ನಗಳ ಮೇಲಿನ ಸುಂಕ ರದ್ದು ಮಾಡಲು ಜಿಎಸ್ಟಿ ಕೌನ್ಸಿಲ್ಗೆ ಪತ್ರ ಬರೆಯಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದ್ದಾರೆ. ಕೈ ಉತ್ಪನ್ನಗಳ ಮೇಲೆ ಜಿಎಸ್ಟಿ ವಿಧಿಸಿರುವ ವಿಚಾರ ವನ್ನು ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಗಮನಕ್ಕೆ ತರಲಾಗುವುದು ಎಂದು ಪ್ರತಿಭಟನಾಕಾರರು ತಿಳಿಸಿದ್ದು, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಜಿಎಸ್ಟಿ ಕೌನ್ಸಿಲ್ನ ಸದಸ್ಯರು ಮೊದಲು ಈ ಹೋರಾಟಕ್ಕೆ ಸ್ಪಂದಿಸಬೇಕು. ಆದರೆ, ಇದುವರೆಗೂ ಯಾವ ಸದಸ್ಯರು ಭೇಟಿ ನೀಡಿ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಿದರು.
ಭಾನುವಾರ ಹಿರಿಯ ಚಿಂತಕ ಕೆ.ಮರುಳಸಿದ್ದಪ್ಪ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮಾಧ್ಯಮ ವಕ್ತಾರ ಪ್ರೊ. ರಾಜೀವ್ಗೌಡ, ಲೇಖಕ ಮುಡ್ನಾಕೊಡು ಚಿನ್ನಸ್ವಾಮಿ, ರಂಗಕರ್ಮಿ ಮಲ್ಲಿಕಾ ಗಣೇಶ್, ಹೋರಾಟಗಾರ ಎಸ್. ಆರ್.ಹಿರೇಮಠ, ಬ್ರಿಜೇಶ್ ಕಾಳಪ್ಪ, ಆಂಜನೇಯರೆಡ್ಡಿ, ಮಾಜಿ ಸಚಿವ ಎಂ.ಚಂದ್ರಶೇಖರ್ ಅವರ ಪತ್ನಿ ಸರೋಜಾ ಚಂದ್ರಶೇಖರ್ ಸೇರಿದಂತೆ ಹಲವರು ಪ್ರತಿ ಭಟನಾ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಗ್ರಾಮಸೇವಾ ಸಂಘದಿಂದ ನಡೆಯುತ್ತಿರುವ ಹೋರಾಟಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ, ಸಂಬಂಧಪಟ್ಟ ಜಿಎಸ್ಟಿ ಕೌನ್ಸಿಲ್ ಸದಸ್ಯರು, ಕೇಂದ್ರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ
Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ
PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ
Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ
MUST WATCH
ಹೊಸ ಸೇರ್ಪಡೆ
Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಶುಕ್ತಿಜಾ
KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ
Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್
Rank: ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ