ತೊಗರಿ ಖರೀದಿ ಪ್ರಕ್ರಿಯೆ ಮುಂದುವರಿಕೆ
Team Udayavani, Feb 20, 2020, 3:05 AM IST
ವಿಧಾನ ಪರಿಷತ್: ರಾಜ್ಯ ಸರ್ಕಾರ ಫೆ.18ರವರೆಗೆ 39,091 ರೈತರಿಂದ 3,45,106 ಕ್ವಿಂಟಲ್ ತೊಗರಿ ಖರೀದಿಸಿದ್ದು, ಖರೀದಿ ಪ್ರಕ್ರಿಯೆ ತೊಗರಿ ಬೆಳೆಯುವ ಜಿಲ್ಲೆಗಳಲ್ಲಿ ಚಾಲನೆಯಲ್ಲಿದೆ ಎಂದು ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಯನ್ನು 10 ಕ್ವಿಂಟಲ್ನಿಂದ 20 ಕ್ವಿಂಟಲ್ಗೆ ಹೆಚ್ಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ವಿಜಯ್ ಸಿಂಗ್ ಕೇಳಿದ ಪ್ರಶ್ನೆಗೆ, ಲಿಖೀತ ರೂಪದಲ್ಲಿ ಉತ್ತರ ನೀಡಿರುವ ಸಚಿವರು, ಫೆ.18ರ ಅಂತ್ಯಕ್ಕೆ 3,00,111 ರೈತರು ಖರೀದಿ ಸಂಸ್ಥೆಯೊಂದಿಗೆ ನೋಂದಣಿ ಮಾಡಿಕೊಂಡಿದ್ದಾರೆ.
3,45,106 ಕ್ವಿಂಟಲ್ ತೊಗರಿಯನ್ನು 39,091 ರೈತರಿಂದ ಖರೀದಿಸಿದ್ದೇವೆ. 2019-20ನೇ ಸಾಲಿನಲ್ಲಿ ರಾಜ್ಯದ 13.35 ಲಕ್ಷ ಹೆಕ್ಟೆರ್ನಲ್ಲಿ ತೊಗರಿ ಬಿತ್ತನೆಯಾಗಿದೆ. ಅಂದಾಜು 12.02 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆ ನಿರೀಕ್ಷೆಯಿದೆ. ತೊಗರಿ ಉತ್ಪನ್ನದ ಧಾರಣೆ 3344 ರೂ.ಗಳಿಂದ 5059ರೂ. ವರೆಗೂ ಮಾರಾಟವಾಗುತ್ತಿದೆ ಎಂದು ಉತ್ತರದಲ್ಲಿ ತಿಳಿಸಿದ್ದಾರೆ. ಗುಣಮಟ್ಟದ ತೊಗರಿ ಉತ್ಪನ್ನಕ್ಕೆ ಪ್ರತಿ ಕ್ವಿಂಟಲ್ಗೆ 5800 ರೂ. ಬೆಂಬಲ ಬೆಲೆ ಘೋಷಿಸಲಾಗಿದೆ.
ಗರಿಷ್ಠ 1,82,875 ಮೆಟ್ರಿಕ್ ಟನ್ ಖರೀದಿ ಪ್ರಮಾಣ ನಿಗದಿಪಡಿಸಿ, ನಫೆಡ್ (ರಾಷ್ಟ್ರೀಯ ಕೃಷಿ ಉತ್ಪನ್ನ ಸಹಕಾರಿ ಮಾರುಕಟ್ಟೆಗಳ ಒಕ್ಕೂಟ) ಮೂಲಕ ಖರೀದಿಸಲು ಅನುಮೋದಿಸಲಾಗಿದೆ. ತೊಗರಿ ಬೆಳೆಯುವ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ನಫೆಡ್ ಸಂಸ್ಥೆ ರಾಜ್ಯ ಸರ್ಕಾರದ ಮಾರ್ಕ್ಫೆಡ್ ಹಾಗೂ ತೊಗರಿ ಅಭಿವೃದ್ಧಿ ಮಂಡಳಿ ಮೂಲಕ ಖರೀದಿ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ