ಕೊರೊನಾ.. ಕರೋನಾ.. ಕೆರೋನಾ..?


Team Udayavani, Mar 9, 2020, 3:04 AM IST

corona

ಎಲ್ಲೆಡೆ ಕೊರೊನಾ ಸೋಂಕು ಭೀತಿ ಹೆಚ್ಚಾಗಿದ್ದು, ರಾಜ್ಯದಲ್ಲಿ ಸೋಂಕು ಹರಡದಂತೆ ಸರ್ಕಾರ ಅಗತ್ಯ ಕ್ರಮಗಳ ಕೈಗೊಳ್ಳುತ್ತಿರುವುದು ತಿಳಿದಿರುವ ವಿಚಾರ. ರೋಗ ಹರಡುವ ವೈರಸ್‌ ಬಗ್ಗೆ ಪದ ಬಳಕೆಯನ್ನು ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಮಾಡುತ್ತಿದ್ದಾರೆ. ಅನೇಕರು ಕೊರೊನಾ ಎಂಬುದನ್ನು ಕರೋನಾ, ಕರನಾ, ಕೋರನಾ ಎಂದೆಲ್ಲಾ ಪದ ಬಳಕೆ ಮಾಡುತ್ತಿದ್ದಾರೆ. ಈ ನಡುವೆ ಸಚಿವರೊಬ್ಬರು ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ “ಕೆರೋನಾ” ಎನ್ನುವ ಮೂಲಕ ಈ ಸಾಲಿಗೆ ಹೊಸ ಪದ ಸೃಷ್ಟಿಸಿದರು. ಅಲ್ಲದೇ ನೊವೆಲ್‌ ಕೊರೊನಾ ವೈರಸ್‌ ಸೋಂಕು ಡಿಸೆಂಬರ್‌ನಿಂದ ಇತ್ತೀಚೆಗೆ ಕಾಣಿಸಿಕೊಂಡಿದೆ.

ಆದರೆ ಸಚಿವರು ಮಾತನಾಡು ವಾಗ “ಕೆರೋನಾ ವೈರಸ್‌ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಒಟ್ಟೊಟ್ಟಾಗಿ ಸೇರಿಕೊಂಡು ಆರು ತಿಂಗಳಿಂದ ಅಧ್ಯಯನ ಮಾಡಿದ್ದೇವೆ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ’ ಎನ್ನುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದರು. ಈ ಎರಡು ಅಂಶಗಳಿಂದ ಸುದ್ದಿಗೋಷ್ಠಿಯಲ್ಲಿದ್ದವರಿಗೆ ಯಾವುದು ಈ ಆರು ತಿಂಗಳಿಂದ ರಾಜ್ಯ ಸರ್ಕಾರದ ಎರಡು ಇಲಾಖೆಗಳು ಅಧ್ಯಯನ ನಡೆಸುತ್ತಿರುವ “ಕೆರೋನಾ ವೈರಸ್‌’ ಎಂಬ ಗೊಂದಲ ಮೂಡಿತು.

ಸಂಚಾರ ಪೊಲೀಸರಿಗೇ ಹವಾ!
ಕೊರೊನಾ ಭೀತಿಗೆ ಎಚ್ಚೆತ್ತುಕೊಂಡಿರುವ ಕೆಲವರು ಮಾಸ್ಕ್ಗಳ ಮೊರೆ ಹೋಗಿದ್ದಾರೆ. ಮತ್ತೂಂದೆಡೆ, ಸಂಚಾರ ಪೊಲೀಸರು ಡ್ರಿಂಕ್‌ ಆಂಡ್‌ ಡ್ರೈವ್‌ ಪ್ರಕರಣಗಳಲ್ಲಿ ವಾಹನ ಸವಾರರು ಮದ್ಯ ಸೇವಿಸಿದ್ದಾರಾ? ಇಲ್ಲವೇ? ಎಂಬುದನ್ನು ತಿಳಿಯಲು ಯಂತ್ರಗಳನ್ನು ಊದಲು ಹೇಳುತ್ತಾರೆ. ಅಲ್ಲದೆ, ಮದ್ಯಪಾನ ಬಗ್ಗೆ ಖಚಿತ ಪಡಿಸಿಕೊಳ್ಳಲು ಮುಖದ ಹತ್ತಿರ ಬಂದು ನಿಮ್ಮ ಹೆಸರು ಏನು? ಎಲ್ಲಿಂದ ಬಂದಿದ್ದಿರಿ? ಎಂದು ಕೇಳುತ್ತಿದ್ದ ಸಂಚಾರ ಪೊಲೀಸರಿಗೆ ವಾಹನ ಸವಾರರೇ “ಕೊರೊನಾ’ ಶಾಕ್‌ ಕೊಟ್ಟಿದ್ದಾರೆ!

ಇದೀಗ ಸಂಚಾರ ಪೊಲೀಸರು ಮತ್ತು ವಾಹನ ಸವಾರರ ನಡುವಿನ ವಾಕ್ಸಮರಕ್ಕೂ ಕಾರಣವಾಗಿದೆ. ಊದಲು ಹೇಳುವಾಗ ಹೊಸ ಪೈಪ್‌ ಹಾಕಿ ಎಂದು ವಾಹನ ಸವಾರ ಪಟ್ಟು ಹಿಡಿದರೆ, ಸಂಚಾರ ಪೊಲೀಸರು ಮೊದಲು ಊದಬೇಕು. ನಂತರ ಪೈಪ್‌ ಹಾಕಿ ಎಷ್ಟು ಪ್ರಮಾಣದಲ್ಲಿ ಕುಡಿದಿದ್ದಿರಾ ಎಂದು ಖಚಿತ ಪಡಿಸಿಕೊಳ್ಳುತ್ತೇವೆ ಎಂದು ಹೇಳುತ್ತಾರೆ. ಇಬ್ಬರ ನಡುವೆ ವಾಗ್ವಾದ ನಡೆಯುತ್ತಿದೆ. ಯಂತ್ರ ಊದಿದಾಗ ಸೋಂಕು ಹರಡುವ ಸಾಧ್ಯತೆಯಿದೆ. ನಿಮಗೂ ರೋಗ ಅಂಟಿಕೊಳ್ಳುತ್ತದೆ ಎಚ್ಚರಿಕೆಯಿಂದ ಇರುವಂತೆ ವಾಹನ ಸವಾರರೇ ಸಂಚಾರ ಪೊಲೀಸರಿಗೆ ಸಲಹೆ ನೀಡುತ್ತಿದ್ದಾರೆ. ಅದರಿಂದ ವಿಚಲಿತಗೊಂಡ ಸಂಚಾರ ಪೊಲೀಸರು ಪ್ರತಿಯೊಬ್ಬರಿಗೂ ಹೊಸ ಪೈಪ್‌ ಹಾಕಿ ಡ್ರಿಂಕ್‌ ಆ್ಯಂಡ್‌ ಡ್ರೈವ್‌ ಪರಿಶೀಲನೆ ಮಾಡುತ್ತಿದ್ದಾರಂತೆ.

ಯಾವ ಕಡೆ ಧಿಕ್ಕಾರ?
ಸರ್‌.ಪುಟ್ಟಣ್ಣ ಚೆಟ್ಟಿ ಪುರಭವನದ ಮುಂದೆ ಪ್ರತಿಭಟನೆಗೆ ಅವಕಾಶ ನೀಡದೆ ಇರುವುದನ್ನು ವಿರೋಧಿಸಿ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯ ಕೌನ್ಸಿಲ್‌ ಕಟ್ಟಡದ ಎದುರು ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಇದೇ ಸಮಯಕ್ಕೆ ಬಿಬಿಎಂಪಿ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ತಮ್ಮ ಬೇಡಿಕೆ ಈಡೇರಿಸುವಂತೆ ಕೌನ್ಸಿಲ್‌ ಕಟ್ಟಡದ ಸಮೀಪವೇ ಪ್ರತಿಭಟನೆ ಮಾಡಲು ಪ್ರಾರಂಭಿಸಿದರು. ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆ ವರದಿ ಮಾಡುತ್ತಿದ್ದ ಕ್ಯಾಮರಾದ ಕಣ್ಣುಗಳು ನೌಕರರ ಸಂಘದ ಪ್ರತಿಭಟನೆಯತ್ತ ತಿರುಗಿದವು.ಆದರೆ, ಮಾಧ್ಯಮ ಪ್ರತಿನಿಧಿಗಳು ಮಾತ್ರ ಯಾವ ಧಿಕ್ಕಾರದ ಕಡೆ ಹೋಗಬೇಕು ಎಂದು ತಿಳಿಯದೆ ಗೊಂದಲಕ್ಕೆ ಬಿದ್ದರು. ಮಾಧ್ಯಮಗಳ ಗಮನ ಸೆಳೆಯಲು ಎರಡೂ ಕಡೆ ಪೈಪೋಟಿಯ ಮೇಲೆ ಧಿಕ್ಕಾರದ ಕೂಗು ಕೇಳಿಸಿತು!

* ಲಕ್ಷ್ಮಿ, ಪಾಗೋಜಿ, ಬಿರಾದಾರ್‌

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.