ಉದ್ದಿಮೆಗಳ ಕಾರ್ಪೊರೇಟ್ ತೆರಿಗೆ ಕಡಿತ: ಆರ್ವಿಡಿ ಸ್ವಾಗತ
Team Udayavani, Sep 21, 2019, 3:00 AM IST
ಬೆಂಗಳೂರು: ಉದ್ದಿಮೆಗಳ ಮೇಲೆ ವಿಧಿಸಿದ್ದ ಕಾರ್ಪೊರೇಟ್ ತೆರಿಗೆಯನ್ನು ಕಡಿತಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಸ್ವಾಗತಿಸಿದ್ದಾರೆ. ದೇಶದ ಆರ್ಥಿಕತೆಯನ್ನು ಉತ್ತೇಜಿಸಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತೆಗೆದು ಕೊಂಡ ನಿರ್ಧಾರ ಸಮಯೋಚಿತ ಮತ್ತು ಸಮಂಜಸವಾಗಿದೆ ಎಂದಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಪ್ರಸ್ತುತ ಕಂಪನಿಗಳ ಮೇಲಿನ ತೆರಿಗೆಯನ್ನು 22 ಹಾಗೂ ಹೊಸ ಉತ್ಪಾದಕ ಸಂಸ್ಥೆಗಳ ಮೇಲಿನ ತೆರಿಗೆಯನ್ನು 15ಕ್ಕೆ ಇಳಿಸುವ ಮೂಲಕ ಕಾರ್ಪೊರೇಟ್ ವಲಯದ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಂದು ಹೇಳಿದ್ದಾರೆ. ದೇಶದ ಆರ್ಥಿಕ ಬೆನ್ನೆಲುಬಾಗಿರುವ ಹೆಚ್ಚು ಉದ್ಯೋಗ ಸೃಷ್ಟಿಸುತ್ತಿರುವ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳನ್ನು ಉತ್ತೇಜಿಸಿದಂತಾಗುತ್ತದೆ.
ಆರ್ಥಿಕ ಹಿಂಜರಿತದಿಂದ ಅನೇಕ ಕೈಗಾರಿಕೆಗಳು ನಿರು ದ್ಯೋಗ ಸಮಸ್ಯೆ ಹುಟ್ಟು ಹಾಕಿವೆ. ಹೀಗಾಗಿ ಉದ್ದಿಮೆದಾರರ ವಿಶ್ವಾಸ ಹೆಚ್ಚಿಸಿ, ಉದ್ದಿಮೆಗಳಿಗೆ ಜೀವ ತುಂಬಬೇಕಾದ ಜವಾಬ್ದಾರಿ ಕೇಂದ್ರ ಸರ್ಕಾರದ ಮೇಲಿದೆ. 2020ರ ಮಾರ್ಚ್ವರೆಗೆ ಆರಂ ಭಿ ಸುವ ಸಣ್ಣ ಹಾಗೂ ಮಧ್ಯಮ, ಅತಿ ಸಣ್ಣ ಉದ್ದಿಮೆಗಳ ಸಾಲವನ್ನು ಬಲವಂತವಾಗಿ ವಸೂಲಿ ಮಾಡಬಾರದೆಂದು ಹೇಳಿರುವುದು ಪ್ರಶಂಸನೀಯ ಎಂದಿದ್ದಾರೆ.
ಸಣ್ಣ ಉದ್ದಿಮೆಗಳಿಗೆ ಮುಂಗಡ ಸಾಲ ಮರು ಪಾವತಿಸುವ ಅವಧಿಯನ್ನು 5 ವರ್ಷಗಳಿಗಿಂತಲೂ ಹೆಚ್ಚು ಮಾಡಿ ದೀರ್ಘಾವಧಿ ಸಾಲ ಮರುಪಾವತಿ ಅವಧಿಯನ್ನು 10-15 ವರ್ಷಕ್ಕೆ ಹೆಚ್ಚಿಸುವಂತೆ ದೇಶಪಾಂಡೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
MUST WATCH
ಹೊಸ ಸೇರ್ಪಡೆ
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್