ಕರಾವಳಿ ಕಣ್ಗಾವಲಿಗೆ ಬಿಇಎಲ್‌ನಿಂದ ಕೋಸ್ಟಲ್‌ ಸೆನ್ಸಾರ್‌


Team Udayavani, Feb 22, 2019, 1:25 AM IST

9.jpg

ಬೆಂಗಳೂರು: ಕರಾವಳಿಯ ಕಣ್ಗಾವಲಿಗಾಗಿ ಭಾರತ್‌ ಎಲೆಕ್ಟ್ರಾನಿಕ್ಸ್‌ ಸಂಸ್ಥೆ(ಬಿಇಎಲ್‌) ಆಧುನಿಕೃತ ಯಂತ್ರ ತಯಾರಿಸಿ ನೌಕಾಸೇನೆಗೆ ನೀಡಿದ್ದು ಎಲೆಕ್ಟ್ರೋ ಆಪ್ಟಿಕಲ್‌ ಸಿಸ್ಟಮ್‌ನಡಿ ಹೊಸ ತಂತ್ರ ಜ್ಞಾನ ಬಳಸಿ ಸೆನ್ಸಾರ್‌ ಯಂತ್ರ ಸಿದಟಛಿಪಡಿಸಲಾಗಿದೆ. ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ಈ ಯಂತ್ರ ಪ್ರದರ್ಶನಕ್ಕೆ ಇಡಲಾಗಿದ್ದು, ಕರಾವಳಿ ಭಾಗದಿಂದ ಭಯೋತ್ಪಾದಕರು ಅಥವಾ ಕಡಲ್ಗಳ್ಳರು ದೇಶದೊಳಗೆ ನುಸುಳುವುದನ್ನು ಈ ಯಂತ್ರದ ಮೂಲಕ ತಪ್ಪಿಸಬಹುದಾಗಿದೆ.

ರಡಾರ್‌ ವ್ಯವಸ್ಥೆಗಿಂತಲೂ ಇದು ಸ್ವಲ್ಪ ಭಿನ್ನವಾಗಿದ್ದು, ಎಲೆಕ್ಟ್ರೋ ಆಪ್ಟಿಕಲ್‌ ಸಿಸ್ಟಮ್‌ ಮೂಲಕ ಈ ಯಂತ್ರ ಕೆಲಸ ಮಾಡುವುದರಿಂದ ದೆಹಲಿ ಮುಖ್ಯ ಕಚೇರಿಯಿಂದಲೇ ಭಾರತದ ಎಲ್ಲ ಗಡಿ ಭಾಗದ ಭದ್ರತೆಯ ನಿಯಂತ್ರಣ ಮಾಡಬಹುದಾಗಿದೆ. 25 ಕಿ.ಮೀ ವ್ಯಾಪ್ತಿಯಲ್ಲಿ ಸಮುದ್ರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದರೂ ಅದರ ವಿಡಿಯೋ ಮತ್ತು ಛಾಯಾಚಿತ್ರ ತಕ್ಷಣವೇ ಸಿಗಲಿದೆ. 360 ಡಿಗ್ರಿ ವ್ಯಾಪ್ತಿಯನ್ನು ಹೊಂದಿದ ಕ್ಯಾಮರಾ ಇದರಲ್ಲಿದೆ. ಮುಂಬೈನಲ್ಲಿ ನಡೆದ ಭಯೋತ್ಪಾದಕರ ದಾಳಿಯ ನಂತರ ದೇಶದ ಕರಾವಳಿಯ ಸುರಕ್ಷತೆಗಾಗಿ ಅತ್ಯಾಧುನಿಕ ಯಂತ್ರ ತಯಾರಿಸುವ ಕಾರ್ಯಕ್ಕೆ ಬಿಇಎಲ್‌ ಚಾಲನೆ ನೀಡಿತ್ತು. ಇದೀಗ ಯಂತ್ರ ಕಾರ್ಯಾರಂಭಕ್ಕೆ ಸಜ್ಜಾಗಿದ್ದು, ಪ್ರಯೋಗಾರ್ಥ ಪರೀಕ್ಷೆ ಕೇರಳದ ಕರಾವಳಿಯಲ್ಲಿ ಆರಂಭವಾಗಿದೆ. ಬಿಇಎಲ್‌ ಸಿದಟಛಿಪಡಿಸಿರುವ ಎಲೆಕ್ಟ್ರಾನಿಕ್‌ ಆಧಾರಿತ ಕರಾವಳಿ ಕಣ್ಗಾವಲು ವ್ಯವಸ್ಥೆಯ ಮೂಲಕವೇ ಭಾರತೀಯ ನೌಕದಳವು ಕೇರಳದಲ್ಲಿ ಕೆಲವೊಂದು ಮಾಹಿತಿ ಪಡೆಯಲು ಆರಂಭಿಸಿದೆ ಎಂದು ಬಿಇಎಲ್‌ ಹಿರಿಯ ಅಧಿಕಾರಿ ಮಾಹಿತಿ ನೀಡಿದರು.

ಯಂತ್ರದ ಕಾರ್ಯತಂತ್ರ?

ಯಂತ್ರ ಟ್ರ್ಯಾಕಿಂಗ್‌ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುತ್ತದೆ. ಮಳೆ,ಚಳಿ, ಗಾಳಿ ಹಾಗೂ ಬಿಸಿಲು ಹೀಗೆ ಎಲ್ಲ ರೀತಿಯ ಹವಾಮಾನಕ್ಕೂ ಒಗ್ಗಿಕೊಂಡು ದಿನದ 24 ಗಂಟೆಯೂ ಈ ಯಂತ್ರ ಕೆಲಸ ಮಾಡಲಿದೆ. ಇದರಲ್ಲಿ ಹಗಲು ಮತ್ತು ರಾತ್ರಿ ಕಾರ್ಯನಿರ್ವ ಹಿಸಬಲ್ಲ ಎರಡು ಕ್ಯಾಮರಾ ಇದೆ. ಅತ್ಯಂತ ಸೂಕ್ಷ್ಮವಾದ ಸೆನ್ಸಾರ್‌ ವ್ಯವಸ್ಥೆ ಅಳವಡಿಸಿರುವು ದರಿಂದ ಅಕ್ರಮವನ್ನು ವೇಗವಾಗಿ ಪತ್ತೆಹಚ್ಚುತ್ತದೆ.

ಸಮುದ್ರದಲ್ಲಿ ಸುಮಾರು 25 ಕಿ.ಮೀ ದೂರದ ವರೆಗಿನ ಚಟುವಟಿಕೆಯನ್ನು ಇದರ ಕಣ್ಗಾವಲಿನ ಮೂಲಕ ನೋಡಬಹುದಾಗಿದೆ. ಅಲ್ಲದೇ, ಹೊರ ರಾಜ್ಯ ಅಥವಾ ಬೇರೆ ದೇಶಗಳಿಂದ ಬೋಟುಗಳು ಭಾರತದ ಗಡಿ ಭಾಗ ಪ್ರವೇಶಿಸಿದರೆ, ತಕ್ಷಣವೇ ಮಾಹಿತಿ ನೀಡಬಲ್ಲ ಸಾಮರ್ಥ್ಯ ಹೊಂದಿದೆ. ನೌಕಪಡೆಯವರು ಇದನ್ನು ಪ್ರಾಯೋಗಿಕವಾಗಿ ಕೇರಳದಲ್ಲಿ ಅನುಷ್ಠಾನಕ್ಕೆ ತಂದಿದ್ದು, ಕರಾವಳಿ ಪ್ರದೇಶಕ್ಕೂ ಇದನ್ನು ಅಳವಡಿಸುವ ಸಾಧ್ಯತೆ ಇದೆ ಎಂದು ಅಧಿಕಾರಿ ಮಾಹಿತಿ ನೀಡಿದರು.

ಆಗಸದಲ್ಲಿ ಡ್ರೋನ್‌ ಚಿನ್ನಾಟ
ಬೆಂಗಳೂರು: ವೈಮಾನಿಕ ಪ್ರದರ್ಶನದಲ್ಲಿ ಇದೇ ಮೊದಲ ಬಾರಿಗೆ ಡ್ರೋನ್‌ ಒಲಿಂಪಿಕ್‌ ಪ್ರೇಕ್ಷಕರ ಮನ ಮುದು ಗೊಳಿಸಿತು. ದೇಶದ ವಿವಿಧ ಭಾಗಗಳಿಂದ ಹತ್ತಾರು ನಮೂ ನೆಯ ಡ್ರೋನ್‌ಗಳು ಈ ಪ್ರದರ್ಶನದಲ್ಲಿ ಭಾಗವಹಿಸಿದ್ದವು. ಒಂದಕ್ಕಿಂತ ಒಂದು ಪ್ರದರ್ಶನ ನೀಡಿದ ಆ ಡ್ರೋನ್‌ಗಳು ಕೇವಲ ಎರಡು ತಾಸುಗಳಲ್ಲಿ 33.5 ಲಕ್ಷ ರೂ. ಗಳಿಸಿದವು. ದೆಹಲಿಯ ಒಂದೇ ತಂಡ ಅತಿ ಹೆಚ್ಚು ಐದು ಲಕ್ಷ ರೂ. ಬಹುಮಾನ ಬಾಚಿಕೊಂಡಿತು. ಒಟ್ಟಾರೆ 57 ಡ್ರೋನ್‌ ತಂಡಗಳು ಈ ಒಲಿಂಪಿಕ್‌ ಹಾಗೂ ಮಾದರಿ ವಿಮಾನಗಳ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಈ ಪೈಕಿ 17 ತಂಡಗಳು ಅಂತಿಮ ಸುತ್ತಿಗೆ ಅರ್ಹತೆ ಪಡೆದಿದ್ದವು. ಅಂತಿಮವಾಗಿ 9 ತಂಡಗಳು ವಿವಿಧ ವಿಭಾಗಗಳಲ್ಲಿ ಬಹುಮಾನ ಗಳಿಸಿದವು. ಯುಎಎಸ್‌ -ಡಿಟಿಯು (ಮಾನವರಹಿತ ಏರ್‌ ಸಿಸ್ಟ್‌ಂ-ದೆಹಲಿ ತಾಂತ್ರಿಕ ವಿಶ್ವವಿದ್ಯಾಲಯ) ವಿದ್ಯಾರ್ಥಿಗಳು ನೀಡಿದ ಫಾರ್ಮೇಷನ್‌ ವಿಭಾಗ (ನಾಲ್ಕೈದು ಡ್ರೋನ್‌ಗಳು ಸೇರಿ ಪರಸ್ಪರ ಸಮನ್ವಯದಿಂದ ಹಾರಾಟ ನಡೆಸುವುದು)ದಲ್ಲಿನ ಪ್ರದರ್ಶನಕ್ಕೆ ಐದು ಲಕ್ಷ ರೂ. ಬಹುಮಾನ ಸಿಕ್ಕಿತು. ಸುಡುವ ಬಿಸಿಲು ಲೆಕ್ಕಿಸದೆ, ಈ ಸ್ಪರ್ಧೆ ನೋಡುವಲ್ಲಿ ಮಕ್ಕಳು ತಲ್ಲೀನರಾಗಿದ್ದರು.

ರಾಜು ಖಾರ್ವಿ ಕೊಡೇರಿ 
 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.