ಚರಂಡಿಯಲ್ಲಿ ತುಕ್ಕು ಹಿಡಿದ ಕಂಟ್ರಿ ಪಿಸ್ತೂಲುಗಳು
Team Udayavani, Feb 13, 2020, 3:04 AM IST
ಬೆಳಗಾವಿ: ತುಕ್ಕು ಹಿಡಿದ ನಾಲ್ಕು ಕಂಟ್ರಿ ಪಿಸ್ತೂಲುಗಳು ತಾಲೂಕಿನ ವಾಘವಡೆ ಗ್ರಾಮದ ಹೊರವಲಯದ ಚರಂಡಿಯಲ್ಲಿ ಪತ್ತೆಯಾಗಿವೆ. ಗ್ರಾಮದ ಹೊರವಲಯದ ಚರಂಡಿಯ ಕಸದಲ್ಲಿ ಬಿದ್ದಿದ್ದ ನಾಲ್ಕು ಕಂಟ್ರಿ ಪಿಸ್ತೂಲುಗಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಪಿಸ್ತೂಲುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಪಿಸ್ತೂಲುಗಳು ಇಲ್ಲಿಗೆ ಹೇಗೆ ಬಂದವು?,
ಯಾರು ಇವುಗಳನ್ನು ಎಸೆದಿರಬಹುದು?, ಇದಕ್ಕೆ ಏನಾದರೂ ಅಪರಾಧ ಪ್ರಕರಣದ ಹಿನ್ನೆಲೆ ಇದೆಯೇ ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 15-20 ವರ್ಷಗಳ ಹಿಂದಿನ ಕಮ್ಮಾರಿಕೆಯಲ್ಲಿ ತಯಾರಾದ ಲೋಹದ ಪಿಸ್ತೂಲುಗಳು ಇದಾಗಿದ್ದು, ಸುಮಾರು ಐದಾರು ತಿಂಗಳ ಹಿಂದೆಯೇ ಇಲ್ಲಿ ಎಸೆದು ಹೋಗಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಪ್ರತಿ ಕ್ರಿಯೆ ನೀಡಿರುವ ಬೆಳಗಾವಿ ಗ್ರಾಮೀಣ ಪೊಲೀಸರು, ಈ ಕುರಿತು ವಿಜಯಪುರ ಪೊಲೀಸರನ್ನು ಸಂಪರ್ಕಿಸಲಾಗಿದೆ.
ಅನೇಕ ವರ್ಷಗಳ ಹಿಂದೆ ಇಂತಹ ಪಿಸ್ತೂಲು ಗಳು ಬಳಕೆಯಲ್ಲಿದ್ದವು. ಈಗ ಈ ತರಹದ ಪಿಸ್ತೂಲು ಗಳು ಎಲ್ಲಿಯೂ ಬಳಕೆ ಆಗಿಲ್ಲ ಎಂಬ ಮಾಹಿತಿ ಸಿಕ್ಕಿದೆ ಎಂದು ತಿಳಿಸಿದರು. ಬೆಳಗಾವಿ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ಸುನೀಲ ಕುಮಾರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಕಂಟ್ರಿ ಪಿಸ್ತೂಲುಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಮುಂಚೆ ಇಂತಹ ಕಂಟ್ರಿ ಪಿಸ್ತೂಲುಗಳು ಜಪ್ತಿ ಆಗಿ ವೆಯೇ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ