ದೇಶದಲ್ಲೇ ದಾಖಲೆ ಬರೆದ ನಾಯಕ ಬಸವರಾಜ್ ಹೊರಟ್ಟಿ: ಸಿಎಂ ಬಣ್ಣನೆ
Team Udayavani, May 18, 2022, 12:39 PM IST
ಬೆಂಗಳೂರು: ಬಸವರಾಜ್ ಹೊರಟ್ಟಿ ಅವರು 45 ವರ್ಷದಿಂದ ವಿಧಾನಪರಿಷತ್ ಸದಸ್ಯರಾಗಿ ಸಭಾಪತಿಗಳಾಗಿ, ಮಂತ್ರಿಗಳಾಗಿ, ಅಪಾರವಾದ ಅನುಭವ ಇರುವ ಒಬ್ಬ ಹಿರಿಯ ನಾಯಕ. ಅವರು ತಮ್ಮದೆ ಆದ ಶಕ್ತಿಯನ್ನು ವಿಶೇಷವಾಗಿ ಕಾಲೇಜು, ಹೈಸ್ಕೂಲ್ ಶಿಕ್ಷಕರನ್ನ ಸಂಘಟನೆ ಮಾಡಿ ಅವರ ಸಮಸ್ಯೆಯನ್ನು ನಿರಂತರ ಬಗೆಹರಿಸಿಕೊಂಡು ಬಂದವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬಸವರಾಜ ಹೊರಟ್ಟಿ ಅವರು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರಟ್ಟಿ ಅವರು ದೊಡ್ಡ ಹೋರಾಟಗಾರರು. ಅವರು ನಮ್ಮ ಪಕ್ಷಕ್ಕೆ ಸೇರಬೇಕು ಅನ್ನುವ ತೀರ್ಮಾನ ಮಾಡಿ, ನಾಯಕರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಎಲ್ಲ ಪ್ರಕ್ರಿಯೆ ಈಗ ಮುಗಿದಿದೆ. ಸಭಾಪತಿ ಸ್ಥಾನಕ್ಕೆ,ಪರಿಷತ್ ಸ್ಥಾನಕ್ಕೆ ರಾಜೀನಾಮೆ ಅಂಗೀಕಾರವಾದ ಮೇಲೆ ಅಧಿಕೃತವಾಗಿ ಬಿಜೆಪಿಗೆ ಸೇರಿದ್ದಾರೆ ಎಂದರು.
ಇದನ್ನೂ ಓದಿ:ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರ ಪರಿಹಾರ: ಸಚಿವ ಕೆ.ಗೋಪಾಲಯ್ಯ
ಹುಬ್ಬಳ್ಳಿಯಲ್ಲಿ ಬೃಹತ್ ಕಾರ್ಯಕ್ರಮ ಮಾಡಿ, ಆ ಭಾಗದಲ್ಲಿ ಪಕ್ಷಕ್ಕೆ ಸ್ವಾಗತ ಮಾಡುತ್ತೇವೆ ಅವರು ಬಿಜೆಪಿಗೆ ಬಂದಿರುವುದು ಪಕ್ಷಕ್ಕೆ ಆನೆ ಬಲ ಬಂದಿದೆ. ಬಹಳ ಸುದೀರ್ಘ ಸಾರ್ವಜನಿಕ ಜೀವನ ಅವರದ್ದು, ಇಷ್ಟು ನಿರಂತರವಾಗಿ ವಿಧಾನಪರಿಷತ್ ಪ್ರತಿನಿಧಿಯಾಗಿ ದಾಖಲೆ ಇದೆ. ಆದರೆ ದೇಶದಲ್ಲಿ ಆ ರೀತಿಯ ದಾಖಲೆ ಇಲ್ಲ. ಒಬ್ಬ ಹಿರಿಯ ನಾಯಕರನ್ನು ಬರಮಾಡಿಕೊಂಡಿರುವುದು ಬಹಳ ಸಂತೋಷ ಆಗಿದೆ ಎಂದರು.
ಹೊರಟ್ಟಿ ಅವರಿಗೆ ಎಲ್ಲ ವರ್ಗದ ಜನ ಸಂಪರ್ಕ ಇದೆ. ವಿಶೇಷವಾಗಿ ಉತ್ತರ ಕರ್ನಾಟಕ ಭಾಗಕ್ಕೆ ಶಕ್ತಿ ಬಂದಿದೆ. ಅವರಿಗೆ ಎಲ್ಲಾ ಅವಕಾಶ ಮಾಡಿಕೊಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ