ಮಂಗಳೂರಿನಲ್ಲಿ ಮತ್ತೊಂದು ಪಾಸಿಟಿವ್ ಪ್ರಕರಣ: ರಾಜ್ಯದಲ್ಲಿಂದು ಒಂದೇ ಪ್ರಕರಣ ದೃಢ
Team Udayavani, Apr 26, 2020, 12:27 PM IST
ಬೆಂಗಳೂರು: ರಾಜ್ಯದ ಕೋವಿಡ್-19 ಸೋಂಕಿತರ ಸಂಖ್ಯೆ 500 ಮುಟ್ಟಿದ್ದ ಕಾರಣ ಆತಂಕದಲ್ಲಿದ್ದ ಜನತೆಗೆ ಇಂದು ಒಂದು ಸಮಾಧಾನದ ಸುದ್ದಿ. ಯಾಕೆಂದರೆ ಶನಿವಾರ ಸಂಜೆಯಿಂದ ಇದುವರೆಗೆ ರಾಜ್ಯದಲ್ಲಿ ಕೇವಲ ಒಂದು ಸೋಂಕು ಪ್ರಕರಣ ಪತ್ತೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರಿನಲ್ಲಿ ಒಂದು ಪ್ರಕರಣ ದೃಢವಾಗಿದೆ. 47 ವರ್ಷದ ಮಹಿಳೆಗೆ ಕೋವಿಡ್-19 ಸೋಂಕು ತಾಗಿದೆ. ಸೋಂಕಿತ ಸಂಖ್ಯೆ 432ರ ಸಂಪರ್ಕದಿಂದ ಈ ಮಹಿಳೆಗೆ ಸೋಂಕು ತಾಗಿರುವುದು ಖಚಿತವಾಗಿದೆ. ಈಕೆಗೆ ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 501 ಆಗಿದೆ. ಇದರಲ್ಲಿ 18 ಜನರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಮತ್ತು 177 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ