ಮಂಗಳೂರು, ಉಡುಪಿಗೆ ದುಬೈ ಮೂಲದ ಆತಂಕ: ರಾಜ್ಯದಲ್ಲಿ ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ
Team Udayavani, May 15, 2020, 12:59 PM IST
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸ 45 ಕೋವಿಡ್-19 ಪ್ರಕರಣಗಳು ದೃಢವಾಗಿದ್ದು ಕೋವಿಡ್-19 ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ದುಬೈ ವಿಮಾನದ ಮೂಲಕ ಬಂದಿದ್ದ 20 ಜನರಿಗೆ ಕೋವಿಡ್-19 ಸೋಂಕು ತಾಗಿದ್ದು, ಮಂಗಳೂರು ಮತ್ತು ಉಡುಪಿಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಹಠಾತ್ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16, ಬೆಂಗಳೂರು ನಗರದಲ್ಲಿ 13 ಪ್ರಕರಣ, ಉಡುಪಿಯಲ್ಲಿ ಐದು, ಬೀದರ್ ನಲ್ಲಿ ಮೂರು, ಹಾಸನದಲ್ಲಿ ಮೂರು, ಚಿತ್ರದುರ್ಗ ಎರಡು, ಶಿವಮೊಗ್ಗ, ಕೋಲಾರ ಮತ್ತು ಬಾಗಲಕೋಟೆಯಲ್ಲಿ ತಲಾ ಒಂದು ಪ್ರಕರಣಗಳು ವರದಿಯಾಗಿದೆ.
ಕೋಲಾರ (1) ಮತ್ತು ಚಿತ್ರದುರ್ಗ(2) ಕ್ಕೆ ಚೆನ್ನೈ ನಿಂದ ಬಂದವರಿಗೆ ಸೋಂಕು ಇರುವುದು ದೃಢವಾಗಿದೆ. ಹಾಸನ(3) ಮತ್ತು ಶಿವಮೊಗ್ಗ (1) ಮುಂಬೈನಿಂದ ಬಂದವರಿಗೆ ಸೋಂಕು ದೃಢವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ 16 ಸೋಂಕಿತರ ಪೈಕಿ 15 ಮಂದಿ ದುಬೈ ನಿಂದ ಬಂದವರಾಗಿದ್ದರೆ ಓರ್ವ ಮಹಿಳೆ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಉಡುಪಿಯಲ್ಲಿ ದುಬೈನಿಂದ ಬಂದ ಐವರಿಗೆ ಸೋಂಕು ದೃಢವಾಗಿದೆ.
ಬೆಂಗಳೂರು ನಗರದಲ್ಲಿ ಇಬ್ಬರಿಗೆ ಸೋಂಕಿತ ಸಂಖ್ಯೆ 911ರ ಸಂಪರ್ಕದಿಂದ ಮತ್ತು ಉಳಿದ 11 ಮಂದಿಗೆ ಸೋಂಕಿತ ಸಂಖ್ಯೆ 653ರ ದ್ವಿತೀಯ ಸಂಪರ್ಕದಿಂದ ಸೋಂಕು ತಾಗಿದೆ.
ರಾಜ್ಯದಲ್ಲಿ ಇಂದು 45 ಸೋಂಕು ಪ್ರಕರಣ ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1032ಕ್ಕೆ ಏರಿದೆ. ಇದರಲ್ಲಿ 520 ಪ್ರಕರಣಗಳು ಆಕ್ಟಿವ್ ಇದ್ದು, 35 ಜನರು ಮೃತಪಟ್ಟಿದ್ದಾರೆ. 476 ಪ್ರಕರಣಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಓರ್ವ ಕೋವಿಡ್ ಅಲ್ಲದ ಕಾರಣದಿಂದ ಮೃತಪಟ್ಟಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್