ರಾಜ್ಯದಲ್ಲಿ ಕೋವಿಡ್‌-19 ಮೂರನೇ ಹಂತಕ್ಕೆ ?

ರ್‍ಯಾಂಡಮ್‌ ಪರೀಕ್ಷೆಯಲ್ಲಿ ಮೂವರಿಗೆ ಸೋಂಕು ದೃಢ; 123 ಕಂಟೈನ್ಮೆಂಟ್‌ ಝೋನ್‌ಗಳಲ್ಲೂ ಪರೀಕ್ಷೆಗೆ ಒತ್ತಾಯ

Team Udayavani, May 1, 2020, 6:15 AM IST

ರಾಜ್ಯದಲ್ಲಿ ಕೋವಿಡ್‌-19 ಮೂರನೇ ಹಂತಕ್ಕೆ ?

ಸಾಂದರ್ಭಿಕ ಚಿತ್ರ.

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಸೋಂಕಿನ ಹಿನ್ನೆಲೆಯೇ ಗೊತ್ತಾಗದ ತೀವ್ರ ಉಸಿರಾಟ ಸಮಸ್ಯೆ (ಎಸ್‌ಎಆರ್‌ಐ) ಮತ್ತು ಐಎಲ್‌ಐ (ಶೀತಜ್ವರ ಮಾದರಿಯ ಅನಾರೋಗ್ಯ) ಪ್ರಕರಣಗಳು ಹೆಚ್ಚುತ್ತಿದ್ದರೆ, ಮತ್ತೂಂದೆಡೆ “ರ್‍ಯಾಂಡಮ್‌ ಟೆಸ್ಟ್‌’ನಲ್ಲೂ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗುತ್ತಿವೆ. ಲಾಕ್‌ಡೌನ್‌ನ ಅಂತಿಮ ಹಂತದಲ್ಲಿ ಕಂಡುಬರುತ್ತಿರುವ ಈ ಹೊಸ ಬೆಳವಣಿಗೆ ರಾಜ್ಯವು ತನಗರಿವಿಲ್ಲದೆ ಸೋಂಕಿನ ಮೂರನೇ ಹಂತ ಪ್ರವೇಶಿಸುತ್ತಿದೆಯೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

ತಜ್ಞರ ಪ್ರಕಾರ ವಿದೇಶ ಪ್ರಯಾಣ, ಸೋಂಕುಪೀಡಿತ ಪ್ರದೇಶ ಪ್ರಯಾಣದ ಹಿನ್ನೆಲೆ ಅಥವಾ ಸೋಂಕುಪೀಡಿತ ವ್ಯಕ್ತಿಯ ಸಂಪರ್ಕ ಹಿನ್ನೆಲೆ ಹೊಂದಿರದ ವ್ಯಕ್ತಿಯಲ್ಲೂ ಸೋಂಕು ಕಾಣಿಸಿಕೊಂಡರೆ ಅಲ್ಲಿ ಸೋಂಕು ಸಮುದಾಯಕ್ಕೆ ಹರಡಿದೆ ಎಂದರ್ಥ.

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ದೃಢಪಡುತ್ತಿರುವ ಪ್ರಕರಣಗಳು ತಜ್ಞರ ಈ ವಿಶ್ಲೇಷಣೆಗೆ ಪೂರಕವಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ 3ನೇ ಹಂತಕ್ಕೆ ಕಾಲಿಟ್ಟಿರುವುದು ಹೆಚ್ಚುಕಡಿಮೆ ಖಚಿತ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ 3 ವಾರಗಳಲ್ಲಿ ಎಸ್‌ಎಆರ್‌ಐ ಸಂಬಂಧಿತ 31 ಮತ್ತು ಐಎಲ್‌ಐನಿಂದ ಬಳಲುತ್ತಿರುವ 11 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ ಐವರಿಗೆ ಮಾತ್ರ ಪ್ರಯಾಣ ಹಿನ್ನೆಲೆ ಅಥವಾ ಪೀಡಿತರ ಸಂಪರ್ಕ ಇದೆ. ಉಳಿದ 37 ಮಂದಿಯ ಸೋಂಕಿನ ಹಿನ್ನೆಲೆ ಪತ್ತೆಯಾಗಿಲ್ಲ. ಈ ಎಲ್ಲ ಪ್ರಕರಣಗಳೂ ಕಂಟೈನ್ಮೆಂಟ್‌ ಝೋನ್‌ನಲ್ಲೇ ಪತ್ತೆಯಾಗಿವೆ.

ಖಚಿತಪಡಿಸಿಕೊಳ್ಳುವುದು ಅಗತ್ಯ
ಇತ್ತೀಚೆಗೆ ಸೋಂಕುಪೀಡಿತರ ಸಂಪರ್ಕ ಹಿನ್ನೆಲೆ ಹೊಂದಿರದ ಎಸ್‌ಎಆರ್‌ಐ ಮತ್ತು ಐಎಲ್‌ಐ ಪ್ರಕರಣಗಳು ಹೆಚ್ಚುತ್ತಿದ್ದು, ಅಂತಹ ಪ್ರದೇಶಗಳಲ್ಲಿ ಸೋಂಕು ಸಮು ದಾಯಕ್ಕೆ ಹರಡಿದೆ. ನಾವು ಬಹುತೇಕ ಮೂರನೇ ಹಂತದಲ್ಲಿದ್ದೇವೆ. ಹೀಗಾ ಗಿಯೇ ಎಲ್ಲ ಐಎಲ್‌ಐ ಮತ್ತು ಎಸ್‌ಎಆರ್‌ಐ ರೋಗಿಗಳನ್ನು ಪರೀಕ್ಷಿಸಲು ಸೂಚಿಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಸ್ಪಷ್ಟಪಡಿಸಿದ್ದಾರೆ.

ಮುಖ್ಯವಾಗಿ ಕಂಟೈನ್ಮೆಂಟ್‌ ಪ್ರದೇಶ ದಲ್ಲಿ ಹಿನ್ನೆಲೆ ಹೊಂದಿರದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟರೆ ಆ ಪ್ರದೇಶದಲ್ಲಿ ಸೋಂಕು ಸಮುದಾಯಕ್ಕೆ ಹರಡಿದೆ ಎಂದರ್ಥ. ಈ ಹಿನ್ನೆಲೆಯಲ್ಲಿ ಮೂರನೇ ಹಂತ ಪ್ರವೇಶಿಸಿರುವುದನ್ನು ರ್‍ಯಾಂಡಮ್‌ ಪರೀಕ್ಷೆಯ ಜತೆಗೆ ಪೂರಕ ಕ್ರಮಗಳ ಮೂಲಕ ಶೀಘ್ರ ಖಚಿತಪಡಿಸಿಕೊಳ್ಳುವ ಆವಶ್ಯಕತೆ ಇದೆ ಎಂದು ಜಯದೇವ ಹೃದ್ರೋಗ ವಿಜ್ಞಾನಗಳ ಸಂಶೋಧನ ಸಂಸ್ಥೆಯ ನಿರ್ದೇಶಕ ಡಾ| ಸಿ.ಎನ್‌. ಮಂಜುನಾಥ್‌ ಹೇಳಿದ್ದಾರೆ.

ಪಾದರಾಯನಪುರದಲ್ಲಿ ನಡೆದ ರ್‍ಯಾಂಡಮ್‌ ಪರೀಕ್ಷೆಯಲ್ಲಿ ಯಾವುದೇ ಸಂಪರ್ಕ ಹಿನ್ನೆಲೆ ಇಲ್ಲದ ಆಯ್ದ 71 ಮಂದಿಗೆ ಪರೀಕ್ಷೆ ನಡೆಸಿ ದಾಗ ಮೂವರಲ್ಲಿ ದೃಢಪಟ್ಟಿದೆ.

ಪಾದರಾಯನಪುರಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಖಾಸಗಿ ವಾಹಿನಿ ಕೆಮರಾ ಮನ್‌ ಸಹಿತ ಆರು ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಉದ್ದೇಶಿತ ಪ್ರದೇಶದಲ್ಲಿ ಸಮುದಾಯಕ್ಕೆ ಸೋಂಕು ಹರಡಿದೆ ಎಂದು ಖಚಿತಪಟ್ಟಂತಾಗಿದೆ. ಒಂದು ವೇಳೆ ಇಲ್ಲಿ ಹೆಚ್ಚು ಪರೀಕ್ಷೆ ಮಾಡಿದರೆ, ಇನ್ನಷ್ಟು ಪ್ರಕರಣಗಳು ಪತ್ತೆಯಾಗು ವುದರಲ್ಲಿ ಅನುಮಾನವಿಲ್ಲ ಎಂದು ಹೆಸರು ಹೇಳಲಿಚ್ಛಿಸದ ಹಿರಿಯ ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ಕಂಟೈನ್ಮೆಂಟ್‌ನಲ್ಲೂ ರ್‍ಯಾಂಡಮ್‌ ಪರೀಕ್ಷೆ
ರಾಜ್ಯದ ಕಂಟೈನ್ಮೆಂಟ್‌ ಪ್ರದೇಶ ಗಳಲ್ಲಿಯೇ ಎಸ್‌ಎಆರ್‌ಐ ಮತ್ತು ಐಎಲ್‌ಐ ಹಿನ್ನೆಲೆಯ ಒಟ್ಟು 41 ಪ್ರಕರಣಗಳು ದೃಢಪಟ್ಟಿವೆ. ಅಲ್ಲದೆ ಪಾದರಾಯನಪುರದಲ್ಲಿ ರ್‍ಯಾಂಡಮ್‌ ಪರೀಕ್ಷೆಯಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ನಿಯಂತ್ರಿತ ವಲಯಗಳಲ್ಲೂ ಈ ಪರೀಕ್ಷೆ ನಡೆಸಬೇಕು ಎನ್ನುವ ಒತ್ತಾಯ ಕೇಳಿಬರುತ್ತಿದೆ. ಸದ್ಯ ರಾಜ್ಯದಲ್ಲಿ ಒಟ್ಟು 123 ಕಂಟೈನ್ಮೆಂಟ್‌ ವಲಯಗಳಿವೆ. ಈ ಪ್ರದೇಶಗಳಲ್ಲಿ ಒಟ್ಟು 73,970 ಮನೆಗಳಿದ್ದು, 4,12,278 ಮಂದಿ ವಾಸುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತೀವ್ರ ಉಸಿರಾಟ ಸಮಸ್ಯೆ ಹಿನ್ನೆಲೆ ಹೊಂದಿರುವ
ಕೋವಿಡ್‌-19 ಪೀಡಿತರು ಈ ಹಿಂದೆ ಯಾರಾದರೂ ಸೋಂಕು ಪೀಡಿತರನ್ನು ಸಂಪರ್ಕಿಸಿರಲೇಬೇಕು. ಒಂದು ವೇಳೆ ಸಂಪರ್ಕಿತರ ಪತ್ತೆಯಾಗದೆ ಸೋಂಕು ಹೆಚ್ಚಳವಾಗಿದೆ ಎಂದಾದರೆ ರ್‍ಯಾಂಡಮ್‌ ಪರೀಕ್ಷೆ ಮಾಡಿ ಸಮುದಾಯಕ್ಕೆ ಹರಡಿದೆಯೇ ಎಂದು ಖಚಿತಪಡಿಸಿ ಕೊಳ್ಳಬೇಕಾಗುತ್ತದೆ.
-ಡಾ| ಬಿ.ಜಿ. ಪ್ರಕಾಶ್‌ ಕುಮಾರ್‌, ಆರೋಗ್ಯ ಇಲಾಖೆ ಜಂಟಿ ನಿರ್ದೇಶಕರು, ಸಾಂಕ್ರಾಮಿಕ ರೋಗಗಳ ವಿಭಾಗ.

-  ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.